ಮೈಸೂರು ಜಿಲ್ಲೆಯಲ್ಲಿ 148 ಗ್ರಾ.ಪಂ.ಗಳಿಗೆ ಚುನಾವಣೆ!
ಬೆಂಗಳೂರು, ಡಿ. 22: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮೈಸೂರು ಜಿಲ್ಲೆಯ ಐದು ತಾಲೂಕುಗಳಲ್ಲಿ ಮತದಾನ ಆರಂಭವಾಗಿದೆ. ಮೊದಲನೇ ಹಂತದಲ್ಲಿ ಹುಣಸೂರು, ಕೆ.ಆರ್. ನಗರ, ಪಿರಿಯಾಪಟ್ಟಣ, ಎಚ್.ಡಿ. ಕೋಟೆ ಮತ್ತು ಸರಗೂರು ತಾಲ್ಲೂಕುಗಳ ಒಟ್ಟು 148 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿದೆ.
ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮೈಸೂರು ಜಿಲ್ಲೆಯ ಐದು ತಾಲೂಕುಗಳಲ್ಲಿ ಮತದಾನ ಆರಂಭವಾಗಿದೆ. #Mysuru #Grampanchayatelections pic.twitter.com/i89T2OYpwi
— oneindiakannada (@OneindiaKannada) December 22, 2020
ಒಟ್ಟು 949 ಕ್ಷೇತ್ರಗಳಲ್ಲಿ, 2180 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, 125 ಸದಸ್ಯರು ಈಗಾಗಲೇ ಅವಿರೋಧ ಆಯ್ಕೆಯಾಗಿದ್ದಾರೆ. 6 ವಾರ್ಡ್ಗಳಿಗೆ ನಾಮಪತ್ರ ಸಲ್ಲಿಕೆ ಆಗಿಲ್ಲ. ಒಟ್ಟು 6,165 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಮತಗಟ್ಟೆ ಅಧಿಕಾರಿ, ಮತದಾನಾಧಿಕಾರಿ ಸೇರಿ ಒಟ್ಟು 5,052 ಸಿಬ್ಬಂದಿಯನ್ನು ಚುನಾವಣಾ ಆಯೋಗ ನೇಮಿಸಿದೆ.
ಮತಗಟ್ಟೆ ಸಿಬ್ಬಂದಿ ಕಳುಹಿಸಲು ಹಾಗೂ ಕರೆತರು 176 ಕೆಎಸ್ಆರ್ಟಿಸಿ ಬಸ್, 17. ಮಿನಿ ಬಸ್, 7 ಜೀಪ್ ಬಳಕೆ ಮಾಡಲಾಗುತ್ತಿದೆ. ನಿನ್ನೆ (ಡಿ.21) ಮಧ್ಯರಾತ್ರಿ 12 ರಿಂದ ಇಂದು (ಡಿ.22) ಮಧ್ಯರಾತ್ರಿ 12 ವರಗೆ ಒಣ ದಿನ ಘೋಷಣೆ ಮಾಡಲಾಗಿದೆ. ಹೀಗಾಗಿ ಚುನಾವಣೆ ನಡೆಯುವ ಗ್ರಾಮಗಳ ವ್ಯಾಪ್ತಿಯಲ್ಲಿ ಯಾವುದೇ ಜಾತ್ರೆ, ಸಂತೆ ಮುಂತಾದ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ಸೂಚನೆಯಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಮತಗಟ್ಟೆ ಅಧಿಕಾರಿಗಳು ಹಾಗೂ ಪೋಲಿಂಗ್ ಎಜೆಂಟರು, ಮತಗಟ್ಟೆ ಅಧಿಕಾರಿಗಳು, ಫೇಸ್ ಶೀಲ್ಡ್, ಮಾಸ್ಕ್ ಮತ್ತು ಹ್ಯಾಂಡ್ ಗ್ಲೌಸ್ ಧರಿಸುವುದು ಕಡ್ಡಾಯವಾಗಿದೆ. ಮತದಾರರು ಮತಚಲಾಯಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಿರಬೇಕು. ಪ್ರತಿ ಮತಗಟ್ಟೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನೇಮಕ ಮಾಡಲಾಗಿದೆ. ಮತಗಟ್ಟೆ ಸಿಬ್ಬಂದಿ, ಮತದಾರರಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಬಳಕೆ ಮಾಡಲಾಗುತ್ತಿದೆ. ಕೋವಿಡ್ ಲಕ್ಷಣ ಕಂಡು ಬಂದವರಿಗೆ ತಕ್ಷಣ ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ.

ಕೊರೊನಾ ವೈರಸ್ ಸೋಂಕಿತರಿಗೆ ಮತದಾನದ ಕೊನೆಯ ಒಂದು ಗಂಟೆಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications