ಮೈಸೂರಿನಲ್ಲಿ ಒಡೆಯರ್ ಪುಣ್ಯಾರಾಧನೆ
ಮೈಸೂರು, ಡಿ.1 : ಯದುವಂಶದ ಕೊನೆಯ ಕುಡಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪ್ರಥಮ ವರ್ಷದ ಪುಣ್ಯಾರಾಧನೆ ಇಂದು ಅಂಬಾವಿಲಾಸ ಅರಮನೆ ಮತ್ತು ಒಡೆಯರ್ ಸಮಾಧಿ ಇರುವ ಮಧುವನದಲ್ಲಿ ನಡೆಯಿತು. ಎರಡು ಕಡೆ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಅರಮನೆಯ ಕಲ್ಯಾಣಮಂಟಪದಲ್ಲಿ ಸೋಮವಾರ ಮುಂಜಾನೆಯಿಂದಲೇ ಪುಣ್ಯಾರಾಧನೆಯ ವಿಧಿವಿಧಾನಗಳು ಆರಂಭಗೊಂಡವು. ಅರಮನೆಯ ಎಲ್ಲ ದೇವಾಲಯಗಳ ಪುರೋಹಿತರು, ಆಗಮಿಕರು ಇವುಗಳನ ನೇತೃತ್ವ ವಹಿಸಿದ್ದರು.

ಮಧ್ಯಾಹ್ನ 12 ಗಂಟೆಗೆ ಒಡೆಯರ್ ಅಂತ್ಯ ಸಂಸ್ಕಾರ ನೆರವೇರಿಸಿದ್ದ ಕಾಂತರಾಜೇ ಅರಸ್ ಅರಮನೆಯಲ್ಲಿ ಶ್ರೀರಾಮನ ಪಟ್ಟಾಭಿಷೇಕ ಮಾಡಿದರು. ನಂತರ ವಿವಿಧ ಮಠ ವಿವಿಧ ಮಠಗಳ ಗುರುಗಳ ಪಾದಪೂಜೆ ಮಾಡಿದರು. ಮೂರು ದಿನಗಳಿಂದ ನಡೆಯುತ್ತಿದ್ದ ಪುಣ್ಯಾರಾಧನೆಯ ಕಾರ್ಯಕ್ರಮಗಳು ಇಂತು ಅಂತ್ಯಗೊಂಡಿದ್ದು, ರಾಣಿ ಪ್ರಮೋದಾ ದೇವಿ ಅವರು ಎಲ್ಲಾ ಕಾರ್ಯಕ್ರಮಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. [ಅಳಿವಿನ ಅಂಚಿನಲ್ಲಿ ಮೈಸೂರಿನ ಆಳರಸರ ಮಧುವನ]
ಒಡೆಯರ್ ಅವರ ಪತ್ನಿ ಪ್ರಮೋದಾದೇವಿ ಒಡೆಯರ್ ಅವರು ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಮಧುವನದಲ್ಲಿ ಒಡೆಯರ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಒಡೆಯರ್ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಕಪ್ಪು ಗ್ರಾನೈಟ್ ಬಳಸಿ ಒಡೆಯರ್ ಸಮಾಧಿಯನ್ನು ನಿರ್ಮಿಸಲಾಗಿದೆ. [ಒಡೆಯರಿಗೆ ಚಿತ್ರನಮನ]
ಸಾರ್ವಜನಿಕರಿಗೆ ಅನ್ನ ಸಂತರ್ಪಣೆ : ಕೋಟೆ ಆಂಜನೇಯ ದೇವಸ್ಥಾನ ಬಳಿ ಹಾಗೂ ಒಡೆಯರ್ ಅವರ ಸಮಾಧಿ ಇರುವ ಸ್ಥಳ ಮಧುವನದ ಬಳಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಹಿನ್ನಲೆಯಲ್ಲಿ ಇಂದು ಅರಮನೆಗೆ ಸಾರ್ವನಿಕರ ಪ್ರವೇಶ ನಿಷೇಧಿಸಲಾಗಿತ್ತು.
ಸರ್ಕಾರದ ಪರವಾಗಿ ಗೃಹ ಸಚಿವ ಕೆ.ಜೆ.ಜಾರ್ಜ್, ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಜಿ.ಟಿ.ದೇವೇಗೌಡ, ಕೆಎಸ್ಸಿಎ ಕಾರ್ಯದರ್ಶಿ ಬಿಜ್ರೇಶ್ ಪಟೇಲ್ ಮುಂತಾದವರು ಇಂದಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.
ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಕಳೆದ ವರ್ಷದ ಡಿಸೆಂಬರ್ 10ರಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದರು. ಹಿಂದೂ ಪಂಚಾಗದ ಪ್ರಕಾರ ಮೂರು ದಿನಗಳ ಹಿಂದೆ ಪುಣ್ಯಾರಾಧನೆ ಕಾರ್ಯಕ್ರಮಗಳನ್ನು ಅರಮನೆಯಲ್ಲಿ ಆರಂಭಿಸಲಾಗಿತ್ತು. ಇಂದು ಅದು ಮುಕ್ತಾಯಗೊಂಡಿದೆ.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications