ಮೈಸೂರಿನಲ್ಲಿ ಒಡೆಯರ್ ಪುಣ್ಯಾರಾಧನೆ
ಮೈಸೂರು, ಡಿ.1 : ಯದುವಂಶದ ಕೊನೆಯ ಕುಡಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪ್ರಥಮ ವರ್ಷದ ಪುಣ್ಯಾರಾಧನೆ ಇಂದು ಅಂಬಾವಿಲಾಸ ಅರಮನೆ ಮತ್ತು ಒಡೆಯರ್ ಸಮಾಧಿ ಇರುವ ಮಧುವನದಲ್ಲಿ ನಡೆಯಿತು. ಎರಡು ಕಡೆ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಅರಮನೆಯ ಕಲ್ಯಾಣಮಂಟಪದಲ್ಲಿ ಸೋಮವಾರ ಮುಂಜಾನೆಯಿಂದಲೇ ಪುಣ್ಯಾರಾಧನೆಯ ವಿಧಿವಿಧಾನಗಳು ಆರಂಭಗೊಂಡವು. ಅರಮನೆಯ ಎಲ್ಲ ದೇವಾಲಯಗಳ ಪುರೋಹಿತರು, ಆಗಮಿಕರು ಇವುಗಳನ ನೇತೃತ್ವ ವಹಿಸಿದ್ದರು.

ಮಧ್ಯಾಹ್ನ 12 ಗಂಟೆಗೆ ಒಡೆಯರ್ ಅಂತ್ಯ ಸಂಸ್ಕಾರ ನೆರವೇರಿಸಿದ್ದ ಕಾಂತರಾಜೇ ಅರಸ್ ಅರಮನೆಯಲ್ಲಿ ಶ್ರೀರಾಮನ ಪಟ್ಟಾಭಿಷೇಕ ಮಾಡಿದರು. ನಂತರ ವಿವಿಧ ಮಠ ವಿವಿಧ ಮಠಗಳ ಗುರುಗಳ ಪಾದಪೂಜೆ ಮಾಡಿದರು. ಮೂರು ದಿನಗಳಿಂದ ನಡೆಯುತ್ತಿದ್ದ ಪುಣ್ಯಾರಾಧನೆಯ ಕಾರ್ಯಕ್ರಮಗಳು ಇಂತು ಅಂತ್ಯಗೊಂಡಿದ್ದು, ರಾಣಿ ಪ್ರಮೋದಾ ದೇವಿ ಅವರು ಎಲ್ಲಾ ಕಾರ್ಯಕ್ರಮಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. [ಅಳಿವಿನ ಅಂಚಿನಲ್ಲಿ ಮೈಸೂರಿನ ಆಳರಸರ ಮಧುವನ]
ಒಡೆಯರ್ ಅವರ ಪತ್ನಿ ಪ್ರಮೋದಾದೇವಿ ಒಡೆಯರ್ ಅವರು ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಮಧುವನದಲ್ಲಿ ಒಡೆಯರ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಒಡೆಯರ್ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಕಪ್ಪು ಗ್ರಾನೈಟ್ ಬಳಸಿ ಒಡೆಯರ್ ಸಮಾಧಿಯನ್ನು ನಿರ್ಮಿಸಲಾಗಿದೆ. [ಒಡೆಯರಿಗೆ ಚಿತ್ರನಮನ]
ಸಾರ್ವಜನಿಕರಿಗೆ ಅನ್ನ ಸಂತರ್ಪಣೆ : ಕೋಟೆ ಆಂಜನೇಯ ದೇವಸ್ಥಾನ ಬಳಿ ಹಾಗೂ ಒಡೆಯರ್ ಅವರ ಸಮಾಧಿ ಇರುವ ಸ್ಥಳ ಮಧುವನದ ಬಳಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಹಿನ್ನಲೆಯಲ್ಲಿ ಇಂದು ಅರಮನೆಗೆ ಸಾರ್ವನಿಕರ ಪ್ರವೇಶ ನಿಷೇಧಿಸಲಾಗಿತ್ತು.
ಸರ್ಕಾರದ ಪರವಾಗಿ ಗೃಹ ಸಚಿವ ಕೆ.ಜೆ.ಜಾರ್ಜ್, ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಜಿ.ಟಿ.ದೇವೇಗೌಡ, ಕೆಎಸ್ಸಿಎ ಕಾರ್ಯದರ್ಶಿ ಬಿಜ್ರೇಶ್ ಪಟೇಲ್ ಮುಂತಾದವರು ಇಂದಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.
ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಕಳೆದ ವರ್ಷದ ಡಿಸೆಂಬರ್ 10ರಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದರು. ಹಿಂದೂ ಪಂಚಾಗದ ಪ್ರಕಾರ ಮೂರು ದಿನಗಳ ಹಿಂದೆ ಪುಣ್ಯಾರಾಧನೆ ಕಾರ್ಯಕ್ರಮಗಳನ್ನು ಅರಮನೆಯಲ್ಲಿ ಆರಂಭಿಸಲಾಗಿತ್ತು. ಇಂದು ಅದು ಮುಕ್ತಾಯಗೊಂಡಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications