Get Updates
Get notified of breaking news, exclusive insights, and must-see stories!

KRS Dam Water: ಕೆಆರ್‌ಎಸ್‌ ಜಲಾಶಯದಲ್ಲಿ ಕುಸಿದ ನೀರಿನ ಮಟ್ಟ

ಬೇಸಿಗೆಯ ಬಿಸಿ ತೀವ್ರವಾಗುತ್ತಿದ್ದಂತೆ ನದಿ, ಜಲಾಶಯಗಳು ಬತ್ತುತ್ತಿವೆ. ಬೆಂಗಳೂರಿನಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ, ಈ ಬೆನ್ನಲ್ಲೇ ಮತ್ತೊಂದು ಆತಂಕಕಾರಿ ಸುದ್ದಿ ಬಂದಿದೆ. ಹೌದು, ಕೃಷ್ಣರಾಜಸಾಗರದಲ್ಲಿ ನೀರಿನ ಮಟ್ಟ ಮತ್ತಷ್ಟು ಕುಸಿತ ಕಂಡಿದೆ.

2023ರಲ್ಲಿ ಮಳೆಯ ಅಭಾವ ಮತ್ತು ಬೇಸಿಗೆಯಲ್ಲಿ ಅತಿಯಾದ ತಾಪಮಾನದಿಂದ ಕೆಆರ್‌ಎಸ್ ಅಣೆಕಟ್ಟಿನಲ್ಲಿ ನೀರಿನ ಮಟ್ಟವು ಆತಂಕಕಾರಿ ಪ್ರಮಾಣದಲ್ಲಿ ಕಡಿಮೆಯಾಗುತ್ತಿರುವುದರಿಂದ ಪರಿಸ್ಥಿತಿಯು ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ.

Water level at KRS Dam drops to 87 31 ft amidst intense heat wave

ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕ್ಷೀಣಿಸುತ್ತಿರುವುದರಿಂದ, ಮೈಸೂರು ನಗರ ಪಾಲಿಕೆ ಮತ್ತು ಇತರ ಪುರಸಭೆಗಳು ತುರ್ತು ಕ್ರಮಗಳನ್ನು ಅವಲಂಬಿಸಬೇಕಾಗಿದೆ, ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಟ್ಯಾಂಕರ್‌ಗಳ ಮೂಲಕ ನೀರನ್ನು ರವಾನಿಸಲು ಒತ್ತಾಯಿಸಲಾಗಿದೆ.

124.80 ಅಡಿ ಗರಿಷ್ಠ ಸಾಮರ್ಥ್ಯದ ಕೆಆರ್‌ಎಸ್ ಅಣೆಕಟ್ಟು ಬುಧವಾರ 87.45 ಅಡಿಗೆ ಕುಸಿದಿದ್ದು, ಗುರುವಾರ ಮಟ್ಟ 87.31 ಅಡಿ ಇದೆ. ಪ್ರಸ್ತುತ, ಕುಡಿಯುವ ನೀರಿನ ಉದ್ದೇಶಕ್ಕಾಗಿ ಜಲಾಶಯದಿಂದ 883 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಮೈಸೂರು ಹೊರತುಪಡಿಸಿ, ಈ ಅಣೆಕಟ್ಟು ಮಂಡ್ಯ ಮತ್ತು ಬೆಂಗಳೂರಿನ 1.4 ಕೋಟಿ ಜನರಿಗೆ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುತ್ತದೆ.

ಮಳೆ ಬರದಿದ್ದರೆ ಸಮಸ್ಯೆ ಗಂಭೀರ

ಶೀಘ್ರದಲ್ಲಿ ಮಳೆ ಬರದೇ ಇದ್ದರಎ ಮೈಸೂರು, ಮಂಡ್ಯ ಮತ್ತು ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಲಿದೆ. ಈ ಬಾರಿ ಅವಧಿಗೆ ಮುನ್ನವೇ ಮುಂಗಾರು ಶುರುವಾದರೆ ಸಾಕು ಎಂದು ಕಾಯುವಂತಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಒಂದೊಂದು ಭಾಗದಲ್ಲಿ ಮಳೆಯಾಗುತ್ತಿದೆ. ಕಳೆದ ವಾರ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಕೂಡ ಮಳೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಸಾಕು ಎನ್ನುವಂತಹ ಸ್ಥಿತಿ ಇದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+