ರೈತರಿಗೆ ಹರ್ಷ: ಕಬಿನಿ ಜಲಾಶಯದಿಂದ ಕೆರೆಗಳಿಗೆ ನೀರು ಬಿಡುಗಡೆ
ಮೈಸೂರು, ಜುಲೈ 5: ಜಿಲ್ಲೆಯ ಕಬಿನಿ ಜಲಾಶಯದ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲು ಕೈಗೊಂಡಿರುವ ತೀರ್ಮಾನಗಳಿಂದ ರೈತರು ಹರ್ಷಗೊಂಡಿದ್ದಾರೆ. ಕಳೆದ ಒಂದೆರಡು ವಾರಗಳಿಂದ ಕೇರಳದಲ್ಲಿ ಮಳೆ ಕ್ಷೀಣಗೊಂಡಿರುವ ಕಾರಣ ಜಲಾಶಯಕ್ಕೆ ಒಳಹರಿವು ಕಡಿಮೆಯಾಗಿದೆ. ಮುಂದೆ ಮುಂಗಾರು ಚೇತರಿಸಿಕೊಂಡರೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಹೆಚ್ಚಾಗಿದೆ.
ಇದೀಗ ಜಲಾಶಯದಿಂದ ಕೆರೆಗಳಿಗೆ ನೀರು ಹರಿಸಲು ಸರ್ಕಾರ ಕೈಗೊಂಡಿರುವ ಕ್ರಮದಿಂದ ರೈತರಿಗೆ ಸಹಾಯವಾಗಿದೆ. ಆದರೆ ಭತ್ತದ ಬೆಳೆಗೆ ನೀರು ಹರಿಸುವುದು ವಿಳಂಬವಾಗಿರುವ ಕಾರಣ ಕಬಿನಿ ನೀರಾಶ್ರಿತ ರೈತರು ಗೊಂದಲಕ್ಕೀಡಾಗಿದ್ದಾರೆ. ಈ ನಡುವೆ ಮಳೆಯನ್ನು ನಂಬಿ ಬೆಳೆದ ಜೋಳ ಮಳೆ ಬಾರದೆ ಒಣಗುವಂತಾಗಿದೆ. ಸದ್ಯ ಕೆರೆಗಳಿಗೆ ನೀರು ತುಂಬಿಸುವ ತೀರ್ಮಾನದಿಂದ ರೈತರಿಗೆ ಅನುಕೂಲವಾಗುವುದಂತು ಖಚಿತ.

ಸದ್ಯ ಕಬಿನಿ ಜಲಾಶಯದಲ್ಲಿ 14.5 ಟಿಎಂಸಿ ನೀರಿದ್ದು, ಈ ಪೈಕಿ ಒಂದು ಟಿಎಂಸಿ ನೀರನ್ನು 15 ದಿನಗಳ ಅವಧಿಯಲ್ಲಿ 52 ಕೆರೆಗಳಿಗೆ ತುಂಬಿಸಲು ಹಾಗೂ ಐದು ಟಿಎಂಸಿ ನೀರನ್ನು ನೀರಾವರಿ ಉದ್ದೇಶಕ್ಕೆ ಬಳಸಿಕೊಳ್ಳುವ ಉದ್ದೇಶ ಹೊಂದಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, "ಕಬಿನಿ ಜಲಾಶಯ ವ್ಯಾಪ್ತಿಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಇಂದಿನ ನೀರಿನ ಲಭ್ಯತೆ ಮತ್ತು ಹಿಂದಿನ ವರ್ಷಗಳ ಅನುಭವದ ಮೇಲೆ ಈಗ ಈ ವ್ಯಾಪ್ತಿಯ ಎಲ್ಲಾ 52 ಕೆರೆಗಳಿಗೆ ನೀರು ತುಂಬಿಸಲು ಜಲಾಶಯದಿಂದ ನೀರು ಬಿಡಲಾಗುವುದು. ಕಬಿನಿಯಲ್ಲಿ ಉದ್ಯಾನವನ ನಿರ್ಮಾಣ ಮಾಡುವ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ತೆಗೆದುಕೊಳ್ಳಲು ಉದ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರಯತ್ನ ಆಗುತ್ತಿದೆ. ಒಂದೆರಡು ಸಂಸ್ಥೆಯವರು ಆಸಕ್ತಿ ವಹಿಸಿ ಮುಂದೆ ಬಂದಿದ್ದಾರೆ,'' ಎಂದು ತಿಳಿಸಿದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications