ಆಡಿಯೋ ರಿಲೀಸ್ನಿಂದ ನಮಗೆ ಯಾವ ಮುಜುಗರವೂ, ಹೆದರಿಕೆಯೂ ಆಗಿಲ್ಲ: ರಾಮ್ ದಾಸ್
ಮೈಸೂರು, ಫೆಬ್ರವರಿ 9 : ನಮಗೆ ಅವರ ಆಡಿಯೋ ರಿಲೀಸ್ ಮಾಡಿದ್ದರಿಂದ ಯಾವ ಮುಜುಗರವೂ ಆಗಿಲ್ಲ ಎಂದು ಬಿಜೆಪಿ ಶಾಸಕ ರಾಮದಾಸ್ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ರಾಮದಾಸ್, ಸಿಎಂ ಕುಮಾರಸ್ವಾಮಿ ಆಡಿಯೋ ರಿಲೀಸ್ ವಿಚಾರ, ಆ ಬಗ್ಗೆ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಮಾತ್ರ ಗೊತ್ತಿರೋದು. ಈ ಬಗ್ಗೆ ಸ್ಪೀಕರ್ ಅವರು ಸೋಮವಾರ ತನಿಖೆಗೆ ಆದೇಶ ಮಾಡುತ್ತೇನೆ ಎಂದು ಅಂತ ಹೇಳಿದ್ದಾರೆ. ಇದರಿಂದ ನಮಗೇನೂ ಮುಜುಗರ ಆಗಿಲ್ಲ. ಈ ಕುರಿತು ಸದನದಲ್ಲಿ ಯಾವ ರೀತಿ ತೀರ್ಮಾನ ಆಗುತ್ತೋ ನೋಡುತ್ತೇನೆ ಎಂದರು.
ಬಜೆಟ್ ಮಂಡನೆ ವೇಳೆ ಅಯವ್ಯಯದ ಪುಸ್ತಕ ನೀಡದಿರುವುದ್ದಕ್ಕೆ ರಾಮದಾಸ್ ಆಕ್ರೋಶ ವ್ಯಕ್ತಪಡಿಸಿದರು. ತಮಗೆ ಬೇಕಾದ ಘೋಷಣೆ ಮಾಡಿಕೊಳ್ಳುವ ವ್ಯವಸ್ಥೆ ಮಾಡಿಕೊಂಡಿದ್ದಾರೆ. 10 ಇಂಜಿನಿರಿಂಗ್ ಕಾಲೇಜುಗಳನ್ನು ಮುಚ್ಚಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಇರುವ ಕಾಲೇಜುಗಳನ್ನು ಮುಚ್ಚಿ ಮತ್ತೊಂದು ವಿಶ್ವವಿದ್ಯಾನಿಲಯ ತೆರೆಯುವುದು ಯಾವ ನ್ಯಾಯ ? ಎಂದು ಪ್ರಶ್ನಿಸಿದರು.

ಮೈಸೂರಿಗೆ ಬಜೆಟ್ ನಲ್ಲಿ ಏನು ಕೊಡುಗೆ ನೀಡಿಲ್ಲ. ಕಸ ವಿಲೇವಾರಿ ಮಾಡಲು ಹಣ ನೀಡಬೇಕೆಂದು ಮನವಿ ಮಾಡಿದ್ದೆವು. ಇದರ ಬಗ್ಗೆ ಯಾವುದೇ ಚಕಾರ ಎತ್ತಿಲ್ಲ. ದೇವರಾಜ ಮಾರುಕಟ್ಟೆ, ವಾಣಿವಿಲಾಸ ಮಾರುಕಟ್ಟೆ ಅಭಿವೃದ್ಧಿ ಮತ್ತು ಪುನರ್ ನಿರ್ಮಾಣಕ್ಕೆ ಪತ್ರ ಬರೆದಿದ್ದೆವು. ಇದರ ಬಗ್ಗೆ ನು ಯಾವುದೇ ಚಕಾರ ಎತ್ತಿಲ್ಲ. ಈ ಮೂಲಕ ಮೈಸೂರಿಗೆ ಈ ಬಜೆಟ್ ಶೂನ್ಯ ಕೊಡುಗೆ ನೀಡಿದೆ ಎಂದು ಟೀಕಿಸಿದರು.
ಮೈಸೂರಿನಿಂದ ದೇವೆಗೌಡರು ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ಮೈಸೂರಿಗೆ ಏನು ಕೊಡುಗೆ ನೀಡಲಿಲ್ಲವೆಂದರೆ ಅವರು ಬರುವುದಿಲ್ಲ ಎಂದು ಅರ್ಥ. ವಾಜಪೇಯಿ ಆರೋಗ್ಯ ಶ್ರೀ , ಯಶಸ್ವಿನಿ, ರಾಜೀವ್ ಆರೋಗ್ಯ ಭಾಗ್ಯ, ಮುಖ್ಯಮಂತ್ರಿಗಳ ಸಾಂತ್ವನ ಹರೀಶ್ ಯೋಜನೆ, ರಾಷ್ಟೀಯ ಬಾಲ್ಯ ಸ್ವಾಸ್ಥ್ಯ ಯೋಜನೆ ಎಲ್ಲವನ್ನೂ ರದ್ದು ಮಾಡಿದ್ದಿರಿ ಎಂದು ಕಿಡಿಕಾರಿದರು.
ಅಯುಷ್ಮಾನ್ ಭಾರತ್ ಯೋಜನೆಯನ್ನು ಅರೋಗ್ಯ ಕರ್ನಾಟಕ ಜೊತೆ ವಿಲೀನಗೊಳಿಸಿದ್ದೀರಿ. ಕೇಂದ್ರ ಸರ್ಕಾರದ ಯೋಜನೆಯಲ್ಲಿ ಯಾವುದೆ ಆಸ್ಪತ್ರೆಗೆ ಹೋಗಿ 5 ಲಕ್ಷದ ವರೆಗೆ ಚಿಕಿತ್ಸೆ ಪಡೆಯಬಹುದು. ಆದರೆ ಆಯುಷ್ಮಾನ್, ಅರೋಗ್ಯ ಕರ್ನಾಟಕ ಹಲವಾರು ನಿಬಂಧನೆಗೆ ಒಳಪಡಿಸಿದ್ದೀರಿ.
ನಿರ್ದಿಷ್ಟ ಆಸ್ಪತ್ರೆಗಳಲ್ಲಿ ಮಾತ್ರ ಚಿಕಿತ್ಸೆ ನೀಡುತ್ತೀರಿ. ಆಸ್ಪತ್ರೆ ವೈದ್ಯರು ರೆಫರ್ ಮಾಡಿದರೆ ಮಾತ್ರ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಮಾಡಿಸಲು ಖಾಸಗಿಯರಿಗೆ ನೀಡಿದ್ದೀರಿ ಇದರಿಂದ ಬಡವರಿಗೆ ತೊಂದರೆಯಾಗುತ್ತಿದೆ. ಆಯುಷ್ಮಾನ್ ಭಾರತ್ ಗೆ ನಿಬಂಧನೆಗಳನ್ನು ನೀಡಿರುವ ರಾಜ್ಯ ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ದಾವೆ ಹೂಡುತ್ತೇವೆ ಎಂದು ರಾಮದಾಸ್ ವಾಗ್ದಾಳಿ ನಡೆಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications