ಮತ್ತೆ ಮುಡಿಗೇರಲಿ ಮೈಸೂರಿಗೆ ಸ್ವಚ್ಛನಗರಿ ಪಟ್ಟ: ಜಾವಗಲ್ ಶ್ರೀನಾಥ್
ಮೈಸೂರು, ಜೂನ್ 5 : ವಿಶ್ವ ಪರಿಸರ ದಿನಾಚರಣೆ(ಜೂನ್ 5)ಯ ಅಂಗವಾಗಿ ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇಗುಲದ ಮುಂಭಾಗದ ಗಿಡಕ್ಕೆ ನೀರು ಹಾಕುವ ಮೂಲಕ ಮೈಸೂರು ಸ್ವಚ್ಛತಾ ಅಭಿಯಾನದ ರಾಯಭಾರಿ, ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್, ಪರಿಸರ ರಕ್ಷಿಸುವ ಕುರಿತಾದ ಅಭಿಯಾನಕ್ಕೆ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಜಾವಗಲ್ ಶ್ರೀನಾಥ್, ಜನರಿಗೆ ಸ್ವಚ್ಚತೆ ಬಗ್ಗೆ ಇನ್ನಷ್ಟು ಅರಿವು ಬೇಕಾಗಿದೆ. ನಮ್ಮ ಮನೆ ಹೇಗೆ ಸ್ವಚ್ಛವಾಗಿ ಇಡುತ್ತೇವೊ, ಹಾಗೆ ನಮ್ಮ ಸುತ್ತಮುತ್ತಲಿನ ಪರಿಸರ ಕೂಡ ಸ್ವಚ್ಛವಾಗಿಟ್ಟುಕೊಳ್ಳಬೇಕು. ನಮ್ಮ ಮನೆಯ ಬೀದಿಯನ್ನು ನಾವೇ ಸ್ವಚ್ಛಗೊಳಿಸಿದರೂ ಅದೇನು ಅವಮಾನದ ಸಂಗತಿಯಲ್ಲ ಎಂದರು.[ಕ್ಲೀನ್ ಸಿಟಿ ಅಭಿಯಾನಕ್ಕೆ ಜಾವಗಲ್ ಶ್ರೀನಾಥ್ ರಾಯಭಾರಿ]

ಒಂದು ಯೋಜನೆ ರೂಪಿಸಿ ಮೈಸೂರು ಮತ್ತಷ್ಟು ಕ್ಲೀನ್ ಆಗಲು ಶ್ರಮಿಸಬೇಕು. ಹಾಗೆ, ಅದನ್ನ ಅನುಷ್ಠಾನಕ್ಕೆ ತರಬೇಕು. ಮೈಸೂರು ಸತತ ಎರಡು ಬಾರಿ ಸ್ವಚ್ಛನಗರಿ ಬಿರುದು ಪಡೆದಿದೆ. ದೇಶದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು ಲಕ್ಷಾಂತರ ಪ್ರವಾಸಿಗರು ಪ್ರತಿದಿನ ನಗರಕ್ಕೆ ಆಗಮಿಸುತ್ತಾರೆ. ಹಾಗಾಗಿ ನಗರದ ಸೌಂದರ್ಯವನ್ನು ಕಾಪಾಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮೂಲದಲ್ಲಿಯೇ ತ್ಯಾಜ್ಯವನ್ನು ವಿಂಗಡಿಸಿ ನೀಡಿದರೆ ಕಸದ ಸಮಸ್ಯೆ ಉಲ್ಬಣವಾಗುವುದಿಲ್ಲ ಎಂದು ಮೈಸೂರಿನ ಕುರಿತು ಕಾಳಜಿ ವ್ಯಕ್ತಪಡಿಸಿದರು.

ನಮ್ಮ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿದ್ದರೆ ಆರೋಗ್ಯವೂ ಉತ್ತಮವಾಗಿರುತ್ತದೆ. ಮೈಸೂರು ಮತ್ತೆ ಸ್ವಚ್ಛ ನಗರಿ ಬಿರುದು ಪಡೆಯುವ ನಿಟ್ಟಿನಲ್ಲಿ ಎಲ್ಲರೂ ಪಾಲಿಕೆಯೊಂದಿಗೆ ಕೈಜೋಡಿಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಿ.ರಂದೀಪ್, ಪಾಲಿಕೆ ಆಯುಕ್ತ ಜಗದೀಶ್ ಹಾಗೂ ಕೆ.ವಿ ಮಲ್ಲೇಶ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿರಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications