ನಮಗೂ ಕಾಲ ಬಂದೇ ಬರುತೈತೆ : ಮೈಸೂರಿನಲ್ಲಿ ಡಿಕೆಶಿ
Recommended Video

ಮೈಸೂರು, ಆಗಸ್ಟ್ 30 : "ದುಃಖ ದೂರ ಮಾಡುವ ದೇವಿ ದರ್ಶನ ಪಡೆಯಲು ಬಂದಿದ್ದೇನೆ. ದುಃಖ ಎಂದ್ರೆ ಕೇವಲ ನನಗಷ್ಟೇ ಅಲ್ಲ. 73 ಜನರಿಗೆ ಹಗಲು ರಾತ್ರಿ ಕಷ್ಟ ಕೊಟ್ಟಿದ್ದಾರೆ. ಎಲ್ಲಾ ಕಡೆಯಿಂದ ನೀಡುತ್ತಿರುವ ಒತ್ತಡ ಕಿರುಕುಳ ನಿವಾರಿಸಿಕೊಳ್ಳಲು ಬಂದಿದ್ದೇನೆ."
ಮೈಸೂರಿನಲ್ಲಿರುವ ತಾಯಿ ಚಾಮುಂಡೇಶ್ವರಿಯ ಕ್ಷೇತ್ರಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಆಡಿದ ಮಾತುಗಳಿವು.
ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರತಿ ಪ್ರಶ್ನೆಗೂ ಮರು ಪ್ರಶ್ನೆದಾಟಿಯಲ್ಲಿ ಉತ್ತರ ನೀಡಿದರು.
ಐಟಿ ದಾಳಿ ಬಗ್ಗೆ ಮುಖ್ಯಮಂತ್ರಿಗಳ ಹೇಳಿಕೆ ಸಮಂಜಸವಾಗಿದೆ. ವಿಜಯ್ ಮುಳುಗುಂದ ರಾಜಕೀಯವಾಗಿ ಬೆಳೆಯುತ್ತಿದ್ದ. ಗುಜರಾತ್ ಶಾಸಕರು ರಾಜ್ಯಕ್ಕೆ ಬಂದಾಗ ಉಸ್ತುವಾರಿ ವಹಿಸಿದ್ದ. ಆತನ ಮನೆ ಮೇಲೆ ದಾಳಿ ಮಾಡಿದ್ದನ್ನು ಮಾಧ್ಯಮದಿಂದ ತಿಳಿದಿದ್ದೇನೆ.

ದುಃಖ ದೂರ ಮಾಡುವ ದೇವಿ ದರ್ಶನ ಪಡೆಯಲು ಬಂದಿದ್ದೇನೆ. ದುಃಖ ಎಂದ್ರೆ ಕೇವಲ ನನಗಷ್ಟೇ ಅಲ್ಲ. 73 ಜನರಿಗೆ ಹಗಲು ರಾತ್ರಿ ಕಷ್ಟ ಕೊಟ್ಟಿದ್ದಾರೆ. ಎಲ್ಲಾ ಕಡೆಯಿಂದ ನೀಡುತ್ತಿರುವ ಒತ್ತಡ ಕಿರುಕುಳ ನಿವಾರಿಸಿಕೊಳ್ಳಲು ಬಂದಿದ್ದೇನೆ. ಮಾಧ್ಯಮದವರು ಕೂಡ ಹೆಂಡತಿ ಮಕ್ಕಳನ್ನು ಬಿಟ್ಟು ನನ್ನ ಮಾವನ ಮನೆ ಕಾದಿದ್ದೀರಿ ನಿಮಗೂ ಒಳ್ಳೆಯದಾಗಲಿ ಎಂದು ದೇವರಲ್ಲಿ ಕೇಳಿಕೊಂಡಿದ್ದೇನೆ ಎಂದು ಮಾರ್ಮಿಕವಾಗಿ ನುಡಿದರು.

'ಈ ದಾಳಿಗಳಿಂದ ನನ್ನ ಆತ್ಮಸ್ಥೈರ್ಯ ಕುಸಿದಿದೆ ಅನ್ನಿಸುತ್ತಿದೆಯೇ? ಮಾಧ್ಯಮದವರಿಗೆ ನಾನು ಸುಮ್ಮನಾದೆ ಎನ್ನಿಸುತ್ತಿದೆಯೇ? ನಮ್ಮ ಬಳಿಯೂ ಸಾಕಷ್ಟು ಅಸ್ತ್ರಗಳಿವೆ. ಸಮಯ ಬಂದಾಗ ಬಳಕೆ ಮಾಡುತ್ತೇವೆ. ನಾನು ದೇವಿ ದರ್ಶನ ಪಡೆದಿದ್ದೇನೆ. ಸ್ನೇಹಿತರು ಹೋಮ ಮಾಡಿಸಿದ್ದಾರೆ' ಎಂದು ತಿಳಿಸಿದರು.
ಐಟಿ ದಾಳಿಗಳಿಂದ ಎದರಿಸಿ ಡಿಕೆಶಿಯನ್ನು ಬಿಜೆಪಿಗೆ ಸೆಳೆಯಲಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನಿಮಗೆ ಹಾಗೆ ಅನಿಸಿದರೆ ಹಾಗೇ ಅಂದುಕೊಳ್ಳಿ ಎಂದರು. ಕಾಕತಾಳೀಯವೆಂಬಂತೆ, ಅವರು ಕಷ್ಟ ನೀಗಲೆಂದು ಕಬ್ಬಾಳಮ್ಮ ದೇಶವಿ ದರುಶನ ಪಡೆಯುತ್ತಿರುವಾಗಲೇ ಅವರ ಬೆಂಬಲಿಗರ ಮೇಲೆ ದಾಳಿ ನಡೆದಿದೆ. ಗ್ರಹಚಾರ ಕೆಟ್ಟರೆ ದೇವರು ಯಾರನ್ನೂ ಬಿಡುವುದಿಲ್ಲ!
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications