ಪ್ರತಾಪ್ ಸಿಂಹ ವರ್ತನೆ ಬಗ್ಗೆ ಸಿದ್ದರಾಮಯ್ಯ ನುಡಿಮುತ್ತುಗಳು!
Recommended Video

ಮೈಸೂರು, ಡಿಸೆಂಬರ್ 04: "ಸಂಸದ ಪ್ರತಾಪ್ ಸಿಂಹ ಅವರೇ, ವಾಹನ ಚಾಲನೆ ಮಾಡಿಕೊಂಡು ಬಂದು, ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳ ಮೇಲೆ ನುಗ್ಗಿಸಿರುವುದು ಅಪರಾಧ. ನೆಲದ ಕಾನೂನನ್ನು ಜನಪ್ರತಿನಿಧಿಗಳೇ ಉಲ್ಲಂಘನೆ ಮಾಡಿದರೆ ಹೇಗೆ?" ಇದು ಪ್ರತಾಪ್ ಸಿಂಹ ವರ್ತನೆಗೆ ಸಿದ್ದರಾಮಯ್ಯ ಪ್ರಶ್ನೆ!
ಮೈಸೂರಿನ ಹುಣಸೂರಿನಲ್ಲಿ ಹನುಮ ಜಯಂತಿ ಸಂದರ್ಭದಲ್ಲಿ ನಿಷೇಧಾಜ್ಞೆ ಇದ್ದರೂ ಹಿಂದು ಸಂಘಟನೆ ಕಾರ್ಯಕರ್ತರು ಮೆರವಣಿಗೆ ಹೊರಟಾಗ, ತಡೆದ ಪೊಲೀಸರ ಮೇಲೆ ಆಕ್ರೋಶಗೊಂಡ ಸಂಸದ ಪ್ರತಾಪ್ ಸಿಂಹ ಬ್ಯಾರಿಕೇಡ್ ಗಳನ್ನು ಗುದ್ದಿ, ಕಾರು ಓಡಿಸಿ ಮತ್ತಷ್ಟು ವಿವಾದ ಸೃಷ್ಟಿಸಿದ್ದರು. ಈ ಸಂಬಂಧ ಅವರನ್ನು ಪೊಲೀಸರು ವಶಕ್ಕೆ ಪಡೆದು, ಕ್ರಿಮಿನಲ್ ಕೇಸ್ ದಾಖಲಿಸಿದ್ದರು.
ಈ ವಿವಾದಕ್ಕೆ ಸಂಬಂಧಿಸಿದಂತೆ, ಪ್ರತಾಪ್ ಸಿಂಹ ಅವರನ್ನು ಬಂಧಿಸಿದ ಪೊಲೀಸರ ಮತ್ತು ಕರ್ನಾಟಕ ಸರ್ಕಾರದ ಕ್ರಮವನ್ನು ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ತೀವ್ರವಾಗಿ ವಿರೋಧಿಸಿದ್ದವು. ನಂತರ ಪ್ರತಾಪ್ ಸಿಂಹ ವರ್ತನೆಯನ್ನು ಖಂಡಿಸಿದ್ದ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಗಳ ಮೂಲಕ, ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಾರವನ್ನು ನಿಮಗೆ ಕೊಟ್ಟವರ್ಯಾರು ಎಂದು ಪ್ರಶ್ನಿಸಿದ್ದಾರೆ.
ಪ್ರತಾಪ್ ಸಿಂಹ ಅವರ ವರ್ತನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದುರಿಸಿದ ನುಡಿಮುತ್ತುಗಳು ಇಲ್ಲಿವೆ...
|
ನೆಲದ ಕಾನೂನು ಉಲ್ಲಂಘಿಸಿದ್ದು ಏಕೆ?
"ಸಂಸದ ಪ್ರತಾಪ್ ಸಿಂಹ ಅವರೇ, ವಾಹನ ಚಾಲನೆ ಮಾಡಿಕೊಂಡು ಬಂದು ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳ ಮೇಲೆ ನುಗ್ಗಿಸಿರುವುದು ಅಪರಾಧ. ನೆಲದ ಕಾನೂನನ್ನು ಜನಪ್ರತಿನಿಧಿಗಳೇ ಉಲ್ಲಂಘನೆ ಮಾಡಿದರೆ ಹೇಗೆ?"

ಪೊಲೀಸರ ಜವಾಬ್ದಾರಿ ಏನು?
ನಾವು ಹನುಮ ಜಯಂತಿ, ಮೆರವಣಿಗೆ ಮಾಡಬೇಡಿ ಎಂದು ಹೇಳಿಲ್ಲ. ಅದಕ್ಕಾಗಿ ಮಾರ್ಗವನ್ನೂ ನಿಗದಿಪಡಿಸಲಾಗಿತ್ತು. ಆದರೆ, ನಾವು ಹೇಳಿದ ಮಾರ್ಗದಲ್ಲೇ ಮೆರವಣಿಗೆ ಹೋಗಬೇಕು ಎಂದು ಸಂಸದರು ಹೇಳುವುದಾದರೆ ಪೊಲೀಸರ ಜವಾಬ್ದಾರಿ ಏನು ?

ಸಂಸದರೇ ಕಾನೂನು ಕೈಗೆತೆಗೆದುಕೊಳ್ಳಬೇಕೆ?
ಸಂಸದರಾಗಲಿ, ಶಾಸಕರಾಗಲಿ ತಾವೇ ಮಾಡಿದ ಕಾನೂನಿಗೆ ಗೌರವ ಕೊಡದಿದ್ದರೆ ಜನ ಸಾಮಾನ್ಯರು ಹೇಗೆ ಗೌರವ ಕೊಡುತ್ತಾರೆ. ಸಂಸದರೇ ಕಾನೂನು ಕೈಗೆ ತೆಗೆದುಕೊಂಡದ್ದು ನೋಡಿ ಜನರೂ ಅವರನ್ನೇ ಅನುಕರಿಸಿದರೆ ಕಾನೂನು ಸುವ್ಯವಸ್ಥೆ ಏನಾಗಬೇಕು ?

ರಾಜಕೀಯಕ್ಕೆ ಬಳಸಿಕೊಳ್ಳಬೇಡಿ
ಹನುಮ ಜಯಂತಿ, ರಾಮನವಮಿಗಳನ್ನು ನಾವೂ ಆಚರಿಸುತ್ತೇವೆ. ಅವರೊಬ್ಬರೇ ಅಲ್ಲ. ಅದನ್ನು ರಾಜಕೀಯವಾಗಿ ಬಳಸಿಕೊಳ್ಳುವುದು ಸರಿಯಲ್ಲ. ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜನರನ್ನು ಪರಸ್ಪರ ಎತ್ತಿ ಕಟ್ಟಿ ಸಾಮರಸ್ಯ ಹಾಳು ಮಾಡುವ ಪ್ರಯತ್ನಕ್ಕೆ ಬಿಜೆಪಿ ಕೈ ಹಾಕಿದೆ.

ಇದೇನಾ ಬಿಜೆಪಿ ಪಕ್ಷದ ಸಂಸ್ಕೃತಿ ?
ಸಂಸದರೇ ವಾಹನ ಚಾಲನೆ ಮಾಡಿಕೊಂಡು ಬಂದು ಬ್ಯಾರಿಕೇಡ್ ಗಳ ಮೇಲೆ ನುಗ್ಗಿಸಿಕೊಂಡು ಹೋಗುವುದನ್ನು ಯಡಿಯೂರಪ್ಪ ಒಪ್ಪುವರೇ ? ಅದು ಕಾನೂನಿನ ಉಲ್ಲಂಘನೆ ಅಲ್ಲವೇ ?ತುಮಕೂರಿನಲ್ಲಿ ಬಿಟಿವಿ ವರದಿಗಾರರ ಮೇಲೆ ಬಿಜೆಪಿಯವರು ಹಲ್ಲೆ ಮಾಡಿದ್ದಾರೆ. ಇದೇನಾ ಆ ಪಕ್ಷದ ಸಂಸ್ಕೃತಿ ?
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications