ಸುರೇಶ್ ಪ್ರಭು ರೈಲ್ವೆ ಬಜೆಟ್ನಲ್ಲಿ ಮೈಸೂರಿಗೆ ಸಿಕ್ಕಿದ್ದೇನು?
ಮೈಸೂರು, ಫೆ. 27 : ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಗುರುವಾರ ಮಂಡಿಸಿದ 2015-16ನೇ ಸಾಲಿನ ರೈಲ್ವೆ ಬಜೆಟ್ನಲ್ಲಿ 108 ರೈಲುಗಳಲ್ಲಿ ಇ-ಕೆಟರಿಂಗ್ ಸೇವೆ ಆರಂಭಿಸುವುದಾಗಿ ಹೇಳಿದ್ದಾರೆ. ಮೈಸೂರಿನಿಂದ ಹೊರಡುವ 2 ರೈಲುಗಳಲ್ಲಿ ಈ ಸೇವೆ ಲಭ್ಯವಾಗಲಿದೆ.
ರೈಲ್ವೆ ಬಜೆಟ್ ಮಂಡನೆ ನಂತರ ನೈರುತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕ ಪಿ.ಕೆ.ಸಕ್ಸೇನಾ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಮೈಸೂರು-ಬೆಂಗಳೂರು ಚಾಮುಂಡಿ ಎಕ್ಸ್ಪ್ರೆಸ್ ಮತ್ತು ಮೈಸೂರು-ದಾದರ್ ಎಕ್ಸ್ಪ್ರೆಸ್ ರೈಲಿನಲ್ಲಿ ಇ-ಕೆಟರಿಂಗ್ ಸೇವೆ ಆರಂಭವಾಗಲಿದೆ.[ರೈಲ್ವೆ ಬಜೆಟ್ ಮುಖ್ಯಾಂಶಗಳು]
ಈ ಎರಡು ರೈಲುಗಳಲ್ಲಿ ಪ್ರಯಾಣಿಸುವ ಮುನ್ನ ಊಟ, ಉಪಹಾರಕ್ಕೆ ಮುಂಗಡ ಬುಕ್ಕಿಂಗ್ ಮಾಡಿಕೊಳ್ಳಲು ಇ-ಕೆಟರಿಂಗ್ ಸೇವೆಯನ್ನು ಆರಂಭಿಸಲಾಗುತ್ತದೆ. ರಾಜ್ಯದ 4 ರೈಲುಗಳಲ್ಲಿ ಇ-ಕೆಟರಿಂಗ್ ಸೇವೆ ಆರಂಭಗೊಳ್ಳಲಿದೆ ಎಂದು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. [ರೈಲ್ವೆ ಬಜೆಟ್ : 9 ಕನ್ನಡ ಪತ್ರಿಕೆಗಳ ಹಣೆಬರಹ]

ಮೈಸೂರಿನಿಂದ ಹೊರಡುವ ಎರಡು ರೈಲು ಮತ್ತು ಯಶವಂತಪುರ-ಕೋಚುವೇಲಿ ಎಕ್ಸ್ಪ್ರೆಸ್, ಬೆಂಗಳೂರು-ಸಿಕಂದರಾಬಾದ್ ಗರೀಬ್ರಥ್ ರೈಲುಗಳಲ್ಲಿ ಇ-ಕೆಟರಿಂಗ್ ಸೇವೆ ಲಭ್ಯವಾಗಲಿದೆ. [ರೈಲ್ವೆ ಬಜೆಟ್ : ಎಲ್ಲರಿಗೂ ಸುರೇಶ್ ಪ್ರಭು ನೀಡಿದ್ದೇನು?]
ಮೈಸೂರು ನಿಲ್ದಾಣದಲ್ಲಿ ವೈಫೈ : ಬಜೆಟ್ನಲ್ಲಿ ದೇಶದ 400ಕ್ಕೂ ಹೆಚ್ಚು ಪ್ರಮುಖ ನಿಲ್ದಾಣಗಳಲ್ಲಿ ವೈಫೈ ಸೇವೆ ಒದಗಿಸುವುದಾಗಿ ಘೋಷಣೆ ಮಾಡಲಾಗಿದೆ. ಕರ್ನಾಟಕದ 17 ನಿಲ್ದಾಣಗಳು ಇದರಲ್ಲಿ ಸೇರಿವೆ. ಮೈಸೂರು ಭಾಗದ ನಾಲ್ಕು ನಿಲ್ದಾಣಗಳು ಈ ವ್ಯಾಪ್ತಿಗೆ ಒಳಪಡಲಿವೆ.
ಬಿ ದರ್ಜೆಯ ನಿಲ್ದಾಣಗಳಲ್ಲಿ ವೈಫೈ ವ್ಯವಸ್ಥೆ ಮಾಡಲಾಗುತ್ತದೆ ಎಂದು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಮೈಸೂರು ವಿಭಾಗದಲ್ಲಿ ಮೈಸೂರು, ಶಿವಮೊಗ್ಗ ಹಾಗೂ ದಾವಣಗೆರೆ ರೈಲ್ವೆ ನಿಲ್ದಾಣಗಳು ಎ ದರ್ಜೆಗೆ, ಹಾಸನ, ಬೀರೂರು, ಅರಸಿಕೆರೆ, ಭದ್ರಾವತಿ, ಹಾವೇರಿ ಹಾಗೂ ಹರಿಹರ ರೈಲು ನಿಲ್ದಾಣಗಳು ಬಿ ದರ್ಜೆಗೆ ಸೇರಿವೆ.
ಮೈಸೂರು ವಿಭಾಗದ ಎ ದರ್ಜೆ ನಿಲ್ದಾಣಗಳಲ್ಲಿ ಇನ್ನೂ ವೈಫೈ ವ್ಯವಸ್ಥೆ ಕಲ್ಪಿಸಿಲ್ಲ. ಬಿ ದರ್ಜೆ ನಿಲ್ದಾಣಗಳಲ್ಲೂ ವೈಫೈ ವ್ಯವಸ್ಥೆ ಘೋಷಣೆ ಮಾಡಿರುವುದರಿಂದ ಮೈಸೂರು ವಿಭಾಗದಲ್ಲಿನ ನಿಲ್ದಾಣಗಳಲ್ಲಿ ಕೆಲವು ತಿಂಗಳುಗಳಲ್ಲಿ ವೈಫೈ ಸೇವೆ ಲಭ್ಯವಾಗಲಿವೆ.
-
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications