ಸಿದ್ದರಾಮಯ್ಯಗೆ ಪಿತ್ತ ನೆತ್ತಿಗೇರಿದಂತಿದೆ ಎಂದು ಗುಡುಗಿದ ವಿಶ್ವನಾಥ್
ಮೈಸೂರು, ಅಕ್ಟೋಬರ್ 5 : "ಸಿದ್ದರಾಮಯ್ಯಗೆ ಪಿತ್ತ ನೆತ್ತಿಗೇರಿದಂತಿದೆ. ವಿಶ್ವನಾಥ್ಗೆ ಕುರುಬರು ಮತ ಹಾಕಬೇಡಿ ಎಂದು ಹೇಳಲು ಸಿದರಾಮಯ್ಯ ಯಾರು? ಒಬ್ಬ ಮುಖ್ಯಮಂತ್ರಿಯಾಗಿ ಈ ರೀತಿ ಹೇಳುವುದು ಪ್ರಜಾತಂತ್ರ ವಿರೋಧಿ ಗೊತ್ತೇನ್ರಿ?" ಹೀಗೆ ತರಾಟೆಗೆ ತೆಗೆದುಕೊಂಡಿದ್ದು ಮಾಜಿ ಸಚಿವ, ಈಚೆಗೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಎಚ್.ವಿಶ್ವನಾಥ್.
ಮೈಸೂರಿನಲ್ಲಿ ಬುಧವಾರ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಕಿಡಿ ಕಾರಿದ ವಿಶ್ವನಾಥ್, ಹುಣಸೂರು ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ವಿಶ್ವನಾಥ್ ಗೆ ಕುರುಬರು ಮತ ಹಾಕಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ರೀತಿ ಹೇಳಲು ಇವರಿಗೆ ಯಾವ ಅಧಿಕಾರವಿದೆ? ನನಗೆ ಮತ ಹಾಕಬೇಡಿ ಎಂದು ಹೇಳುವುದಕ್ಕೆ ನಿಮ್ಮ ಬಳಿ ಯಾವ ಕಾರಣ ಇದೆ ಎಂದು ಪ್ರಶ್ನಿಸಿದರು.

ನನಗೆ ಚುನಾವಣೆಗೆ ನಿಲ್ಲುವ ಅರ್ಹತೆ ಇಲ್ಲವೆ? ನೀವು ಜಾತಿ ಆಧಾರದ ಮೇಲೆ ಚುನಾವಣೆ ಮಾಡುತ್ತಿದ್ದೀರಿ. ಜನತಂತ್ರದ ವ್ಯವಸ್ಥೆಯಲ್ಲಿ ಮತ ಕೇಳಬೇಕು. ಇಂಥವರಿಗೆ ಮತ ಹಾಕಬೇಡಿ ಎಂದು ಹೇಳುವ ಅಧಿಕಾರ ಯಾರಿಗೂ ಇಲ್ಲ ಎಂದು ತಿರುಗೇಟು ನೀಡಿದರು.
ಮುಖ್ಯಮಂತ್ರಿಯಾಗಿ ನಾನು ಹೇಳಿದ್ದನ್ನು ಎಲ್ಲರೂ ಕೇಳಬೇಕು ಅಂದುಕೊಂಡಿದ್ದಾರೆ ಸಿದ್ದರಾಮಯ್ಯ. ಆದರೆ ಅದು ಸಾಧ್ಯವಿಲ್ಲ. ಎಲ್ಲರೂ ನಿಮ್ಮ ಮಾತನ್ನು ಕೇಳುವ ಅಗತ್ಯವೂ ಇಲ್ಲ. ಮತದಾರರಿಗೆ ವಿವೇಚನೆ ಇದೆ. ನೀವು ಮತ ಹಾಕಬೇಡಿ ಎಂದು ಹೇಳಿದಾಕ್ಷಣ ನಿಮ್ಮ ಮಾತೇ ಅಂತಿಮವಲ್ಲ ಎಂದರು.
ಮುಂದಿನ ಬಾರಿಯೂ ನಾನೇ ಸಿಎಂ ಎಂದು ಸಿದ್ದರಾಮಯ್ಯ ಬೀಗುತ್ತಿದ್ದಾರೆ. ಅವರಿಗೆ ಜನತೆ ತಕ್ಕ ಪಾಠ ಕಲಿಸುತ್ತಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ರೈತ, ಜನ ವಿರೋಧಿ ಪಕ್ಷಗಳು. ಎರಡೂ ಪಕ್ಷಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಮಾಜಿ ಸಂಸದ ಎಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ನಿಂದ 'ಮನೆಮನೆಗೆ ಕುಮಾರಣ್ಣ ಕಾರ್ಯಕ್ರಮ' ಆರಂಭವಾಗಿದೆ. ಆದರೆ ಅದು ಕೇವಲ ಮನೆಗಳಿಗಷ್ಟೆ ಸೀಮಿತವಾಗಿಲ್ಲ. ಮನಗಳಿಗೂ ಕುಮಾರಣ್ಣ ಲಗ್ಗೆ ಇಡಲಿದ್ದಾರೆ. ಕುಮಾರಣ್ಣ ಅವರನ್ನು ಮನೆ- ಮನಗಳಿಗೆ ತಲುಪಿಸುವ ಕೆಲಸ ಮಾಡುತ್ತೇವೆ. ಇದಕ್ಕಾಗಿ ನಾನೂ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದೇನೆ. ಪಕ್ಷವನ್ನು ಅಧಿಕಾರಕ್ಕೆ ತರಲು ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಎಲ್ಲ ಕಾರ್ಯಕ್ರಮಗಳ ಮೂಲಕ ಜೆಡಿಎಸ್ ಜನರ ಬಳಿಗೆ ತೆರಳಲಿದೆ ಎಂದು ಹೇಳಿದರು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications