ಯದುವಂಶದ ಉತ್ತರಾಧಿಕಾರಿ ಯದುವೀರ್, ಒಂದು ಪರಿಚಯ
ಮೈಸೂರು, ಜೂನ್ 25 : ಮೈಸೂರು ಅರಮನೆಯಲ್ಲಿ ಮದುವೆ ಸಂಭ್ರಮ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿವಾಹಕ್ಕೆ ಭರದ ಸಿದ್ಧತೆ ನಡೆದಿದೆ. ಸಾಂಪ್ರದಾಯಿಕವಾಗಿ ನಡೆಯುವ ವಿವಾಹದ ವಿಧಿ ವಿಧಾನಗಳಿಗೆ ಶನಿವಾರ ಚಾಲನೆ ಸಿಕ್ಕಿದೆ. ಯದುವೀರ್ ಒಡೆಯರ್ ಈಗ ಎಲ್ಲರ ಗಮನ ಸೆಳೆಯುತ್ತಿದ್ದಾರೆ.[ಯದುವೀರ್ - ತ್ರಿಷಿಕಾ ಮದುವೆ ಚಿತ್ರಗಳು]
ಮೈಸೂರು ಯದುವಂಶದ ಉತ್ತರಾಧಿಕಾರಿಯಾಗಿ ರಾಜಮಾತೆ ಪ್ರಮೋದಾದೇವಿ ಅವರ ದತ್ತು ಪುತ್ರನಾಗಿ ಯುವರಾಜನೆಂದೇ ಕರೆಯಲ್ಪಡುತ್ತಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಯಾರು? ಎಂಬ ಪ್ರಶ್ನೆ ಹಲವರನ್ನು ಕಾಡುತ್ತಿರಬಹುದು. [40 ವರ್ಷ ಬಳಿಕ ಅರಮನೆಯಲ್ಲಿ ವಿವಾಹ ಸಂಭ್ರಮ!]

ಮೈಸೂರು ಮಹಾರಾಜರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಎರಡನೇ ಪತ್ನಿ ತ್ರಿಪುರಸುಂದರಿ ಅಮ್ಮಣಿ ಅವರಿಗೆ 6 ಮಂದಿ ಮಕ್ಕಳು. ಅವರೆಂದರೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಗಾಯಿತ್ರಿ ದೇವಿ, ಮೀನಾಕ್ಷಿ ದೇವಿ, ಕಾಮಾಕ್ಷಿ ದೇವಿ, ಇಂದ್ರಾಕ್ಷಿ ದೇವಿ, ವಿಶಾಲಾಕ್ಷಿ ದೇವಿ. [ಅರಮನೆಯಲ್ಲಿ ಯದುವೀರ್ ವಿವಾಹ ಸಂಭ್ರಮ ಆರಂಭ]
ಇವರ ಪೈಕಿ ಗಾಯಿತ್ರಿ ದೇವಿ ಅವರನ್ನು ರಾಜಸ್ಥಾನದ ರಾಜ ಕುಟುಂಬದ ಕೆ.ಬಿ.ರಾಮಚಂದ್ರರಾಜೇ ಅರಸ್ ಅವರಿಗೆ ವಿವಾಹ ಮಾಡಿಕೊಡಲಾಗಿದೆ. ಈ ದಂಪತಿಗಳ ಪುತ್ರ ಸ್ವರೂಪ್ ಆನಂದ್ ಗೋಪಾಲ್ ರಾಜೇ ಅರಸ್ ಆಗಿದ್ದು, ಇವರು ತ್ರಿಪುರ ಸುಂದರಿ ಎಂಬುವರನ್ನು ವಿವಾಹವಾಗಿದ್ದಾರೆ. ಈ ದಂಪತಿಗಳ ಪುತ್ರ ಯದುವೀರ್ ಅರಸ್. [ಸಿಂಹಾಸನವೇರಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್]
ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸ್ವರ್ಗಸ್ಥರಾದ ಬಳಿಕ ರಾಜಮಾತೆ ಪ್ರಮೋದಾದೇವಿ ಅವರು ಶಾಸ್ತ್ರ ಸಂಪ್ರದಾಯದಂತೆ ಯದುವೀರರನ್ನು ದತ್ತು ಪಡೆದಿದ್ದು, ಇದೀಗ ಅವರು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಿದ್ದಾರೆ. [ಯದುವೀರ ಒಡೆಯರ್ ಭಾವಿ ಪತ್ನಿ ರಾಜಸ್ಥಾನಿ ಕುವರಿ]
ಬೆಂಗಳೂರಲ್ಲಿ ವ್ಯಾಸಂಗ : ಬೆಂಗಳೂರಿನಲ್ಲಿ ಪಿಯುಸಿ ತನಕ ವ್ಯಾಸಂಗ ಮಾಡಿದ ಯದುವೀರ್ ಅವರು ಬಳಿಕ ಅಮೆರಿಕಾದಲ್ಲಿ ವಿದ್ಯಾಭ್ಯಾಸ ಮುಗಿಸಿ ಮೈಸೂರಿಗೆ ಬಂದಿದ್ದಾರೆ. ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಯದುವೀರ್ ಅವರು ಯದುವಂಶವನ್ನು ಮುನ್ನಡೆಸಲಿದ್ದಾರೆ.
ಅರಮನೆಯಲ್ಲಿ ಈಗಾಗಲೇ ವಿವಾಹದ ಕಾರ್ಯಕ್ರಮಗಳು ಆರಂಭವಾಗಿದ್ದು ರಾಜಸ್ಥಾನದ ಡುಂಗಾಪುರ ರಾಜಮನೆತನದ ಹರ್ಷವರ್ಧನ್ ಹಾಗೂ ಮಹೇಶ್ರೀ ದಂಪತಿಗಳ ಪುತ್ರಿ ತ್ರಿಷಿಕಾಕುಮಾರಿ ಸಿಂಗ್ ಮತ್ತು ಸಂಬಂಧಿಕರು ಮೈಸೂರಿಗೆ ಆಗಮಿಸಿದ್ದಾರೆ.
ಮದುವೆಗೆ ಆಮಂತ್ರಣ ಪಡೆದ ಹಲವು ಗಣ್ಯರು ಮೈಸೂರಿಗೆ ಆಗಮಿಸಿದ್ದು ಪ್ರತಿಷ್ಠಿತ ಹೋಟೆಲ್ನಲ್ಲಿ ಉಳಿದುಕೊಂಡಿದ್ದಾರೆ. ಹಲವು ಗಣ್ಯರು ಜೂ.27 ಮತ್ತು 28ರಂದು ನಡೆಯಲಿರುವ ಧಾರಾಮುಹೂರ್ತ ಮತ್ತು ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

ವಿವಾಹ ಕಾರ್ಯಕ್ರಮಗಳು ಅರಮನೆಯಲ್ಲಿ ನಡೆಯುತ್ತಿರುವುದರಿಂದ ಅರಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಆದ್ದರಿಂದ ದೂರದಿಂದ ಬಂದ ಪ್ರವಾಸಿಗರು ದೂರದಿಂದಲೇ ಅರಮನೆಯನ್ನು ವೀಕ್ಷಿಸಿ ವಾಪಸ್ ಆಗುತ್ತಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications