ಎಚ್.ವಿಶ್ವನಾಥ್ರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದೇಕೆ?
Recommended Video

ಮೈಸೂರು, ಆಗಸ್ಟ್ 6: ತಮ್ಮ ಕುಟುಂಬದ ಸದಸ್ಯರಿಗಷ್ಟೆ ಸೀಮಿತವಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಇದೀಗ ಹಿರಿಯ ನಾಯಕ ಸಚಿವರಾಗಿ, ಸಂಸದರಾಗಿ ಕಾರ್ಯನಿರ್ವಹಿಸಿ ಅನುಭವವುಳ್ಳ ಹುಣಸೂರು ಹಾಲಿ ಶಾಸಕ ಅಡಗೂರು ಎಚ್.ವಿಶ್ವನಾಥ್ ಅವರಿಗೆ ನೀಡಲಾಗಿದೆ.
ಆ ಮೂಲಕ ಒಕ್ಕಲಿಗರ ಪಕ್ಷ ಎಂಬ ಹಣೆಪಟ್ಟಿಯನ್ನು ಕಳಚಿಡುವ ಪ್ರಯತ್ನವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಾಡಿದ್ದಾರೆ. ಇದು ಮುಂಬರುವ ಚುನಾವಣೆಗೆ ತಯಾರಿ ಎಂಬುದರಲ್ಲಿ ಎರಡು ಮಾತಿಲ್ಲ.
ಕಾರಣ ಮೈತ್ರಿ ಸರ್ಕಾರದ ಸಂಪುಟದಲ್ಲಿ ಒಕ್ಕಲಿಗ ನಾಯಕರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದ್ದು, ಇತರೆ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಈಗ ಕೇಳಿ ಬರುತ್ತಿರುವ ಕೂಗಿಗೆ ಉತ್ತರವೂ ಹೌದು.
ಜತೆಗೆ ಪ್ರಭಾವಿ ಕುರುಬನಾಯಕ ಸಿದ್ದರಾಮಯ್ಯ ಅವರಿಗೆ ಸೆಡ್ಡು ಹೊಡೆಯುವ ಪ್ರಯತ್ನವೂ ಇದಾಗಿದೆ ಎನ್ನುವುದನ್ನು ತಳ್ಳಿ ಹಾಕುವಂತಿಲ್ಲ. ಸದ್ಯದ ಮಟ್ಟಿಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆಯಲ್ಲಿ ಸರ್ಕಾರ ನಡೆದುಕೊಂಡು ಹೋಗುತ್ತಿದೆ.
ಜೆಡಿಎಸ್ ನಾಯಕರು ಏನೇ ಮಾಡಿದರೂ ಮರು ಮಾತನಾಡದೆ ಕಾಂಗ್ರೆಸ್ ನಾಯಕರು ತಲೆಯಾಡಿಸುತ್ತಿದ್ದಾರೆ. ಇದು ಅನಿವಾರ್ಯವಾಗಿದ್ದರೂ ಹೀಗೆಯೇ ಮುಂದುವರೆಸಿದರೆ ಭವಿಷ್ಯದಲ್ಲಿ ಕಾಂಗ್ರೆಸ್ಗೆ ಒಳ್ಳೆಯದಾಗಲ್ಲ ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಾಗಿದೆ.
ಹೀಗಾಗಿ ಅವರು ಒಂದಷ್ಟು ದಾಳಗಳನ್ನು ಉರುಳಿಸುತ್ತಿದ್ದಾರೆ. ಅದರ ಪರಿಣಾಮಗಳು ಮೈತ್ರಿ ಸರ್ಕಾರದ ಮೇಲೆ ಬಿದ್ದರೆ ಸರ್ಕಾರ ಉರುಳುವುದಂತು ನಿಶ್ಚಿತ.

ಮುಂಬರುವ ಚುನಾವಣೆ ಮೇಲೆ ಕಣ್ಣು: ಸಿದ್ದರಾಮಯ್ಯಗೂ ಸೆಡ್ಡು
ಹೀಗಾಗಿ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕುವ ಯತ್ನವನ್ನು ಹೈಕಮಾಂಡ್ ಮೂಲಕ ಮಾಡಲಾಗಿದ್ದು, ಇನ್ನು ಅವರಿಗೆ ಸರಿಸಮಾನಾಗಿ ಅವರದೇ ಸಮುದಾಯದ ಮತ್ತು ಸಿದ್ದರಾಮಯ್ಯ ಅವರ ಕಡು ವಿರೋಧಿಯೂ ಆಗಿರುವ ಎಚ್.ವಿಶ್ವನಾಥ್ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಮುಂದಿನ ಚುನಾವಣೆಗೆ ಅನುಕೂಲವಾಗುತ್ತದೆ ಎಂಬ ಲೆಕ್ಕಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿದ್ದಾರೆ ಎನ್ನುವುದು ಗುಟ್ಟಾಗಿಯೇನು ಉಳಿದ ಿಲ್ಲ. ಆಗ ಗೌಡರು ಸೋಲಿಸಿದ್ದರು

ಆಗ ಸೋಲಿಸಿದ್ದ ಗೌಡರೇ ಈ ಆಯ್ಕೆ ಮಾಡಿದರು
ಹಾಗೆನೋಡಿದರೆ ಎಚ್.ವಿಶ್ವನಾಥ್ ಅವರದು ಕಂಡದ್ದು ಕಂಡ ಹಾಗೆ ಹೇಳುವ ಸ್ವಭಾವ ಕಾಂಗ್ರೆಸ್ನಲ್ಲಿದ್ದಾಗ ದೇವೇಗೌಡರನ್ನು ವಾಚಾಮಗೋಚರವಾಗಿ ಟೀಕೆ ಮಾಡಿದ್ದರು. ಅದರ ಪರಿಣಾಮ 2014ರ ಲೋಕ ಸಭಾ ಚುನಾವಣೆಯಲ್ಲಿ ದೇವೇಗೌಡರು ತಮ್ಮ ಪಕ್ಷದಿಂದ ದುರ್ಬಲ ಅಭ್ಯರ್ಥಿಯನ್ನು ನಿಲ್ಲಿಸುವ ಮೂಲಕ ಬಿಜೆಪಿಗೆ ಪರೋಕ್ಷವಾಗಿ ಅನುಕೂಲವಾಗುವಂತೆ ಮಾಡಿದರು. ಇದರಿಂದಾಗಿ ವಿಶ್ವನಾಥ್ ಸೋಲನ್ನಪ್ಪುಬಿಜೆಪಿತ ಪ್ರತಾಪ್ ಸಿಂಹ ಗೆಲುವನ್ನು ಕಾಣುವಂತಾಯಿತು.

ಕಾಂಗ್ರೆಸ್ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಹಳ್ಳಿ ಹಕ್ಕಿ
ವಿಶ್ವನಾಥ್ ಅವರು ಸೋತ ಬಳಿಕ ಅವರಿಗೆ ಕಾಂಗ್ರೆಸ್ ಪಕ್ಷದ ನಾಯಕರು ಸೊಪ್ಪು ಹಾಕಲಿಲ್ಲ. ಮನಸ್ಸು ಮಾಡಿದ್ದರೆ ಅವರಿಗೊಂದು ಹುದ್ದೆ ಕೊಡುವುದು ಕಷ್ಟವಾಗಿರಲಿಲ್ಲ. ತಮ್ಮ ಸಮುದಾಯದ ಮತ್ತೊಬ್ಬ ನಾಯಕ ಬಂದರೆ ತನಗೆಲ್ಲಿ ತೊಂದರೆಯಾಗುತ್ತದೆಯೋ ಎಂಬ ಲೆಕ್ಕಚಾರದಿಂದ ಸಿದ್ದರಾಮಯ್ಯ ದೂರವಿಟ್ಟರು. ಇದರಿಂದ ಮಾನಸಿಕವಾಗಿ ನೊಂದ ವಿಶ್ವನಾಥ್ ಅವರು ಕಾಂಗ್ರೆಸ್ ನಾಯಕರ ವಿರುದ್ಧವೇ ಹರಿಹಾಯ ತೊಡಗಿದರು. ಜೆಡಿಸ್ಗೆ ಹತ್ತಿರವಾದರು. ಸದ್ಯ ದೇವೇಗೌಡರ ಕೃಪೆಯಿಂದ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಕಂಡಿದ್ದಾರೆ. ಅವರಿಗೆ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆಯೂ ಇತ್ತು. ಆದರೆ ಅಲ್ಲಿಯೂ ಕಾಣದ ಕೈಗಳು ಕೆಲಸ ಮಾಡಿದ್ದು, ಅವರಿಗೆ ಅಂತಹ ಅವಕಾಶ ತಪ್ಪುವಂತಾಯಿತು.

ವಿಶ್ವನಾಥ್ ಪಕ್ಷದ ಮೇಲೆ ಹಿಡಿದ ಸಾಧಿಸುತ್ತಾರಾ?
ಪಕ್ಷದ ಮೇಲೆ ಹಿಡಿದ ಸಾಧಿಸುವರೇ ಹೊಸ ದಳಪತಿ ಬಹಿರಂಗವಾಗಿಯೇ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕುವ ವಿಶ್ವನಾಥ್ ಈಗ ಜೆಡಿಎಸ್ನ ರಾಜ್ಯಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ. ಮುಂದಿನ ದಿನಗಳು ಅವರಿಗೆ ಸವಾಲಿನ ದಿನಗಳಾಗಿವೆ. ಹೀಗಿರುವಾಗ ಅದನ್ನು ಹೇಗೆ ನಿಭಾಯಿಸುತ್ತಾರೆ ಎಂಬ ಕುತೂಹಲವೂ ಇಲ್ಲದಿಲ್ಲ. ಇಷ್ಟಕ್ಕೂ ದೇವೇಗೌಡರ ಕುಟುಂಬದ ಮುಷ್ಠಿಯಲ್ಲಿರುವ ಪಕ್ಷದಲ್ಲಿ ವಿಶ್ವನಾಥ್ ಅವರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆಯಾ? ಅಥವಾ ರಬ್ಬರ್ ಸ್ಟಾಂಪ್ ಆಗಿ ಉಳಿದು ಬಿಡುತ್ತಾರಾ ಹೀಗೆ ಹತ್ತಾರು ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಕಾಡುತ್ತಿದೆ. ಕಾದುನೋಡುವುದಷ್ಟೆ ನಮಗೆ ಉಳಿದಿರುವುದು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications