ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಗೆ ಏಕಿಷ್ಟು ಮಹತ್ವ?!
ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಗಳಿಗೆ ಏಕಿಷ್ಟು ಮಹತ್ವ ಎಂಬುದರ ವಿಶ್ಲೇಷಣೆ ನಿಮ್ಮ ಮುಂದಿದೆ. ಸಿದ್ದರಾಮಯ್ಯ ಹಾಗೂ ಬಿಎಸ್ ಯಡಿಯೂರಪ್ಪ ಇಬ್ಬರಿಗೂ ಇದು ಸವಾಲಿನ ಸಂಗತಿ ಏಕೆ ಎಂಬುದನ್ನು ತಿಳಿಯಲು ಈ ವರದಿ ಓದಿ
ನಂಜನಗೂಡು, ಮಾರ್ಚ್ 18: ನಂಜನಗೂಡು ಹಾಗೂ ಗುಂಡ್ಲುಪೇಟೆ ಕ್ಷೇತ್ರಗಳ ಉಪಚುನಾವಣೆಗೆ ಎಲ್ಲಿಲ್ಲದ ಮಹತ್ವ ಇದೆ. ಏಪ್ರಿಲ್ 9ರಂದು ಈ ಎರಡೂ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಶತಾಯಗತಾಯ ಈ ಎರಡೂ ಕಡೆ ಗೆಲ್ಲುವ ಹವಣಿಕೆಯಲ್ಲಿವೆ. ಮುಂದಿನ ವರ್ಷವೇ ಕರ್ನಾಟಕ ವಿಧಾನಸಭೆ ಚುನಾವಣೆ ಇದ್ದು, ಅದಕ್ಕೆ ಪೂರ್ವಭಾವಿಯಾಗಿ ದಿಕ್ಸೂಚಿಯಂತೆ ಈ ಚುನಾವಣೆ ಫಲಿತಾಂಶವನ್ನು ಪರಿಗಣಿಸಲಾಗುತ್ತದೆ.
ಅದರಲ್ಲೂ ನಂಜನಗೂಡು ಪ್ರತಿಷ್ಠೆಯ ಕ್ಷೇತ್ರವಾಗಿದೆ. 2018ರ ಚುನಾವಣೆಗೆ ಅದು ಅಷ್ಟೊಂದು ಮುಖ್ಯ ಅಲ್ಲ ಅಂತ ಹೇಳಿದರೂ ಖಂಡಿತವಾಗಿಯೂ ಮಹತ್ವ ಇದೆ. ಏಕೆಂದರೆ ಬಿಎಸ್ ಯಡಿಯೂರಪ್ಪ ಬಿಜೆಪಿಯ ರಾಜ್ಯಾಧ್ಯಕ್ಷರಾದ ನಂತರ ಎದುರಾಗಿರುವ ಮೊದಲ ದೊಡ್ಡ ಪರೀಕ್ಷೆಯಿದು.[ಉಪಚುನಾವಣೆ ಗೆಲ್ಲುವ ಭ್ರಮೆಯಲ್ಲಿ ಕಾಂಗ್ರೆಸ್ - ಬಿಎಸ್ ವೈ]

ಇನ್ನು ಸಿದ್ದರಾಮಯ್ಯ ಅವರಿ ಮಾನಾಪಮಾನದ ಪ್ರಶ್ನೆ. ಮೈಸೂರಿನಿಂದ ಕೇವಲ 23 ಕಿಲೋಮೀಟರ್ ದೂರದಲ್ಲಿರುವ ನಂಜನಗೂಡಿನಲ್ಲಿ ಅವರ ಹಿಡಿತ ಇಲ್ಲ ಎಂಬ ಸಂದೇಶ ರವಾನೆಯಾಗುತ್ತದೆ. ಕಳೆದ ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ ವೇಳೆ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಕೈ ಬಿಡಲಾಗಿತ್ತು.

ಆ ನಂತರ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು. ಆ ಕಾರಣಕ್ಕೆ ಎದುರಾಗಿರುವ ಚುನಾವಣೆ ಇದು. ಆದರೆ ಶ್ರೀನಿವಾಸ್ ಪ್ರಸಾದ್ ಈಗ ಬಿಜೆಪಿ ಪಾಳಯದಲ್ಲಿದ್ದಾರೆ. ನಂಜನಗೂಡು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್, ಅವರ ಗೆಲುವಿಗೆ ಸಾಕಷ್ಟು ಅವಕಾಶಗಳಿವೆ.

ಒಂದು ವೇಳೆ ಶ್ರೀನಿವಾಸ್ ಪ್ರಸಾದ್ ಗೆದ್ದರೆ ಸಿದ್ದರಾಮಯ್ಯ ಅವರಿಗೆ ಪ್ರಬಲ ಸಂದೇಶ ರವಾನೆಯಾಗುತ್ತದೆ. ಆದರೆ ಸಿದ್ದರಾಮಯ್ಯ ಅವರಿಗೆ ನಂಜನಗೂಡಿನಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ. ಮಾಧ್ಯಮಗಳಲ್ಲಿ ತೋರಿಸುತ್ತಿರುವಂತೆ ಮೋದಿ ಅಲೆ ಇಲ್ಲ. ಕೋಮುವಾದಿ ರಾಜಕಾರಣ ಮಾಡಿ ಉತ್ತರಪ್ರದೇಶದಲ್ಲಿ ಬಿಜೆಪಿ ಗೆದ್ದಿದೆ. ಹಾಗೊಂದು ವೇಳೆ ಮೋದಿ ಅಲೆ ಇದ್ದಿದ್ದರೆ ಪಂಜಾಬ್ ನಲ್ಲೂ ಗೆಲ್ಲಬೇಕಿತ್ತು ಎಂದಿದ್ದಾರೆ ಸಿದ್ದರಾಮಯ್ಯ.[ನಂಜನಗೂಡು ಉಪಚುನಾವಣೆ: ಕದನ ಕಲಿಗಳಿಗೆ ಪ್ರತಿಷ್ಠೆಯ ಕಣ]

ಗುಂಡ್ಲುಪೇಟೆ ಉಪಚುನಾವಣೆ ಕೂಡ ಆಸಕ್ತಿಕರವಾಗಿದೆ. ಜನವರಿಯಲ್ಲಿ ಮಹದೇವ್ ಪ್ರಸಾದ್ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಈ ಕ್ಷೇತ್ರ ಕಾಂಗ್ರೆಸ್ ಪಾಲಿಗೆ ಭದ್ರಕೋಟೆ ಎಂಬುದರಲ್ಲಿ ಎರಡು ಮಾತಿಲ್ಲ. ಕಾಂಗ್ರೆಸ್ ನಿಂದ ಮಹದೇವ್ ಪ್ರಸಾದ್ ಅವರ ಪತ್ನಿ ಕಣಕ್ಕೆ ಇಳಿಯಲಿದ್ದಾರೆ. ಅನುಕಂಪದ ಮತಗಳನ್ನು ಅವರು ಪಡೆಯುವ ಸಾಧ್ಯತೆ ಇದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications