ಮೈಸೂರು ದಸರಾ ಕವಿಗೋಷ್ಠಿಯಿಂದ ಪ್ರೊ.ಭಗವಾನ್ಗೆ ಕೊಕ್, ಯಾಕೆ ಗೊತ್ತಾ?, ಇಲ್ಲಿದೆ ಮಾಹಿತಿ
ಮೈಸೂರು, ಅಕ್ಟೋಬರ್, 16: ಒಕ್ಕಲಿಗರ ವಿರುದ್ಧ ಪ್ರೊ.ಭಗವಾನ್ ನೀಡಿದ್ದ ಹೇಳಿಕೆ ದಿನಕ್ಕೊಂದು ವಿವಾದ ಪಡೆದುಕೊಳ್ಳುತ್ತಿದ್ದು, ಇದೀಗ ಖಾಸಗಿಯಾಗಿ ಮೈಸೂರಿನಲ್ಲಿ ಆಯೋಜನೆಗೊಂಡಿದ್ದ ದಸರಾ ಯುವ ಕವಿಗೋಷ್ಠಿಯಿಂದ ಭಗವಾನ್ಗೆ ಕೊಕ್ ನೀಡಲಾಗಿದೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸ್ಪಂದನ ಸಾಂಸ್ಕೃತಿಕ ಪರಿಷತ್ ವತಿಯಿಂದ ವಿಜಯನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಇಂದು (ಅಕ್ಟೋಬರ್ 16ರಂದು) 'ದಸರಾ ಯುವ ಕವಿಗೋಷ್ಠಿ'ಯ ಉದ್ಘಾಟನೆಯನ್ನು ವಿಚಾರವಾದಿ ಕೆ.ಎಸ್.ಭಗವಾನ್ ಅವರ ಬದಲಿಗೆ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಹಾಗೂ ಸಾಹಿತಿ ಡಾ. ಡಿ.ಕೆ.ರಾಜೇಂದ್ರ ಉದ್ಘಾಟಿಸಿದ್ದಾರೆ.

ಪ್ರೊ.ಕೆ.ಎಸ್.ಭಗವಾನ್ ಅವರು ಇತ್ತೀಚಿಗೆ ನಡೆದ ಮಹಿಷ ದಸರಾ ಸಮಾರಂಭದಲ್ಲಿ ಒಕ್ಕಲಿಗ ಸಮುದಾಯದ ಕುರಿತು ಅವಹೇಳನ ಮಾಡಿದ ಕಾರಣ ಅವರ ವಿರುದ್ಧ ಒಕ್ಕಲಿಗ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಜೊತೆಗೆ ಅಕ್ಟೋಬರ್ 16ರಂದು ನಡೆಯಲಿರುವ ದಸರಾ ಯುವ ಕವಿಗೋಷ್ಠಿಯ ಉದ್ಘಾಟನೆಗೆ ಆಗಮಿಸಲಿದ್ದ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸುವ ನಿರ್ಧಾರ ಕೈಗೊಂಡಿದ್ದರು.
ಈ ಹಿನ್ನೆಲೆ ಪ್ರೊ. ಭಗವಾನ್ ಅವರ ಸುರಕ್ಷತೆ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಂಗಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂಬ ಉದ್ದೇಶದಿಂದ ಪ್ರೊ.ಕೆ.ಎಸ್.ಭಗವಾನ್ ಅವರ ನಿವಾಸಕ್ಕೆ ಭಾನುವಾರ ತೆರಳಿ, ಅವರ ಜೊತೆ ಚರ್ಚೆ ಮಾಡಿ ಉದ್ಘಾಟಕರನ್ನು ಬದಲಾಯಿಸಲಾಗಿದೆ ಎಂದು ಸ್ಪಂದನ ಸಾಂಸ್ಕೃತಿಕ ಪರಿಷತ್ ಅಧ್ಯಕ್ಷ ಸತೀಶ್ ಜವರೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications