ಮೈಸೂರು: ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ
2003 ರಲ್ಲಿ ತನ್ನ ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 5ಸಾವಿರ ರು ದಂಡ ವಿಧಿಸಿ ಮೈಸೂರು ಸೆಷನ್ ಕೋರ್ಟ್ ಆದೇಶಿಸಿದೆ.
ಮೈಸೂರು, ಡಿಸೆಂಬರ್. 19 : ಮದ್ಯ ಸೇವನೆಗೆ ಹಣ ನೀಡಿಲ್ಲವೆಂಬ ಕಾರಣಕ್ಕೆ ಪತ್ನಿಯನ್ನೇ ಕೊಲೆಗೈದ ಪತಿಗೆ ಮೈಸೂರು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಅಮಿತ್ ಬಾಬು (38) ಶಿಕ್ಷೆಗೆ ಗುರಿಯಾದ ವ್ಯಕ್ತಿ. ಬಾಬು ತನ್ನ ಪತ್ನಿ ಮೈಸೂರಿನ ಪ್ರಿಯಾ. 2013 ರ ಅಗಸ್ಟ್ 8 ರಂದು ದೇವರಾಜ ಠಾಣಾ ವ್ಯಾಪ್ತಿ ಎದುರು ಸಾರ್ವಜನಿಕರ ಎದುರೇ 19 ಬಾರಿ ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿದ್ದ.
ತಾಯಿಯ ಮರಣ ಹಾಗೂ ತಂದೆಯ ಜೈಲುವಾಸದಿಂದ ಇಬ್ಬರು ಮಕ್ಕಳು ಅನಾಥರಾಗಿದ್ದು, ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ನ್ಯಾಯಾಧೀಶ ಎನ್. ಕೃಷ್ಣಯ್ಯ ಆದೇಶದಲ್ಲಿ ಸೂಚಿಸಿದ್ದು, ಸರ್ಕಾರದ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಅಜಿತ್ ಕುಮಾರ್ ಡಿ.ಹಮಿಗಿ ವಾದ ಮಂಡಿಸಿದ್ದರು.

ವೃತ್ತಿಯಲ್ಲಿ ಕಾರುಚಾಲಕನಾಗಿದ್ದ ಅಮಿತ್ ಪ್ರಿಯಾ ಅವರನ್ನು ತಿಸಿ ಮದುವೆಯಾಗಿದ್ದರು. ವಿವಾಹಾನಂತರ ಬೆಂಗಳೂರಿನಲ್ಲಿ ನೆಲೆಸಿದ್ದರು. ಮದ್ಯ ವ್ಯಸನಿಯಾದ ಅಮಿತ್ ಕೆಲಸವನ್ನು ಕಳೆದುಕೊಂಡು ನಿರುದ್ಯೋಗಿಯಾಗಿದ್ದ.
ದಂಪತಿಗಳ ನಡುವೆ ವೈಮನಸ್ಸಿದ್ದ ಕಾರಣ ಪತ್ನಿ ಪ್ರಿಯಾ ಮಕ್ಕಳೊಂದಿಗೆ ತವರು ಮನೆ ಸೇರಿದ್ದರಲ್ಲದೇ ಮೈಸೂರಿನಲ್ಲಿ ಉದ್ಯೋಗ ಮಾಡುತ್ತಿದ್ದರು. ಆಗಾಗ ಬಂದು ದಾಂಧಲೆ ಮಾಡುತ್ತಿದ್ದ ಅಮಿತ್ ಅಗಸ್ಟ್ 7 ರ ರಾತ್ರಿ ಮದ್ಯ ಸೇವಿಸಲು ಹಣ ನೀಡುವಂತೆ ಪತ್ನಿಯನ್ನು ಪೀಡಿಸಿದ್ದ.
ಹಣ ನೀಡಲು ನಿರಾಕರಿಸಿದ ಪತ್ನಿಯನ್ನು ಹತ್ಯೆಗೈಯ್ಯಲು ಸಂಚು ರೂಪಿಸಿದ್ದ. ಮನೆಗೆ ತೆರಳಿ ಮಾರನೆಯ ದಿನ ಕುಡುಗೋಲಿನೊಂದಿಗೆ ಬಂದ ಅಮಿತ್ ದೇವರಾಜ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರೆದುರೇ ಬರ್ಬರವಾಗಿ ಹತ್ಯೆಗೈದಿದ್ದ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications