ಮೈಸೂರಲ್ಲಿ ಮತ್ತೊಂದು ಮಿನಿ ಜೂ ಶೀಘ್ರ ಉದ್ಘಾಟನೆ
ಮೈಸೂರು, ಜ. 24: ನಗರದಿಂದ 15 ಕಿ.ಮೀ. ದೂರದ ಕೂರ್ಗಳ್ಳಿಯಲ್ಲಿ ಪ್ರಾಣಿ ಸಂಗ್ರಹಾಲಯದ ಮತ್ತೊಂದು ಕೇಂದ್ರ ಆರಂಭಿಸಲಾಗಿದೆ. ಶೀಘ್ರ ಇದನ್ನು ಉದ್ಘಾಟಿಸಲಾಗುವುದು. ವನ್ಯಜೀವಿ ರಕ್ಷಣೆ ಹಾಗೂ ಪುನರ್ವಸತಿಗಾಗಿ ಈ ಕೇಂದ್ರ ಉಪಯೋಗಿಸಲಾಗುತ್ತದೆ ಎಂದು ಮೈಸೂರು ಮೃಗಾಲಯದ ಅಧಿಕಾರಿಗಳು ವೆಬ್ಸೈಟ್ನಲ್ಲಿ ತಿಳಿಸಿದ್ದಾರೆ. [ಮೈಸೂರು ಮೃಗಾಲಯಕ್ಕೆ 4 ಜೀಬ್ರಾಗಳು]
ಈ ಕೇಂದ್ರಕ್ಕೆ ಜ. 23ರಂದು ನಾಲ್ಕು ಹುಲಿಗಳನ್ನು ತರಲಾಗಿದೆ. ಇವುಗಳಲ್ಲಿ ಎರಡು ಮೊದಲೇ ಮೃಗಾಲಯದಲ್ಲಿದ್ದವು. ಇನ್ನೆರಡನ್ನು ಅರಣ್ಯದಿಂದ ರಕ್ಷಿಸಿ ತರಲಾಗಿದೆ. ಚಾಮುಂಡಿ ವನ್ಯಜೀವಿ ಸಂರಕ್ಷಣೆ, ರಕ್ಷಣೆ ಹಾಗೂ ಪುನರ್ವಸತಿ ಕೇಂದ್ರದಲ್ಲಿ ಹೊಸ ಗೂಡುಗಳನ್ನು ಮಾಡಿ ಇಡಲಾಗಿದೆ ಎಂದು ಮೃಗಾಲಯದ ಅಧಿಕಾರಿಗಳು ತಿಳಿಸಿದ್ದಾರೆ. [ಹುಲಿ ಸಂಖ್ಯೆ : ದೇಶದಲ್ಲೇ ಕರ್ನಾಟಕ ನಂ. 1]

ಮೈಸೂರು ಮೃಗಾಲಯದಲ್ಲಿ ಈಗಾಗಲೇ ಎಂಟು ಹುಲಿಗಳಿವೆ. ಮುಂದಿನ ದಿನಗಳಲ್ಲಿ ಹುಲಿಗಳ ಸಂತತಿ ಹೆಚ್ಚುವ ನಿರೀಕ್ಷೆಯಿದೆ. ಹೀಗಾದಲ್ಲಿ ಉಳಿದ ಮೃಗಾಲಯಗಳಿಗೂ ಪ್ರಾಣಿಗಳನ್ನು ಕಳುಹಿಸಿಕೊಡಲಾಗುವುದು ಎಂದು ವೆಬ್ಸೈಟ್ನಲ್ಲಿ ತಿಳಿಸಲಾಗಿದೆ. [ಮೈಸೂರು ಜೂ ವೆಬ್ ಸೈಟ್]

ಕಳೆದ ವರ್ಷದ ಜೂನ್ ತಿಂಗಳಲ್ಲಿ ಇಸ್ರೇಲ್ನ ರಾಮತ್ ಗಾನ್ (ಸಫಾರಿ), ಮೃಗಾಲಯದಿಂದ 12 - 14 ತಿಂಗಳುಗಳ ಎಳೆಯ ವಯಸ್ಸಿನ ನಾಲ್ಕು ಜೀಬ್ರಾಗಳನ್ನು ಮೈಸೂರು ಮೃಗಾಲಯಕ್ಕೆ ತರಲಾಗಿದೆ. ಮೈಸೂರು ಮೃಗಾಲಯದ ಅಂಗೀಕೃತ ಮಾಸ್ಟರ್ ಪ್ಲಾನ್ ನಲ್ಲಿರುವ ಪ್ರಾಣಿ ಸಂಗ್ರಹಣ ಯೋಜನೆಯಡಿ ಇವುಗಳನ್ನು ಪಡೆಯಲಾಗಿದೆ. [ಮೈಸೂರು ಮೃಗಾಲಯಕ್ಕೆ 4 ಜೀಬ್ರಾಗಳು]
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications