ದಸರಾ ತಾಲೀಮು ನಡೆಸಲು ಒಪ್ಪದ ಬಲರಾಮ
ಮೈಸೂರು, ಅ.10 : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ ತಾಲೀಮಿನ ವೇಳೆ ಬಲರಾಮ ಆನೆ ತನ್ನ ಅಸಹಕಾರ ತೋರಿದ್ದು, ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವುದೇ ಎಂಬ ಅನುಮಾನ ಹುಟ್ಟುಹಾಕಿದೆ.
ಶುಕ್ರವಾರ ಬೆಳಗ್ಗೆ ಆನೆಗಳ ತಾಲೀಮು ಅರಮನೆ ಮೈದಾನದಿಂದ ಆರಂಭವಾಯಿತು. ಬನ್ನಿ ಮಂಟಪದವರೆಗೆ ಆನೆಗಳು ಸಾಗಿ ಮರಳಿ ಅರಮನೆ ತಲುಪಬೇಕಾಗಿತ್ತು. ಆದರೆ, ಆರ್ ಎಂಸಿ ಸರ್ಕಲ್ ಹತ್ತಿರ ಬರುತ್ತಿದ್ದಂತೆಯೇ ಬಲರಾಮ ಹಿಂದಿರುಗಿ ಅರಮನೆಯತ್ತ ತೆರಳಲು ಮುಂದಾಗಿದೆ.

ಇದರಿಂದಾಗಿ ಬಲರಾಮನನ್ನು ಹಿಂಬಾಲಿಸತ್ತಿದ್ದ ಇತರ ಆನೆಗಳೂ ಗೊಂದಲಕ್ಕೊಕ್ಕೆ ಒಳಗಾಗಿ ಹಿಂದಿರುಗಿ ನಿಂತಿವೆ. ಇದರಿಂದಾಗಿ ಜಂಬೂ ಸವಾರಿಯಲ್ಲಿ ಬಲರಾಮ ಭಾಗವಹಿಸುತ್ತದೆಯೇ ಎಂಬ ಅನುಮಾನ ಪ್ರಾರಂಭವಾಗಿದೆ.
ಬಲರಾಮ ಆನೆ ಆರೋಗ್ಯವಾಗಿದೆ. ಆದರೆ, ಅದರ ವರ್ತನೆಗೆ ಕಾರಣವೇನೆಂದು ತಿಳಿದು ಬಂದಿಲ್ಲ ಎಂದು ಅರಣ್ಯ ಸಂರಕ್ಷಣಾಧಿಕಾರಿ ದೇವರಾಜ್ ಹೇಳಿದ್ದಾರೆ. ಜಂಬೂ ಸವಾರಿಯಂದು ಇಂತಹ ಘಟನೆ ಮರುಕಳಿಸಬಾರದು ಎಂದು ಅವರು ಎಚ್ಚರ ವಹಿಸಿದ್ದಾರೆ.
ಆದ್ದರಿಂದ ಬಲರಾಮ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುತ್ತಾನೆಯೇ ಎಂಬ ಅನುಮಾನ ಪ್ರಾರಂಭವಾಗಿದೆ. ಆಯುಧ ಪೂಜೆಯಂದು ಬಲರಾಮ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ದೇವರಾಜ್ ಹೇಳಿದ್ದಾರೆ. (ಗಜಪಡೆಯ ನಾಯಕ ಜಂಬೂ ಸವಾರಿ ವೀರ ಬಲರಾಮ)
ಚಿಕ್ಕಂದಿನಿಂದಲೂ ಬಲಗಣ್ಣು ತೊಂದರೆ ಅನುಭವಿಸುತ್ತಿರುವ ಬಲರಾಮ, ಕಳದೆ ವರ್ಷದ ದಸರಾ ತಾಲೀಮಿನ ಸಂದರ್ಭದಲ್ಲೂ ನಿರಾಸಕ್ತನಾಗಿದ್ದ. ಅರಮನೆಯಿಂದ ಬನ್ನಿಮಂಟಪ ತಲುಪಲು ಎರಡೂವರೆ ಗಂಟೆ ತೆಗೆದುಕೊಳ್ಳುತ್ತಿದ್ದ ಎಂಬ ದೂರು ಇತ್ತು. ಆದರೂ, ದಸರಾ ಉತ್ಸವದಲ್ಲಿ ಪಾಲ್ಗೊಂಡಿತ್ತು. ಈ ಬಾರಿ ತಾಲೀಮಿನಲ್ಲಿ ಭಾಗವಹಿಸಿದ್ದ ಬಲರಾಮ ಶುಕ್ರವಾರ ಮಾತ್ರ ತನ್ನ ಅಸಹಕಾರ ತೋರಿಸಿದ್ದಾನೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications