ರಾಜ್ಯದಲ್ಲಿ ವರ್ಷಕ್ಕೆ ಐದು ಲಕ್ಷ ಲೀ. ವೈನ್ ಮಾರಾಟ
ಮೈಸೂರು, ಡಿ. 26: ಮದ್ಯಪಾನಕ್ಕೆ ಎಷ್ಟೇ ವಿರೋಧ ವ್ಯಕ್ತವಾಗಬಹುದು. ಆದರೆ, ಅತ್ತ ಮದ್ಯವೂ ಅಲ್ಲ, ಇತ್ತ ಪಕ್ಕಾ ಹಣ್ಣಿನ ರಸವೂ ಅಲ್ಲದ ಸ್ಥಿತಿಯಲ್ಲಿರುವ ವೈನ್ ಮಾರಾಟಕ್ಕೆ ಸರ್ಕಾರವೇ ಪ್ರೋತ್ಸಾಹಿಸುತ್ತಿದೆ. ಆದ್ದರಿಂದಲೇ ಕರ್ನಾಟಕದಲ್ಲಿ ಜಾರಿಗೆ ತಂದಿರುವ ಹೊಸ ವೈನ್ ನೀತಿ ಮತ್ತು ಕರ್ನಾಟಕ ವೈನ್ ಮಂಡಳಿ ಸ್ಥಾಪನೆಯ ನಂತರ ರಾಜ್ಯದಲ್ಲಿ ವೈನ್ ಮಾರಾಟ ಸುಮಾರು ನಾಲ್ಕು ಪಟ್ಟು ಹೆಚ್ಚಾಗಿದೆ.
ಮದ್ಯಪಾನ ನಿಯಂತ್ರಿಸಲು 'ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ' ರಚಿಸಿದ್ದ ಸರ್ಕಾರ ವೈನ್ಗೆ ಉತ್ತೇಜನ ನೀಡಲು ಕರ್ನಾಟಕ ವೈನ್ ಬೋರ್ಡ್ ಸ್ಥಾಪಿಸಿದೆ. ಅಲ್ಲದೆ, ಕರ್ನಾಟಕ ದ್ರಾಕ್ಷಾರಸ ಸಂಸ್ಕರಣೆ ಮತ್ತು ವೈನ್ ನೀತಿ ಜಾರಿಗೆ ತಂದಿದೆ ಇದು ವೈನ್ ಉತ್ಪಾದನೆ ಹಾಗೂ ಮಾರಾಟ ಹೆಚ್ಚಾಗಲು ಕಾರಣ. [ಹೆದರಿಕೆ ಬಿಡಿ, ಕ್ರಿಸ್ ಮಸ್ ನಲ್ಲಿ ವೈನ್ ಜೊತೆ ಚಿಯರ್ಸ್ ಹೇಳಿ]
ಕರ್ನಾಟಕ ವೈನ್ ಮಂಡಳಿ ಅಧ್ಯಕ್ಷ ಬಿ. ಕೃಷ್ಣ ಅವರು ಮೈಸೂರಿನಲ್ಲಿ ವೈನ್ ಮೇಳ ಆರಂಭಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿ ನೀಡಿದ ಮಾಹಿತಿಯಿಂದ ವೈನ್ ಪ್ರಿಯರು ಹೆಚ್ಚಾಗಿರುವುದನ್ನು ದೃಢಪಡಿಸಿದೆ. ಅವರು ನೀಡಿರುವ ಅಂಕಿ ಅಂಶಗಳು ಈ ಕೆಳಗಿನಂತಿವೆ.

ಸುಮಾರು ಏಳು ವರ್ಷಗಳ ಮೊದಲು ರಾಜ್ಯದಲ್ಲಿ ವೈನ್ ಮಾರಾಟ ಪ್ರತಿ ವರ್ಷ ಸುಮಾರು 13.1 ಲಕ್ಷ ಲೀ. ಇತ್ತು. ಆದರೆ, ಸ್ಥಾಪನೆಯ ನಂತರ ವೈನ್ ಮಾರಾಟ 5 ಲಕ್ಷ ಲೀ.ಗೆ ಏರಿದೆ. ಮೊದಲು 500 ಎಕರೆ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತಿತ್ತು. ಈಗ ಸುಮಾರು 2,000 ಎಕರೆ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯುತ್ತಿದೆ.
ರಾಜ್ಯದಲ್ಲಿ ಮೊದಲು ಎರಡು ವೈನ್ ತಯಾರಿಕೆ ಘಟಕಗಳಿದ್ದರೆ, ಈಗ 17 ಘಟಕಗಳಿವೆ. ಇನ್ನೂ ಕೆಲವು ಘಟಕಗಳು ಆರಂಭವಾಗುವ ನಿರೀಕ್ಷೆಯಲ್ಲಿವೆ. ಇಲ್ಲಿಯವರೆಗೆ ಮೂರು ಅಂತಾರಾಷ್ಟ್ರೀಯ ವೈನ್ ಮೇಳ ನಡೆಸಲಾಗಿದ್ದು, ಇನ್ನಷ್ಟು ಮೇಳಗಳಿಗೆ ರೂಪುರೇಷೆ ಸಿದ್ಧವಾಗಿದೆ.
ಮೈಸೂರಲ್ಲಿ ವೈನ್ ಮೇಳ ಆರಂಭ : ಈ ಕುರಿತು ಸುದ್ದಿಗೋಷ್ಠಿ ನಡೆಸಿ ವಿವರಣೆ ನೀಡಿದ್ದಾರೆ. ಮೈಸೂರಿನಲ್ಲೇ ವೈನ್ ಮಾರಾಟ ಶೇ. 30ರಷ್ಟು ಹೆಚ್ಚಾಗಿದ್ದು, ವಾರ್ಷಿಕ 1,43,000 ಲೀ. ಖರ್ಚಾಗುತ್ತಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ನಂತರ ಡಿ. 26ರಿಂದ ಮೈಸೂರಿನಲ್ಲಿ ವೈನ್ ಮೇಳ ಆಯೋಜಿಸಲಾಗುತ್ತಿದೆ. ಈ ನಂತರ ಬೆಳಗಾವಿ ಹಾಗೂ ಬೀದರ್ನಲ್ಲಿಯೂ ಆಯೋಜಿಸಲಾಗುವುದು. ವೈನ್ ತಯಾರಿಕೆ ಹಾಗೂ ಮಾರಾಟ ಕುರಿತು ಜಾಗೃತಿ ಮೂಡಿಸಲು ಮೇಳ ಆಯೋಜಿಸಲಾಗುತ್ತಿದೆ ಎಂದು ಕೃಷ್ಣ ತಿಳಿಸಿದರು.
ವೈನ್ ಮಾರಾಟಕ್ಕಾಗಿ ಮಾರುಕಟ್ಟೆ ನಿರ್ಮಿಸುವ ಕುರಿತು ಪ್ರಸ್ತಾವನೆಯೊಂದನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುವುದು. ಈ ಮೂಲಕ ದ್ರಾಕ್ಷಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಯನ್ನು ನಿವಾರಿಸಲು ಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications