ರಾಜ್ಯದಲ್ಲಿ ವರ್ಷಕ್ಕೆ ಐದು ಲಕ್ಷ ಲೀ. ವೈನ್ ಮಾರಾಟ
ಮೈಸೂರು, ಡಿ. 26: ಮದ್ಯಪಾನಕ್ಕೆ ಎಷ್ಟೇ ವಿರೋಧ ವ್ಯಕ್ತವಾಗಬಹುದು. ಆದರೆ, ಅತ್ತ ಮದ್ಯವೂ ಅಲ್ಲ, ಇತ್ತ ಪಕ್ಕಾ ಹಣ್ಣಿನ ರಸವೂ ಅಲ್ಲದ ಸ್ಥಿತಿಯಲ್ಲಿರುವ ವೈನ್ ಮಾರಾಟಕ್ಕೆ ಸರ್ಕಾರವೇ ಪ್ರೋತ್ಸಾಹಿಸುತ್ತಿದೆ. ಆದ್ದರಿಂದಲೇ ಕರ್ನಾಟಕದಲ್ಲಿ ಜಾರಿಗೆ ತಂದಿರುವ ಹೊಸ ವೈನ್ ನೀತಿ ಮತ್ತು ಕರ್ನಾಟಕ ವೈನ್ ಮಂಡಳಿ ಸ್ಥಾಪನೆಯ ನಂತರ ರಾಜ್ಯದಲ್ಲಿ ವೈನ್ ಮಾರಾಟ ಸುಮಾರು ನಾಲ್ಕು ಪಟ್ಟು ಹೆಚ್ಚಾಗಿದೆ.
ಮದ್ಯಪಾನ ನಿಯಂತ್ರಿಸಲು 'ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ' ರಚಿಸಿದ್ದ ಸರ್ಕಾರ ವೈನ್ಗೆ ಉತ್ತೇಜನ ನೀಡಲು ಕರ್ನಾಟಕ ವೈನ್ ಬೋರ್ಡ್ ಸ್ಥಾಪಿಸಿದೆ. ಅಲ್ಲದೆ, ಕರ್ನಾಟಕ ದ್ರಾಕ್ಷಾರಸ ಸಂಸ್ಕರಣೆ ಮತ್ತು ವೈನ್ ನೀತಿ ಜಾರಿಗೆ ತಂದಿದೆ ಇದು ವೈನ್ ಉತ್ಪಾದನೆ ಹಾಗೂ ಮಾರಾಟ ಹೆಚ್ಚಾಗಲು ಕಾರಣ. [ಹೆದರಿಕೆ ಬಿಡಿ, ಕ್ರಿಸ್ ಮಸ್ ನಲ್ಲಿ ವೈನ್ ಜೊತೆ ಚಿಯರ್ಸ್ ಹೇಳಿ]
ಕರ್ನಾಟಕ ವೈನ್ ಮಂಡಳಿ ಅಧ್ಯಕ್ಷ ಬಿ. ಕೃಷ್ಣ ಅವರು ಮೈಸೂರಿನಲ್ಲಿ ವೈನ್ ಮೇಳ ಆರಂಭಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿ ನೀಡಿದ ಮಾಹಿತಿಯಿಂದ ವೈನ್ ಪ್ರಿಯರು ಹೆಚ್ಚಾಗಿರುವುದನ್ನು ದೃಢಪಡಿಸಿದೆ. ಅವರು ನೀಡಿರುವ ಅಂಕಿ ಅಂಶಗಳು ಈ ಕೆಳಗಿನಂತಿವೆ.

ಸುಮಾರು ಏಳು ವರ್ಷಗಳ ಮೊದಲು ರಾಜ್ಯದಲ್ಲಿ ವೈನ್ ಮಾರಾಟ ಪ್ರತಿ ವರ್ಷ ಸುಮಾರು 13.1 ಲಕ್ಷ ಲೀ. ಇತ್ತು. ಆದರೆ, ಸ್ಥಾಪನೆಯ ನಂತರ ವೈನ್ ಮಾರಾಟ 5 ಲಕ್ಷ ಲೀ.ಗೆ ಏರಿದೆ. ಮೊದಲು 500 ಎಕರೆ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತಿತ್ತು. ಈಗ ಸುಮಾರು 2,000 ಎಕರೆ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯುತ್ತಿದೆ.
ರಾಜ್ಯದಲ್ಲಿ ಮೊದಲು ಎರಡು ವೈನ್ ತಯಾರಿಕೆ ಘಟಕಗಳಿದ್ದರೆ, ಈಗ 17 ಘಟಕಗಳಿವೆ. ಇನ್ನೂ ಕೆಲವು ಘಟಕಗಳು ಆರಂಭವಾಗುವ ನಿರೀಕ್ಷೆಯಲ್ಲಿವೆ. ಇಲ್ಲಿಯವರೆಗೆ ಮೂರು ಅಂತಾರಾಷ್ಟ್ರೀಯ ವೈನ್ ಮೇಳ ನಡೆಸಲಾಗಿದ್ದು, ಇನ್ನಷ್ಟು ಮೇಳಗಳಿಗೆ ರೂಪುರೇಷೆ ಸಿದ್ಧವಾಗಿದೆ.
ಮೈಸೂರಲ್ಲಿ ವೈನ್ ಮೇಳ ಆರಂಭ : ಈ ಕುರಿತು ಸುದ್ದಿಗೋಷ್ಠಿ ನಡೆಸಿ ವಿವರಣೆ ನೀಡಿದ್ದಾರೆ. ಮೈಸೂರಿನಲ್ಲೇ ವೈನ್ ಮಾರಾಟ ಶೇ. 30ರಷ್ಟು ಹೆಚ್ಚಾಗಿದ್ದು, ವಾರ್ಷಿಕ 1,43,000 ಲೀ. ಖರ್ಚಾಗುತ್ತಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ನಂತರ ಡಿ. 26ರಿಂದ ಮೈಸೂರಿನಲ್ಲಿ ವೈನ್ ಮೇಳ ಆಯೋಜಿಸಲಾಗುತ್ತಿದೆ. ಈ ನಂತರ ಬೆಳಗಾವಿ ಹಾಗೂ ಬೀದರ್ನಲ್ಲಿಯೂ ಆಯೋಜಿಸಲಾಗುವುದು. ವೈನ್ ತಯಾರಿಕೆ ಹಾಗೂ ಮಾರಾಟ ಕುರಿತು ಜಾಗೃತಿ ಮೂಡಿಸಲು ಮೇಳ ಆಯೋಜಿಸಲಾಗುತ್ತಿದೆ ಎಂದು ಕೃಷ್ಣ ತಿಳಿಸಿದರು.
ವೈನ್ ಮಾರಾಟಕ್ಕಾಗಿ ಮಾರುಕಟ್ಟೆ ನಿರ್ಮಿಸುವ ಕುರಿತು ಪ್ರಸ್ತಾವನೆಯೊಂದನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುವುದು. ಈ ಮೂಲಕ ದ್ರಾಕ್ಷಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಯನ್ನು ನಿವಾರಿಸಲು ಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications