ಮೈಸೂರಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಮೊಬೈಲ್ ಟವರ್ ದಂಧೆ
ಮೈಸೂರು, ಮೇ 30: ಮೊಬೈಲ್ ಟವರ್ ಗಳನ್ನು ಯಾವುದೇ ನಿಯಮ, ನೋಂದಣಿ ವ್ಯವಸ್ಥೆ ಇಲ್ಲದೆ ಅವ್ಯಾಹತವಾಗಿ ಸ್ಥಾಪಿಸುವ ಕೆಲಸ ಜಿಲ್ಲೆಯಲ್ಲಿ ನಡೆಯುತ್ತಿದೆ. ಇದರ ಮೇಲೆ ಅಧಿಕಾರಿಗಳಿಗೆ ನಿಯಂತ್ರಣವೇ ಇಲ್ಲದಂತಾಗಿದೆ. ಜೊತೆಗೆ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ಸರ್ಕಾರಕ್ಕೆ ಬರುವ ಆದಾಯವೂ ಇದರಿಂದ ಕಡಿತಗೊಂಡಿದೆ.
15 ವರ್ಷಗಳಿಂದ ಮೊಬೈಲ್ ಟವರ್ ಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ. 2014ರಲ್ಲಿ ಈ ಸಂಬಂಧ ಪ್ರಸ್ತಾವನೆಯಾಗಿ ಸರ್ಕಾರ ಅಧಿಸೂಚನೆ ಹೊರಡಿಸಿ ತಕ್ಷಣ ಹಿಂಪಡೆದ ಅವಧಿಯಲ್ಲಿ ಇದು ಮತ್ತೆ ನನೆಗುದಿಗೆ ಬಿತ್ತು. ಹಿಂದಿನ ಅಧಿಸೂಚನೆಯಲ್ಲಿ ಪ್ರತಿ ಮೊಬೈಲ್ ಟವರ್ ಗೆ ವಾರ್ಷಿಕ 12,000ರೂ ಶುಲ್ಕ ನಿಗದಿಗೊಳಿಸಲಾಗಿತ್ತು. ಇದು ಜಾರಿಯಾಗಿದ್ದರೆ ಮೈಸೂರು ನಗರವೊಂದರಲ್ಲೇ ಸರಾಸರಿ 250 ಮೊಬೈಲ್ ಟವರ್ ಲೆಕ್ಕದಲ್ಲಿ 5 ವರ್ಷದಲ್ಲಿ 1.5 ಕೋಟಿ ರೂಪಾಯಿ ಆದಾಯ ಬರಬೇಕಿತ್ತು. ಆದರೆ ಆ ಹಣ ಎಲ್ಲಿ ಹೋಯಿತು ಎಂಬುದು ಈಗ ಯಕ್ಷ ಪ್ರಶ್ನೆ.
ನಗರ ಪ್ರದೇಶದಲ್ಲಿ ಮೊಬೈಲ್ ಟವರ್ ನಿರ್ಮಿಸುವ ಸಂಬಂಧ ಹೊಸ ನೋಂದಣಿ ವ್ಯವಸ್ಥೆ ಜಾರಿಗೆ ತರುವುದಾಗಿ ನಗರಾಭಿವೃದ್ಧಿ ಸಚಿವ ಖಾದರ್ ಅವರು ತಿಳಿಸಿದ್ದರು. ಆರು ತಿಂಗಳಾದರೂ ಇನ್ನೂ ಆ ನಿಯಮ ರೂಪಿಸದಿರುವುದರಿಂದ ನಿಯಂತ್ರಣ ಸಾಧಿಸಲು ಸಾಧ್ಯವಾಗುತ್ತಿಲ್ಲ. ಸ್ಥಳೀಯ ಆಡಳಿತ ಮಹಾನಗರ ಪಾಲಿಕೆ ಹಾಗೂ ನಗರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಇದು ದೊಡ್ಡ ತಲೆನೋವಾಗಿದೆ.

ಮೈಸೂರು ಮಹಾನಗರ ಪಾಲಿಕೆಗೆ ಇದರಿಂದಾಗಿ ನಿರೀಕ್ಷಿತ ಆದಾಯ ಬರುತ್ತಿಲ್ಲ. ಪ್ರಸ್ತುತ ಮಹಾನಗರ ಪಾಲಿಕೆ ಮೊಬೈಲ್ ಟವರ್ ಇರುವ ಮನೆ, ಕಟ್ಟಡ ಹಾಗೂ ಖಾಲಿ ನಿವೇಶನಗಳಿಗೆ ವಾಣಿಜ್ಯ ದರದಲ್ಲಿ ಆಸ್ತಿ ತೆರಿಗೆ ವಿಧಿಸಿ ವಸೂಲಿ ಮಾಡುತ್ತಿದೆ. ಆದರೂ ಇದು ಕಡಿಮೆಯೇ. ಆಸ್ಪತ್ರೆಗಳು, ಶಾಲಾ-ಕಾಲೇಜುಗಳ 50 ಮೀಟರ್ ಸುತ್ತಳತೆಯಲ್ಲಿ ಟವರ್ ಗಳನ್ನು ನಿರ್ಮಿಸುವಂತಿಲ್ಲ ಎಂಬ ನಿಯಮವಿತ್ತು. ಇದಲ್ಲದೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಇದಕ್ಕೆ ಸಂಬಂಧಿಸಿದ ಕುಂದುಕೊರತೆ ಪರಿಹಾರ ಘಟಕವೊಂದನ್ನು ನಿರ್ಮಿಸುವುದಾಗಿ ಈ ಹಿಂದೆ ತಿಳಿಸಲಾಗಿತ್ತು. ಇದನ್ನು ಕೂಡ ಇನ್ನೂ ಜಾರಿಗೊಳಿಸಿಲ್ಲ.
ರಾಜ್ಯ ಸರ್ಕಾರ ಹೊಸ ನಿಯಮವನ್ನು ಜಾರಿಗೊಳಿಸದ ಹೊರತು ಮೊಬೈಲ್ ಟವರ್ ಗಳ ಬಗ್ಗೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ ಎನ್ನುತ್ತಾರೆ ನಗರ ಪಾಲಿಕೆ ಅಧಿಕಾರಿಗಳು. ಇನ್ನು ಮುಂದಾದರೂ ಸರ್ಕಾರ ಎಚ್ಚೆತ್ತು ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕಾದ ಅನಿವಾರ್ಯತೆ ಇದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications