ಮೈಸೂರಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಮೊಬೈಲ್ ಟವರ್ ದಂಧೆ
ಮೈಸೂರು, ಮೇ 30: ಮೊಬೈಲ್ ಟವರ್ ಗಳನ್ನು ಯಾವುದೇ ನಿಯಮ, ನೋಂದಣಿ ವ್ಯವಸ್ಥೆ ಇಲ್ಲದೆ ಅವ್ಯಾಹತವಾಗಿ ಸ್ಥಾಪಿಸುವ ಕೆಲಸ ಜಿಲ್ಲೆಯಲ್ಲಿ ನಡೆಯುತ್ತಿದೆ. ಇದರ ಮೇಲೆ ಅಧಿಕಾರಿಗಳಿಗೆ ನಿಯಂತ್ರಣವೇ ಇಲ್ಲದಂತಾಗಿದೆ. ಜೊತೆಗೆ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ಸರ್ಕಾರಕ್ಕೆ ಬರುವ ಆದಾಯವೂ ಇದರಿಂದ ಕಡಿತಗೊಂಡಿದೆ.
15 ವರ್ಷಗಳಿಂದ ಮೊಬೈಲ್ ಟವರ್ ಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ. 2014ರಲ್ಲಿ ಈ ಸಂಬಂಧ ಪ್ರಸ್ತಾವನೆಯಾಗಿ ಸರ್ಕಾರ ಅಧಿಸೂಚನೆ ಹೊರಡಿಸಿ ತಕ್ಷಣ ಹಿಂಪಡೆದ ಅವಧಿಯಲ್ಲಿ ಇದು ಮತ್ತೆ ನನೆಗುದಿಗೆ ಬಿತ್ತು. ಹಿಂದಿನ ಅಧಿಸೂಚನೆಯಲ್ಲಿ ಪ್ರತಿ ಮೊಬೈಲ್ ಟವರ್ ಗೆ ವಾರ್ಷಿಕ 12,000ರೂ ಶುಲ್ಕ ನಿಗದಿಗೊಳಿಸಲಾಗಿತ್ತು. ಇದು ಜಾರಿಯಾಗಿದ್ದರೆ ಮೈಸೂರು ನಗರವೊಂದರಲ್ಲೇ ಸರಾಸರಿ 250 ಮೊಬೈಲ್ ಟವರ್ ಲೆಕ್ಕದಲ್ಲಿ 5 ವರ್ಷದಲ್ಲಿ 1.5 ಕೋಟಿ ರೂಪಾಯಿ ಆದಾಯ ಬರಬೇಕಿತ್ತು. ಆದರೆ ಆ ಹಣ ಎಲ್ಲಿ ಹೋಯಿತು ಎಂಬುದು ಈಗ ಯಕ್ಷ ಪ್ರಶ್ನೆ.
ನಗರ ಪ್ರದೇಶದಲ್ಲಿ ಮೊಬೈಲ್ ಟವರ್ ನಿರ್ಮಿಸುವ ಸಂಬಂಧ ಹೊಸ ನೋಂದಣಿ ವ್ಯವಸ್ಥೆ ಜಾರಿಗೆ ತರುವುದಾಗಿ ನಗರಾಭಿವೃದ್ಧಿ ಸಚಿವ ಖಾದರ್ ಅವರು ತಿಳಿಸಿದ್ದರು. ಆರು ತಿಂಗಳಾದರೂ ಇನ್ನೂ ಆ ನಿಯಮ ರೂಪಿಸದಿರುವುದರಿಂದ ನಿಯಂತ್ರಣ ಸಾಧಿಸಲು ಸಾಧ್ಯವಾಗುತ್ತಿಲ್ಲ. ಸ್ಥಳೀಯ ಆಡಳಿತ ಮಹಾನಗರ ಪಾಲಿಕೆ ಹಾಗೂ ನಗರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಇದು ದೊಡ್ಡ ತಲೆನೋವಾಗಿದೆ.

ಮೈಸೂರು ಮಹಾನಗರ ಪಾಲಿಕೆಗೆ ಇದರಿಂದಾಗಿ ನಿರೀಕ್ಷಿತ ಆದಾಯ ಬರುತ್ತಿಲ್ಲ. ಪ್ರಸ್ತುತ ಮಹಾನಗರ ಪಾಲಿಕೆ ಮೊಬೈಲ್ ಟವರ್ ಇರುವ ಮನೆ, ಕಟ್ಟಡ ಹಾಗೂ ಖಾಲಿ ನಿವೇಶನಗಳಿಗೆ ವಾಣಿಜ್ಯ ದರದಲ್ಲಿ ಆಸ್ತಿ ತೆರಿಗೆ ವಿಧಿಸಿ ವಸೂಲಿ ಮಾಡುತ್ತಿದೆ. ಆದರೂ ಇದು ಕಡಿಮೆಯೇ. ಆಸ್ಪತ್ರೆಗಳು, ಶಾಲಾ-ಕಾಲೇಜುಗಳ 50 ಮೀಟರ್ ಸುತ್ತಳತೆಯಲ್ಲಿ ಟವರ್ ಗಳನ್ನು ನಿರ್ಮಿಸುವಂತಿಲ್ಲ ಎಂಬ ನಿಯಮವಿತ್ತು. ಇದಲ್ಲದೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಇದಕ್ಕೆ ಸಂಬಂಧಿಸಿದ ಕುಂದುಕೊರತೆ ಪರಿಹಾರ ಘಟಕವೊಂದನ್ನು ನಿರ್ಮಿಸುವುದಾಗಿ ಈ ಹಿಂದೆ ತಿಳಿಸಲಾಗಿತ್ತು. ಇದನ್ನು ಕೂಡ ಇನ್ನೂ ಜಾರಿಗೊಳಿಸಿಲ್ಲ.
ರಾಜ್ಯ ಸರ್ಕಾರ ಹೊಸ ನಿಯಮವನ್ನು ಜಾರಿಗೊಳಿಸದ ಹೊರತು ಮೊಬೈಲ್ ಟವರ್ ಗಳ ಬಗ್ಗೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ ಎನ್ನುತ್ತಾರೆ ನಗರ ಪಾಲಿಕೆ ಅಧಿಕಾರಿಗಳು. ಇನ್ನು ಮುಂದಾದರೂ ಸರ್ಕಾರ ಎಚ್ಚೆತ್ತು ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕಾದ ಅನಿವಾರ್ಯತೆ ಇದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications