ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಯತ್ನ, ಸ್ಥಳೀಯರಿಂದ ರಕ್ಷಣೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಜುಲೈ 21: ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಳೆಯದಾದ ಸೇತುವೆಯಿಂದ ಜಿಗಿದು ಮಹಿಳೆಯು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಸೋಮವಾರ ಮೂರ್ನಾಡು ಸಮೀಪದ ಬಲಮುರಿ ಎಂಬಲ್ಲಿ ನಡೆದಿದೆ.

Recommended Video

ಕೊರೊನ ನಿಯಂತ್ರಣಕ್ಕೆ 5T ಸೂತ್ರ ಹೇಳಿದ ಯಡಿಯೂರಪ್ಪ | Oneindia Kannada

ಜೋರಾಗಿ ಬೀಳುತ್ತಿದ್ದ ಮಳೆಯ ನಡುವೆ ಬಲಮುರಿ ಸೇತುವೆ ಮೇಲೆ ಬಂದಿರುವ ಯಾರೂ ಓಡಾಡದಿರುವುದನ್ನು ಗಮನಿಸಿ, ಉಕ್ಕಿ ಹರಿಯುವ ಕಾವೇರಿ ನದಿಗೆ ಹಾರಲು ಮುಂದಾಗುತ್ತಿದ್ದಂತೆ ಆಟೋ ಒಂದು ಬಂದು ಅಡ್ಡಿಯುಂಟು ಮಾಡಿತು.

ಕೊಡಗಿನಲ್ಲಿ ಹೆಚ್ಚುತ್ತಿದೆ ಕೊರೊನಾ; ಆದರೂ ಲಾಕ್‌ಡೌನ್ ಯಾಕಿಲ್ಲ?ಕೊಡಗಿನಲ್ಲಿ ಹೆಚ್ಚುತ್ತಿದೆ ಕೊರೊನಾ; ಆದರೂ ಲಾಕ್‌ಡೌನ್ ಯಾಕಿಲ್ಲ?

ಆಟೋ ಅಲ್ಲಿಂದ ತೆರಳುತ್ತಿದಂತೆ ದೇವರಿಗೆ ಕೈಮುಗಿದು ಕಾರ್ಮಿಕ ಮಹಿಳೆಯೊಬ್ಬಳು ನೀರಿಗೆ ಜಿಗಿದಿದ್ದಾಳೆ. ಈ ಸಂದರ್ಭದಲ್ಲಿ ಇಲ್ಲಿಗೆ ಸಮೀಪದಲ್ಲೇ ಮಳೆಗೆ ಆಶ್ರಯ ಪಡೆದಿದ್ದ ಯುವಕರು ಮಹಿಳೆಯ ನಡೆ ಅನುಮಾನಾಸ್ಪದವಾಗಿದ್ದ ಕಾರಣ ತಮ್ಮ ಮೂಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದರು ನೋಡ ನೋಡುತ್ತಿದ್ದಂತೆ ಮಹಿಳೆ ನೀರಿಗೆ ಜಿಗಿಯುವುದು ಸೆರೆಯಾಯಿತು.

Woman Attempt Suicide By Jumping Into Cauveri River

ತಕ್ಷಣವೇ ಕಾರ್ಯಪ್ರವೃತ್ತರಾದ ಯುವಕರು ಧಾವಿಸಿ ಮಹಿಳೆಯನ್ನು ರಕ್ಷಿಸಿದ್ದಾರೆ. ಸದ್ಯಕ್ಕೆ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆತ್ಮಹತ್ಯೆ ಮಾಡಿಕೊಳಲ್ಲು ನಿರ್ದಿಷ್ಟ ಕಾರಣವೂ ತಿಳಿದು ಬಂದಿಲ್ಲ.

ಕೊಡಗಿನಲ್ಲಿ ಭಾರೀ ಮಳೆ; ಹಾರಂಗಿಯಿಂದ 5,000 ಕ್ಯೂಸೆಕ್​ ನೀರು ಬಿಡುಗಡೆಕೊಡಗಿನಲ್ಲಿ ಭಾರೀ ಮಳೆ; ಹಾರಂಗಿಯಿಂದ 5,000 ಕ್ಯೂಸೆಕ್​ ನೀರು ಬಿಡುಗಡೆ

ಈಕೆಯನ್ನು ನೀರಿನಿಂದ ರಕ್ಷಿಸಿದ ಸ್ಥಳಿಯರಾದ ಬೊಳ್ತಂಡ ಕಿರಣ್, ಚಂಬಾಂಡ ಸೂರಜ್ ಮತ್ತು ಬಲಮುರಿ ದೇವಾಲಯದ ಅರ್ಚಕ ಚಂದ್ರಶೇಖರ ಐತಾಳ್ ಸಾಹಸಕ್ಕೆ ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

English summary
A woman attempted to commit suicide by jumping from an old bridge built across the Cauvery River, took place on Monday at Balamuri, near Moornadu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X