ತಿ ನರಸೀಪುರದ ಗೃಹಿಣಿಯನ್ನು ಗಂಡನ ಮನೆಯವರೇ ಕೊಂದರೆ?
ಮೈಸೂರು, ಜನವರಿ 11: ತವರಿಂದ ವರದಕ್ಷಿಣೆ ತರುವಂತೆ ಪತಿಯು ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದರಿಂದ ಬೇಸತ್ತ ಗೃಹಿಣಿಯೊಬ್ಬರು ನೇಣಿಗೆ ಶರಣಾದ ಘಟನೆ ತಿ.ನರಸೀಪುರ ಪಟ್ಟಣದ ತಾಲೂಕು ಕಚೇರಿ ರಸ್ತೆಯಲ್ಲಿ ನಡೆದಿದೆ.
ಲಿಂಗರಾಜು ಎಂಬಾತನ ಪತ್ನಿ ಎಸ್.ತೇಜಸ್ವಿನಿ (28) ಆತ್ಮಹತ್ಯೆ ಮಾಡಿಕೊಂಡವರು. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ಹೇಮಾವತಿ ಹೊಸ ಬಡಾವಣೆಯ ನಿವಾಸಿ ಎಸ್.ಶಾಂತೇಶ್ ಎಂಬುವರ ಪುತ್ರಿ ಎಸ್.ತೇಜಸ್ವಿನಿಯನ್ನು ತಿ.ನರಸೀಪುರ ಪಟ್ಟಣದ ತಾಲೂಕು ಕಚೇರಿ ಮುಂಭಾಗವಿರುವ ದಿ.ಎಂ.ಮಹದೇವಪ್ಪ ಅವರ ಪುತ್ರ ಲಿಂಗರಾಜುಗೆ ಕೊಟ್ಟು ಮೂರು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು.[ಉಳ್ಳಾಲದ ಬ್ಯೂಟಿಷಿಯನ್ ಮಧುಶ್ರೀ ನೇಣಿಗೆ ಕಾರಣವೇನು?]

ಮದುವೆ ಸಂದರ್ಭದಲ್ಲಿ ಚಿನ್ನಾಭರಣದೊಂದಿಗೆ ಸಾಮರ್ಥ್ಯಕ್ಕೆ ತಕ್ಕಂತೆ ವರೋಪಚಾರವನ್ನು ಮಾಡಿ ವಿವಾಹ ಮಾಡಲಾಗಿತ್ತು. ಮದುವೆಯಾದ ಬಳಿಕ ಚೆನ್ನಾಗಿದ್ದ ಲಿಂಗರಾಜು, ಮಗುವಾದ ಬಳಿಕ ವರದಕ್ಷಿಣೆಗೆ ಹಿಂಸಿಸತೊಡಗಿದ್ದ. ಇದರಿಂದ ಬೇಸತ್ತಿದ್ದ ತೇಜಸ್ವಿನಿ, ಮಂಗಳವಾರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಷಯ ತಿಳಿದ ಪತಿ ಲಿಂಗರಾಜು, ಅತ್ತೆ ಸುಂದರಮ್ಮ, ನಾದಿನಿ ಅನ್ನಪೂರ್ಣಾ ಹಾಗೂ ಮೈದುನ ಶಿವಕುಮಾರ್ ಸೇರಿದಂತೆ ಮನೆಯಲ್ಲಿದ್ದವರೆಲ್ಲ ಮಗು ಮಹದೇವ ಪ್ರಸಾದ್ ಜೊತೆಗೆ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಸರ್ಕಲ್ ಇನ್ ಸ್ಪೆಕ್ಟರ್ ಮನೋಜ್ ಕುಮಾರ್ ಹಾಗೂ ಸಬ್ ಇನ್ ಸ್ಪೆಕ್ಟರ್ ಎನ್.ಆನಂದ್ ಪರಿಶೀಲನೆ ನಡೆಸಿದರು.[ಎಂಡೋಸಲ್ಫನ್ ಪೀಡಿತ ಒಂದೇ ಕುಟುಂಬದ ಐದು ಜನರು ಆತ್ಮಹತ್ಯೆ]
ತೇಜಸ್ವಿನಿಯ ಪೋಷಕರು ಆಗಮಿಸಿ, ವಿವಾಹವಾದ ಮೂರು ವರ್ಷಗಳಿಂದಲೂ ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳವನ್ನು ಪತಿಯೊಂದಿಗೆ ಆತನ ಮನೆಯವರು ನಿರಂತರವಾಗಿ ನೀಡುತ್ತಿದ್ದರು. ಅವರೆಲ್ಲರೂ ಸೇರಿ ಕೊಲೆ ಮಾಡಿ, ನೇಣು ಬಿಗಿದುಕೊಂಡಂತೆ ನೇತು ಹಾಕಿದ್ದಾರೆ ಎಂದು ದೂರು ನೀಡಿದರು. ಅಲ್ಲದೆ ಆರೋಪಿಗಳನ್ನು ಬಂಧಿಸುವವರೆವಿಗೂ ತೇಜಸ್ವಿನಿ ಶವವನ್ನು ತೆಗೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೇತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಬಂಧುಗಳನ್ನು ಸಮಾಧಾನಪಡಿಸಿ, ಪ್ರಕರಣ ದಾಖಲಿಸಿಕೊಂಡ ನಂತರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications