Mysuru Food Poison: ಮೈಸೂರಿನಲ್ಲಿ ದಾರುಣ ಘಟನೆ: ಗೃಹ ಪ್ರವೇಶದ ಊಟ ಸೇವಿಸಿ ಮಹಿಳೆ ಸಾವು
ಮೈಸೂರು, ಜೂನ್ 03: ಗೃಹ ಪ್ರವೇಶದ ಊಟ ಸೇವಿಸಿ ಮಹಿಳೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಮೈಸೂರು ತಾಲೂಕಿನ ಮಾರ್ಬಳ್ಳಿಯಲ್ಲಿ ನಡೆದಿದೆ.
ನಿನ್ನೆ (ಜೂನ್ 02) ಮಾರ್ಬಳ್ಳಿ ಗ್ರಾಮದ ಮನೆಯೊಂದರಲ್ಲಿ ಗೃಹ ಪ್ರವೇಶ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಬಹುತೇಕರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಆದರೆ ಈ ಸಮಾರಂಭವದಲ್ಲಿ ಊಟ ಸೇವಿಸಿದ್ದ ಗ್ರಾಮದ ಜನರು ಏಕಾಏಕಿ ಅಸ್ವಸ್ಥರಾಗಿದ್ದಾರೆ. ದುರಾದೃಷ್ಟವಶಾತ್ ಗೃಹ ಪ್ರವೇಶದ ಊಟ ತಿಂದ ಶಿವಮ್ಮ (65) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.

ಗೃಹಪ್ರವೇಶ ಕಾರ್ಯದಲ್ಲಿ ಊಟ ಸೇವಿಸಿದ ಬಳಿಕ ಗ್ರಾಮದ ಜನರಿಗೆ ವಾಂತಿ, ಭೇದಿ ಶುರುವಾಗಿದೆ. ಪುರುಷರು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರನ್ನು ಕೂಡಲೇ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಮಾರ್ಬಳ್ಳಿಯ ಗ್ರಾಮಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೃಹ ಪ್ರವೇಶಕ್ಕೆ ತಯಾರಿಸಿದ ಊಟ ಹಾಗೂ ಬಳಸಿದ ನೀರು, ಗ್ರಾಮಸ್ಥರು ಬಳಸುವ ನೀರಿನ ಬಗ್ಗೆ ಆರೋಗ್ಯಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರಿನಲ್ಲಿ ಗುರಾಯಿಸಿದಕ್ಕೆ ಯುವಕನ ಕೊಲೆ: ನಾಲ್ವರ ಬಂಧನ
ಮೈಸೂರು: ಗುರಾಯಿಸಿ ನೋಡಿದ ಎಂಬ ಕಾರಣಕ್ಕೆ ಯುವಕನನ್ನು ನಾಲ್ವರು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಘಟನೆ ಮೈಸೂರಿನ ಶಾಂತಿನಗರದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಉದಯಗಿರಿ ಬಳಿಯ ಶಾಂತಿನಗರ ನಿವಾಸಿ ಜಾವೀದ್ ಖಾನ್ ಎನ್ನುವವರ ಪುತ್ರ ಅರ್ಬಾಜ್ ಖಾನ್ (18) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಶಾದಿಲ್, ಶಹಬಾಜ್, ಶೋಯಬ್ ಮತ್ತು ಸಾಹಿಲ್ ಎನ್ನುವಾತನನ್ನು ಬಂಧಿಸಲಾಗಿದೆ.
ಕೊಲೆಯಾದ ಅರ್ಬಾಜ್ ಖಾನ್ ಮತ್ತು ನಾಲ್ವರು ಆರೋಪಿಗಳು ಶಾಂತಿನಗರದ ನಿವಾಸಿಗಳಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಶಾಂತಿನಗರದ ಲಾಲ್ ಮಸೀದಿ ಬಳಿ ಅರ್ಬಾಜ್ ಖಾನ್ ಗುರಾಯಿಸಿ ನೋಡಿದ್ದಾನೆ ಎನ್ನಲಾಗಿದೆ. ಈ ವಿಚಾರದಲ್ಲಿ ಗಲಾಟೆ ಶುರುವಾಗಿದ್ದು, ಆರೋಪಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಅರ್ಬಾಜ್ ಖಾನ್ಅನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಘಟನೆ ಸಂಬಂಧ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿಗಳನ್ನು ಬಂಧಿಸಲಾಗಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications