Mysuru Food Poison: ಮೈಸೂರಿನಲ್ಲಿ ದಾರುಣ ಘಟನೆ: ಗೃಹ ಪ್ರವೇಶದ ಊಟ ಸೇವಿಸಿ ಮಹಿಳೆ ಸಾವು
ಮೈಸೂರು, ಜೂನ್ 03: ಗೃಹ ಪ್ರವೇಶದ ಊಟ ಸೇವಿಸಿ ಮಹಿಳೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಮೈಸೂರು ತಾಲೂಕಿನ ಮಾರ್ಬಳ್ಳಿಯಲ್ಲಿ ನಡೆದಿದೆ.
ನಿನ್ನೆ (ಜೂನ್ 02) ಮಾರ್ಬಳ್ಳಿ ಗ್ರಾಮದ ಮನೆಯೊಂದರಲ್ಲಿ ಗೃಹ ಪ್ರವೇಶ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಬಹುತೇಕರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಆದರೆ ಈ ಸಮಾರಂಭವದಲ್ಲಿ ಊಟ ಸೇವಿಸಿದ್ದ ಗ್ರಾಮದ ಜನರು ಏಕಾಏಕಿ ಅಸ್ವಸ್ಥರಾಗಿದ್ದಾರೆ. ದುರಾದೃಷ್ಟವಶಾತ್ ಗೃಹ ಪ್ರವೇಶದ ಊಟ ತಿಂದ ಶಿವಮ್ಮ (65) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.

ಗೃಹಪ್ರವೇಶ ಕಾರ್ಯದಲ್ಲಿ ಊಟ ಸೇವಿಸಿದ ಬಳಿಕ ಗ್ರಾಮದ ಜನರಿಗೆ ವಾಂತಿ, ಭೇದಿ ಶುರುವಾಗಿದೆ. ಪುರುಷರು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರನ್ನು ಕೂಡಲೇ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಮಾರ್ಬಳ್ಳಿಯ ಗ್ರಾಮಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೃಹ ಪ್ರವೇಶಕ್ಕೆ ತಯಾರಿಸಿದ ಊಟ ಹಾಗೂ ಬಳಸಿದ ನೀರು, ಗ್ರಾಮಸ್ಥರು ಬಳಸುವ ನೀರಿನ ಬಗ್ಗೆ ಆರೋಗ್ಯಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರಿನಲ್ಲಿ ಗುರಾಯಿಸಿದಕ್ಕೆ ಯುವಕನ ಕೊಲೆ: ನಾಲ್ವರ ಬಂಧನ
ಮೈಸೂರು: ಗುರಾಯಿಸಿ ನೋಡಿದ ಎಂಬ ಕಾರಣಕ್ಕೆ ಯುವಕನನ್ನು ನಾಲ್ವರು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಘಟನೆ ಮೈಸೂರಿನ ಶಾಂತಿನಗರದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಉದಯಗಿರಿ ಬಳಿಯ ಶಾಂತಿನಗರ ನಿವಾಸಿ ಜಾವೀದ್ ಖಾನ್ ಎನ್ನುವವರ ಪುತ್ರ ಅರ್ಬಾಜ್ ಖಾನ್ (18) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಶಾದಿಲ್, ಶಹಬಾಜ್, ಶೋಯಬ್ ಮತ್ತು ಸಾಹಿಲ್ ಎನ್ನುವಾತನನ್ನು ಬಂಧಿಸಲಾಗಿದೆ.
ಕೊಲೆಯಾದ ಅರ್ಬಾಜ್ ಖಾನ್ ಮತ್ತು ನಾಲ್ವರು ಆರೋಪಿಗಳು ಶಾಂತಿನಗರದ ನಿವಾಸಿಗಳಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಶಾಂತಿನಗರದ ಲಾಲ್ ಮಸೀದಿ ಬಳಿ ಅರ್ಬಾಜ್ ಖಾನ್ ಗುರಾಯಿಸಿ ನೋಡಿದ್ದಾನೆ ಎನ್ನಲಾಗಿದೆ. ಈ ವಿಚಾರದಲ್ಲಿ ಗಲಾಟೆ ಶುರುವಾಗಿದ್ದು, ಆರೋಪಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಅರ್ಬಾಜ್ ಖಾನ್ಅನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಘಟನೆ ಸಂಬಂಧ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿಗಳನ್ನು ಬಂಧಿಸಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion












Click it and Unblock the Notifications