ಸೆಲ್ಫಿ ಹುಚ್ಚು: ನದಿಯಲ್ಲಿ ಮುಳುಗಿ ಮಹಿಳೆ ಸಾವು
ಮೈಸೂರು, ಮೇ 08: ಕಪಿಲಾ ನದಿಯ ದಡದಲ್ಲಿ ಮೊಬೈಲ್ ಮೂಲಕ ಸೆಲ್ಫಿ ಪೋಟೋ ತೆಗೆದುಕೊಳ್ಳಲು ಯತ್ನಿಸಿದ ಮಹಿಳೆ ನದಿಯೊಳಗೆ ಮುಳುಗಿ ಸಾವನ್ನಪ್ಪಿರುವ ಘಟನೆ ನಂಜನಗೂಡಿನ ಕಪಿಲಾ ನದಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಕವಿತಾ ಗಿರೀಶ (38) ಎಂದು ಗುರುತಿಸಲಾಗಿದ್ದು ಚಾಮರಾಜನಗರ ಜಿಲ್ಲೆಯ ನಂಜದೇವನಪುರದ ನಿವಾಸಿಯಾಗಿದ್ದಾರೆ.

ಕವಿತಾ ಅವರ ಗಂಡನಾದ ಗಿರೀಶ ಹಾಗೂ ತನ್ನ ಮಗಳೊಂದಿಗೆ ಪೂಜೆಗಾಗಿ ಕಪಿಲಾ ನದಿಯ ಹತ್ತಿರದ ದೇವಸ್ಥಾನಕ್ಕೆ ಬಂದಿದ್ದರು. ಆದರೆ, ಕವಿತಾ ನದಿ ಬಳಿ ಪೋಟೋ ಬೇಕೆಂದು ಸೆಲ್ಫಿ ತೆಗೆದುಕೊಳ್ಳುಲು ಪ್ರಯತ್ನಿಸಿದಾಗ ನದಿಗೆ ಜಾರಿ ಮುಳುಗಿದರು. ಬಳಿಕ ನೀರಿನ ರಭಸಕ್ಕೆ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರು ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ರಕ್ಷಣಾ ಕಾರ್ಯಚರಣೆಗೆ ಧಾವಿಸಿದ ಭದ್ರತಾ ಸಿಬ್ಬಂದಿಗಳು ಕಾರ್ಯಚರಣೆ ನಡಿಸಿ ಕವಿತಾ ಅವರ ಮೃತ ಶವವನ್ನು ಪತ್ತೆ ಹಚ್ಚಿದ್ದಾರೆ. ಶವವನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು ಈ ಪ್ರಕರಣ ಕುರಿತು ಸ್ಥಳೀಯ ಹುಲ್ಲಹಳ್ಳಿ ಪೋಲಿಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications