ಅಂಧನ ಬಾಳಿಗೆ ಬೆಳಕಾದ ಕೆಆರ್ ಪೇಟೆಯ ಯುವತಿ
ಕೆ.ಆರ್.ಪೇಟೆ, ಅಕ್ಟೋಬರ್ 28 : ಅಂಧ ಯುವಕನನ್ನು ಯುವತಿಯೊಬ್ಬಳು ಸರಳ ವಿವಾಹವಾಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ತಾಲೂಕಿನ ವಳಗೆರೆಮೆಣಸ ಗ್ರಾಮದ ಮಾಯಮ್ಮ ಮತ್ತು ಈರಯ್ಯ ದಂಪತಿಗಳ ಪುತ್ರ ಮಂಜುನಾಥ್ ಅಂಧನಾಗಿದ್ದು, ಈತನನ್ನು ಪಾಂಡವಪುರ ತಾಲೂಕಿನ ದಿ. ಸುಜಾತ ಮತ್ತು ಬಸವರಾಜು ಅವರ ಪುತ್ರಿ ವೀಣಾ ಎಂಬಾಕೆ ಪಟ್ಟಣದ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಸ್ಥಾನದಲ್ಲಿ ಸರಳ ವಿವಾಹವಾಗಿದ್ದು, ಆ ಮೂಲಕ ಅಂಧ ಯುವಕನ ಬಾಳಿಕೆ ಬೆಳಕು ನೀಡಿದ್ದಾರೆ.

ಎರಡೂ ಕಣ್ಣಿಲ್ಲದಿದ್ದರೂ ಬೇರೆಯವರ ಆಶ್ರಯದಲ್ಲಿ ಬದುಕದೇ ಸ್ವಾವಲಂಬಿಯಾಗಿ ಬದುಕುವ ಛಲವನ್ನು ರೂಢಿಸಿಕೊಂಡಿದ್ದ ಮಂಜುನಾಥನಿಗೆ ಯಾರೂ ಸಹ ಹೆಣ್ಣು ಕೊಡಲು ಮುಂದೆ ಬಂದಿರಲಿಲ್ಲ. ಇದರಿಂದಾಗಿ ವಿವಾಹವಾಗುವ ಆಸೆಯನ್ನು ಕೈಬಿಟ್ಟು ತನ್ನ ಪಾಡಿಗೆ ತಾನು ತೆಂಗಿನಕಾಯಿ ಸುಲಿಯುವ ಕಾಯಕವನ್ನು ಮಾಡುತ್ತಾ ತನ್ನ ಜೀವನಕ್ಕೆ ಸಾಕಾಗುವಷ್ಟು ಸಂಪಾದನೆ ಮಾಡುವ ಮೂಲಕ ಸಮಾಜದಲ್ಲಿ ಮಾದರಿಯಾಗಿ ಬದುಕುತ್ತಿದ್ದನು.
ಈತನನ್ನು ತುಂಬಾ ಹತ್ತಿರದಿಂದ ನೋಡಿದ್ದ ಮಂಜುನಾಥ್ ಅವರ ಹತ್ತಿರದ ಸಂಬಂಧಿಯೂ ಆಗಿರುವ ವೀಣಾ ಅವರ ಸಾಕು ತಾಯಿಯಾದ ಆದ ಹರವು ಗ್ರಾಮದ ಪಾರ್ವತಿ ಅವರಿಗೆ, ಮಂಜುನಾಥನಿಗೆ ತಮ್ಮ ಸಾಕು ಮಗಳನ್ನು ವಿವಾಹ ಮಾಡಿದರೆ ಇಬ್ಬರೂ ಸುಖವಾಗಿ ಬಾಳುತ್ತಾರೆ ಅಂತ ಅನ್ನಿಸಿದೆ. ಅಂಧನಾದ ಮಂಜುನಾಥನಿಗೂ ಆಸರೆಯೂ ಆಗುತ್ತದೆ ಎಂದು ಇಬ್ಬರಿಗೂ ತಮ್ಮ ಬಂಧುಗಳ ಸಮ್ಮುಖದಲ್ಲಿ ಗುರುವಾರ ಸರಳ ವಿವಾಹ ನೆರವೇರಿಸಿದರು.
ಸರಳ ವಿವಾಹವಾದ ನೂತನ ವಧೂ-ವರರನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಾ.ಎಸ್.ಕೃಷ್ಣಮೂರ್ತಿ, ಪುರಸಭಾ ಸದಸ್ಯ ಡಿ.ಪ್ರೇಮಕುಮಾರ್, ಜಿಲ್ಲಾ ಛಲವಾದಿ ಮಹಸಭಾ ಅಧ್ಯಕ್ಷ ಮಾಂಬಹಳ್ಳಿ ಜಯರಾಂ, ತಾಲೂಕು ಅಧ್ಯಕ್ಷ ಮುದುಗೆರೆ ಮಹೇಂದ್ರ, ಎಪಿಎಂಸಿ ನಿರ್ದೇಶಕ ಸೋಮಸುಂದರ್, ಗ್ರಾ.ಪಂ.ಸದಸ್ಯ ಶಿವರಾಂ ಸೇರಿದಂತೆ ಹಲವು ಗಣ್ಯರು ಹಾಜರಿದ್ದು ಶುಭಹಾರೈಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications