ಅಂಧನ ಬಾಳಿಗೆ ಬೆಳಕಾದ ಕೆಆರ್ ಪೇಟೆಯ ಯುವತಿ
ಕೆ.ಆರ್.ಪೇಟೆ, ಅಕ್ಟೋಬರ್ 28 : ಅಂಧ ಯುವಕನನ್ನು ಯುವತಿಯೊಬ್ಬಳು ಸರಳ ವಿವಾಹವಾಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ತಾಲೂಕಿನ ವಳಗೆರೆಮೆಣಸ ಗ್ರಾಮದ ಮಾಯಮ್ಮ ಮತ್ತು ಈರಯ್ಯ ದಂಪತಿಗಳ ಪುತ್ರ ಮಂಜುನಾಥ್ ಅಂಧನಾಗಿದ್ದು, ಈತನನ್ನು ಪಾಂಡವಪುರ ತಾಲೂಕಿನ ದಿ. ಸುಜಾತ ಮತ್ತು ಬಸವರಾಜು ಅವರ ಪುತ್ರಿ ವೀಣಾ ಎಂಬಾಕೆ ಪಟ್ಟಣದ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಸ್ಥಾನದಲ್ಲಿ ಸರಳ ವಿವಾಹವಾಗಿದ್ದು, ಆ ಮೂಲಕ ಅಂಧ ಯುವಕನ ಬಾಳಿಕೆ ಬೆಳಕು ನೀಡಿದ್ದಾರೆ.

ಎರಡೂ ಕಣ್ಣಿಲ್ಲದಿದ್ದರೂ ಬೇರೆಯವರ ಆಶ್ರಯದಲ್ಲಿ ಬದುಕದೇ ಸ್ವಾವಲಂಬಿಯಾಗಿ ಬದುಕುವ ಛಲವನ್ನು ರೂಢಿಸಿಕೊಂಡಿದ್ದ ಮಂಜುನಾಥನಿಗೆ ಯಾರೂ ಸಹ ಹೆಣ್ಣು ಕೊಡಲು ಮುಂದೆ ಬಂದಿರಲಿಲ್ಲ. ಇದರಿಂದಾಗಿ ವಿವಾಹವಾಗುವ ಆಸೆಯನ್ನು ಕೈಬಿಟ್ಟು ತನ್ನ ಪಾಡಿಗೆ ತಾನು ತೆಂಗಿನಕಾಯಿ ಸುಲಿಯುವ ಕಾಯಕವನ್ನು ಮಾಡುತ್ತಾ ತನ್ನ ಜೀವನಕ್ಕೆ ಸಾಕಾಗುವಷ್ಟು ಸಂಪಾದನೆ ಮಾಡುವ ಮೂಲಕ ಸಮಾಜದಲ್ಲಿ ಮಾದರಿಯಾಗಿ ಬದುಕುತ್ತಿದ್ದನು.
ಈತನನ್ನು ತುಂಬಾ ಹತ್ತಿರದಿಂದ ನೋಡಿದ್ದ ಮಂಜುನಾಥ್ ಅವರ ಹತ್ತಿರದ ಸಂಬಂಧಿಯೂ ಆಗಿರುವ ವೀಣಾ ಅವರ ಸಾಕು ತಾಯಿಯಾದ ಆದ ಹರವು ಗ್ರಾಮದ ಪಾರ್ವತಿ ಅವರಿಗೆ, ಮಂಜುನಾಥನಿಗೆ ತಮ್ಮ ಸಾಕು ಮಗಳನ್ನು ವಿವಾಹ ಮಾಡಿದರೆ ಇಬ್ಬರೂ ಸುಖವಾಗಿ ಬಾಳುತ್ತಾರೆ ಅಂತ ಅನ್ನಿಸಿದೆ. ಅಂಧನಾದ ಮಂಜುನಾಥನಿಗೂ ಆಸರೆಯೂ ಆಗುತ್ತದೆ ಎಂದು ಇಬ್ಬರಿಗೂ ತಮ್ಮ ಬಂಧುಗಳ ಸಮ್ಮುಖದಲ್ಲಿ ಗುರುವಾರ ಸರಳ ವಿವಾಹ ನೆರವೇರಿಸಿದರು.
ಸರಳ ವಿವಾಹವಾದ ನೂತನ ವಧೂ-ವರರನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಾ.ಎಸ್.ಕೃಷ್ಣಮೂರ್ತಿ, ಪುರಸಭಾ ಸದಸ್ಯ ಡಿ.ಪ್ರೇಮಕುಮಾರ್, ಜಿಲ್ಲಾ ಛಲವಾದಿ ಮಹಸಭಾ ಅಧ್ಯಕ್ಷ ಮಾಂಬಹಳ್ಳಿ ಜಯರಾಂ, ತಾಲೂಕು ಅಧ್ಯಕ್ಷ ಮುದುಗೆರೆ ಮಹೇಂದ್ರ, ಎಪಿಎಂಸಿ ನಿರ್ದೇಶಕ ಸೋಮಸುಂದರ್, ಗ್ರಾ.ಪಂ.ಸದಸ್ಯ ಶಿವರಾಂ ಸೇರಿದಂತೆ ಹಲವು ಗಣ್ಯರು ಹಾಜರಿದ್ದು ಶುಭಹಾರೈಸಿದ್ದಾರೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Allu Arjun: ವಿವಾಹ ವಾರ್ಷಿಕೋತ್ಸವ: ಪತ್ನಿಗೆ 1.81 ಕೋಟಿ ಬೆಲೆಯ ಮರ್ಸಿಡಿಸ್ ಕಾರು ಗಿಫ್ಟ್ ಕೊಟ್ಟ ಅಲ್ಲು ಅರ್ಜುನ್ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications