ಸರ್ಪ್ರೈಸ್ ಕೊಡುತ್ತೇನೆಂದು ಯುವತಿ ತನ್ನ ಭಾವಿ ಗಂಡನಿಗೆ ಮಾಡಿದ್ದೇನು?
ಮೈಸೂರು, ಮಾರ್ಚ್ 05: ಯುವತಿಯೊಬ್ಬಳು ತನ್ನ ಭಾವಿ ಗಂಡನನ್ನು ಚಾಕುವಿನಿಂದ ಇರಿದಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸುರಗಳ್ಳಿ ಗ್ರಾಮದಲ್ಲಿ ನಡೆದಿದೆ.
ಸುರಗಳ್ಳಿ ಗ್ರಾಮದ ಯುವಕ ರವಿಕುಮಾರ್ ಹಾಗೂ ಅರುಣಿ ಎಂಬ ಯುವತಿಗೂ ನಾಲ್ಕು ತಿಂಗಳ ಹಿಂದೆ ವಿವಾಹ ನಿಶ್ಚಯವಾಗಿತ್ತು. ಈ ವಿವಾಹಕ್ಕೆ ಎರಡೂ ಕುಟುಂಬಗಳ ಜತೆಗೆ ವಧು ವರರಿಗೂ ಸಂಪೂರ್ಣ ಒಪ್ಪಿಗೆ ಇತ್ತು.
ಇಬ್ಬರೂ ಕಳೆದ ಮೂರು ತಿಂಗಳಿನಿಂದ ಮೊಬೈಲ್ ಸಂಪರ್ಕದಲ್ಲಿದ್ದರು. ಸೋಮವಾರ ಸಂಜೆ ಯುವಕ ರವಿಕುಮಾರ್ ಯುವತಿ ಮನೆಗೆ ತೆರಳಿದ್ದಾನೆ. ಆಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಯುವಕ ಹಾಗೂ ಯುವತಿ ಇಬ್ಬರೇ ರೂಮಿನಲ್ಲಿ ಇದ್ದಾಗ ಅರುಣಿಯು, ""ನಿನಗೆ ಸರ್ಪ್ರೈಸ್ ತೋರಿಸುತ್ತೇನೆ'' ಎಂದು ರವಿಕುಮಾರ್ ಕಣ್ಣಿಗೆ ಬಟ್ಟೆ ಕಟ್ಟಿ ಚಾಕುವಿನಿಂದ ಏಕಾಏಕಿ ಇರಿದಿದ್ದಾಳೆ.
ಇದೀಗ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವ ಯುವತಿ, ತನಗೆ ಓದಲು ಇಷ್ಟ ಇತ್ತು. ಆದರೆ ಮನೆಯಲ್ಲಿ ಎಷ್ಟೇ ಹೇಳಿದರೂ ಕೇಳದೆ ಮದುವೆ ನಿಶ್ಚಯ ಮಾಡಿದರು. ಇದರಿಂದ ಬೇಸತ್ತು ತಾನೇ ಚಾಕು ಇರಿದಿರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications