Get Updates
Get notified of breaking news, exclusive insights, and must-see stories!

ಮಹಿಳೆಯರಿಗೆ ಅರ್ಧಕೂಲಿ, ಪೂರ್ತಿ ಸಂಬಳ: ಏನಿದು ಹೊಸ ಅಭಿಯಾನ?

ಮೈಸೂರು, ಏಪ್ರಿಲ್‌ 02: ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಜಾರಿಗೊಳಿಸಲಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮ-ನರೇಗಾ) ಯೋಜನೆಯಲ್ಲಿ ಮಹಿಳಾ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರವು ಸ್ತ್ರೀ ಚೇತನ ಯೋಜನೆಯನ್ನು ಜಾರಿಗೊಳಿಸಿದ ಬೆನ್ನಲ್ಲೇ ಮೈಸೂರು ಜಿಲ್ಲೆಯಲ್ಲೂ ಅಭಿಯಾನ ಪ್ರಾರಂಭಗೊಂಡಿದೆ.

ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಮಹಿಳೆಯರ ಭಾಗವಹಿಸಿಕೆ ಹೆಚ್ಚಿಸಲು ಸ್ತ್ರಿ ಚೇತನಾ ಅಭಿಯಾನದ ಮೂಲಕ ಪ್ರಯತ್ನ ನಡೆಸಿದೆ. ಮ-ನರೇಗಾ ಸಂಪೂರ್ಣವಾಗಿ ಮಹಿಳಾ ಸ್ನೇಹಿ ಎಂಬುದಾಗಿ ಪರಿಚಯಿಸುವ ಉದ್ದೇಶವನ್ನು ಸ್ತ್ರೀ ಚೇತನ ಅಭಿಯಾನ ಒಳಗೊಂಡಿದೆ. ಮ-ನರೇಗಾದಲ್ಲಿ ಶೇ.50ರಷ್ಟಿರುವ ಮಹಿಳಾ ಕೂಲಿಕಾರ್ಮಿಕರ ಸಂಖ್ಯೆಯನ್ನು ಶೇ.60ಕ್ಕೆ ಹೆಚ್ಚಿಸುವುದು ಅಭಿಯಾನದ ಉದ್ದೇಶವಾಗಿದೆ.

Women Empowerment Sthree Chethana Initiative in Karnataka s MGNREGA

ಮಾತ್ರವಲ್ಲದೇ, ಮೂರು ತಿಂಗಳು ಮಹಿಳಾ ಕೂಲಿಕಾರರಿಗೆ ನಿರಂತರ ಕೆಲಸ ಆದ್ಯತೆ ನೀಡುವುದು. ತಾಯಿ ಮತ್ತು ಮಕ್ಕಳಿಗೆ ಅನುಕೂಲವಾಗುವಂತೆ ಮಕ್ಕಳಿಗಾಗಿ ಕೂಸಿನ ಮನೆ, ವೈಯಕ್ತಿಕ ಕಾಮಗಾರಿಗಳಾದ ಇಂಗುಗುಂಡಿ, ವೈಯಕ್ತಿಕ ಶೌಚಾಲಯ, ಪೌಷ್ಟಿಕ ಕೈತೋಟ, ದನ ಮತ್ತು ಕುರಿ ಕಾಮಗಾರಿಗಳನ್ನು ನೀಡುವುದಾಗಿದೆ. ಮ-ನರೇಗಾ ಯೋಜನೆ ಮೂಲಕ ಮಹಿಳಾ ಸಬಲೀಕರಣ ಕೈಗೊಳ್ಳುವ ಬಹುಮುಖ್ಯ ಉದ್ದೇಶವನ್ನು ಸ್ತ್ರೀ ಚೇತನ ಕಾರ್ಯಕ್ರಮ ಹೊಂದಿದೆ.

ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿಯ ಮಾರ್ಗದರ್ಶನದ ಮೂಲಕ ಸ್ಥಳೀಯ ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಿವೆ. ಮ-ನರೇಗಾ ಕಾಮಗಾರಿಗಳಲ್ಲಿ ಪ್ರಸ್ತುತ ಮಹಿಳಾ ಪಾಲ್ಗೊಳ್ಳುವಿಕೆಯ ಪ್ರಮಾಣವು ರಾಜ್ಯ ಮಟ್ಟದಲ್ಲಿ ಶೇ 53.51ರಷ್ಟಿದ್ದರೆ ಮೈಸೂರು ಶೇ.50ರಷ್ಟಿದ್ದು, ಅದನ್ನು ವೃದ್ಧಿಸುವ ಉದ್ದೇಶವಿದೆ.

Women Empowerment Sthree Chethana Initiative in Karnataka s MGNREGA

ಸ್ತ್ರೀ ಚೇತನ ಅಭಿಯಾನವು ಮೂರು ತಿಂಗಳವರೆಗೆ ಜಾರಿಯಲ್ಲಿರಲಿದ್ದು, ಈ ಸಂದರ್ಭದಲ್ಲಿ ನರೇಗಾ ಯೋಜನೆಯಲ್ಲಿ ಮಹಿಳೆಯರಿಗೆ ಇರುವ ಸವಲತ್ತು ಮತ್ತು ಸೌಲಭ್ಯಗಳ ಬಗ್ಗೆ ಮನದಟ್ಟು ಮಾಡಿಕೊಡಲಾಗುತ್ತದೆ. ಈ ಮೂಲಕ ಮ-ನರೇಗಾ ಯೋಜನೆಯಲ್ಲಿ ಮತ್ತಷ್ಟು ಮಹಿಳೆಯರು ಪಾಲ್ಗೊಳ್ಳುವಂತೆ ಉತ್ತೇಜಿಸುವ ನೂತನ ಪ್ರಯತ್ನಕ್ಕೆ ಜಿಲ್ಲಾ ಪಂಚಾಯಿತಿ ಮುಂದಾಗಿರುವುದು ವಿಶೇಷವಾಗಿದೆ.

Take a Poll

ಅರ್ಧಕೂಲಿ, ಪೂರ್ತಿ ಸಂಬಳ

ರಾಷ್ಟ್ರೀಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡುವ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಆಯಾ ದಿನದ ನಿಗದಿತ ಅವಧಿಯಲ್ಲಿ ಅರ್ಧ ಕೆಲಸ ನಿರ್ವಹಿಸಿದರೂ ಪೂರ್ತಿ ಕೂಲಿ ಕೈಸೇರಲಿದೆ. ಅದರಂತೆ ವಿಶೇಷಚೇತನರು ಮತ್ತು ಹಿರಿಯ ನಾಗರಿಕರಿಗೆ ಕೆಲಸದಲ್ಲಿ ಶೇ.50ರಷ್ಟು ರಿಯಾಯಿತಿ ಘೋಷಿಸಿರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗರ್ಭಿಣಿಯರು ಹಾಗೂ ಬಾಣಂತಿಯರ ರಿಯಾಯಿತಿ ನೀಡಿದೆ. ನರೇಗಾ ಕೆಲಸ ಮಾಡುವ 6 ತಿಂಗಳು ತುಂಬಿದ ಗರ್ಭಿಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನದ ನಂತರದ ಆರು ತಿಂಗಳವರೆಗೆ ನಿಗದಿತ ಕೂಲಿ ಪಡೆಯಲು ಕೆಲಸದಲ್ಲಿ ಶೇ.50ರಷ್ಟು ರಿಯಾಯತಿ ಸೌಲಭ್ಯ ನೀಡಲಾಗುತ್ತಿದೆ.

ಮಹಿಳಾ ಸಬಲೀಕರಣದ ಜೊತೆಗೆ ಮ-ನರೇಗಾದಡಿ ಮಹಿಳಾ ಕೂಲಿಕಾರರ ಪಾಲ್ಗೊಳ್ಳುವಿಕೆಯನ್ನು ಶೇ.60ಕ್ಕೆ ಹೆಚ್ಚಿಸುವ ಉದ್ದೇಶದಿಂದ ಸ್ತ್ರೀ ಚೇತನ ಅಭಿಯಾನ ಎಂಬ ಮಹಿಳಾ ಸ್ನೇಹಿ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ. ಮೈಸೂರು ಜಿಲ್ಲೆಯ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಅಭಿಯಾನದಲ್ಲಿ ಭಾಗವಹಿಸಿ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು. ಅರ್ಹ ಮಹಿಳೆಯರು ಯೋಜನೆ ಸದುಪಯೋಗಪಡಿಸಿಕೊಳ್ಳುವ ಮೂಲಕ ಮಹಿಳಾ ಸಬಲೀಕರಣಕ್ಕೆ ಕೈ ಜೋಡಿಸಲಿ ಎನ್ನುವುದು ಸ್ಥಳೀಯ ಅಧಿಕಾರಿಗಳ ಆಶಯವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+