ಮೈಸೂರಿನಲ್ಲಿ ಹೆಂಡತಿ ಕತ್ತು ಸೀಳಿ ನಾಪತ್ತೆಯಾದ ಗಂಡ
ಮೈಸೂರು, ಜುಲೈ 26: ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ, ಪತಿ ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ಗಾಯತ್ರಿಪುರಂ ನಿವಾಸಿ ರೇಷ್ಮಾ (25) ಕೊಲೆಯಾದ ಮಹಿಳೆ. ಪತಿ ನದೀಫ್ ನಾಪತ್ತೆಯಾಗಿದ್ದು, ಆತನೇ ಕೊಲೆ ಮಾಡಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.
ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ನದೀಫ್, ರೇಷ್ಮಾರನ್ನು ಒಂಬತ್ತು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇವರಿಗೆ ಮೂವರು ಮಕ್ಕಳಿದ್ದಾರೆ. ಈ ಹಿಂದೆ ಕ್ಯಾತಮಾರನಹಳ್ಳಿಯಲ್ಲಿ ವಾಸವಿದ್ದ ಇವರು, ಮೂರು ದಿನಗಳ ಹಿಂದಷ್ಟೇ ಗಾಯತ್ರಿಪುರಂನಲ್ಲಿ ವಾಸವಾಗಿದ್ದರು.
ಕಳೆದ ಎರಡು ದಿನಗಳಿಂದಲೂ ಗಂಡ ಹೆಂಡತಿ ನಡುವೆ ಜಗಳವಾಗಿತ್ತು. ಬುಧವಾರ ರಾತ್ರಿಯೂ ಇಬ್ಬರ ನಡುವೆ ಜಗಳ ನಡೆದಿದ್ದು, ರೇಷ್ಮಾ ಆತ್ಮಹತ್ಯೆಗೆ ಯತ್ನಿಸಿದ್ದರು. ಆಗ ಅಕ್ಕಪಕ್ಕದವರು ಬುದ್ಧಿ ಹೇಳಿದ್ದರು ಎಂದು ತಿಳಿದುಬಂದಿದೆ.

ಜಗಳ ನಡೆದಾಗ ಮನೆಯಿಂದ ಹೊರಹೋಗಿದ್ದ ನದೀಫ್ ಬುಧವಾರ ರಾತ್ರಿ ಮನೆಗೆ ಬರಲಿಲ್ಲ. ಗುರುವಾರ ಆತ ಮನೆಗೆ ಬಂದ ವೇಳೆ ಮತ್ತೆ ಜಗಳವಾಗಿದೆ. ಕೆಲ ಹೊತ್ತಿನ ಬಳಿಕ ಮನೆಯಿಂದ ಹೊರಟಿದ್ದಾನೆ. ಇದಾದ ಬಳಿಕ ಅಕ್ಕಪಕ್ಕದ ಮನೆಯವರು ಒಳಗೆ ಹೋಗಿ ನೋಡಿದಾಗ ರೇಷ್ಮಾ ರಕ್ತಸಿಕ್ತವಾಗಿ ಬಿದ್ದದ್ದು ಕಂಡುಬಂದಿದೆ.
ಕೂಡಲೇ ನಜರಬಾದ್ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದು, ತಲೆಮರೆಸಿಕೊಂಡಿರುವ ರೇಷ್ಮಾಳ ಪತಿ ನದೀಫ್ ಗಾಗಿ ಹುಡುಕಾಟ ನಡೆಸಿದ್ದಾರೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications