ಮೈಸೂರಿನ ಕಲಾಮಂದಿರದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ
ಮೈಸೂರು, ಮಾರ್ಚ್ 24: ಮೈಸೂರು ಜಿಲ್ಲಾ ಹವ್ಯಾಸಿ ರಂಗಕರ್ಮಿಗಳ ವೇದಿಕೆಯು ವಿಶ್ವ ರಂಗಭೂಮಿ ದಿನಾಚರಣೆಯನ್ನು .ಮಾರ್ಚ್ 27ರಂದು ಮೈಸೂರಿನ ಕಲಾಮಂದಿರದಲ್ಲಿ ಹಮ್ಮಿಕೊಂಡಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ರಂಗಾಯಣದ ನಿರ್ದೇಶಕರಾದ ಭಾಗೀರಥಿಬಾಯಿ ಕದಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಹೆಚ್,ಚೆನ್ನಪ್ಪ, ರಂಗಾಯಣದ ಮಾಜಿ ನಿರ್ದೇಶಕರಾದ ಜನಾರ್ಧನ ಇವರು ಮುಖ್ಯ ಅಥಿತಿಗಳಾಗಿ ಭಾಗವಹಿಸುತಿದ್ದಾರೆ.
ರಂಗಸಮಾಜದ ಸದಸ್ಯರಾದ ಚಂದ್ರಕಾಂತ ಮತ್ತು ನಾಟಕ ಅಕಾಡೆಮಿ ಸದಸ್ಯರಾದ ಹೊನ್ನ ನಾಯ್ಕ ಮತ್ತು ಶ್ರೀಯುತ ಗಣೇಶ್ ಅಮಿನ್ ಗಡ ಉಪಸ್ತಿತರಿರುವರು. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪುರಸ್ಕೃತ ವೈ.ಎಂ.ಪುಟ್ಟಣ್ಣಯ್ಯ, ನಾಟಕ ಅಕಾಡೆಮಿ ಪುರಸ್ಕೃತರಾದ ಎಸ್.ಎಸ್.ಗಾಯತ್ರಿ ಮತ್ತು ಮಂಡ್ಯ ರಮೇಶ್ ಅವರನ್ನು ಅಭಿನಂದಿಸಲಾಗುತ್ತದೆ.
ವಿಶ್ವ ರಂಗಭೂಮಿ ಸಂದೇಶ ವಾಚನವನ್ನು ಹಿರಿಯ ರಂಗಕರ್ಮಿ ಎನ್.ಹರೀಶ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರಂಗಗೀತೆಯನ್ನು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.