ರಾಹುಲ್ ಗಾಂಧಿ ಪತ್ರದ ಎಫೆಕ್ಟ್.. ಗಾಯಗೊಂಡಿದ್ದ ಆನೆ ಮರಿಗೆ ಚಿಕಿತ್ಸೆ
ಮೈಸೂರು, ಅಕ್ಟೋಬರ್ 7: ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದ ವ್ಯಾಪ್ತಿಯಲ್ಲಿ ಗಾಯಗೊಂಡಿದ್ದ ಆನೆ ಮರಿಗೆ ಚಿಕಿತ್ಸೆ ಕೊಡಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಎಂ ಬಸವರಾಜ್ ಬೊಮ್ಮಾಯಿಗೆ ಬರೆದ ಪತ್ರ ಫಲಕಾರಿಯಾಗಿದ್ದು, ಅರಣ್ಯ ಇಲಾಖೆ ಕೂಡ ಸ್ಪಂದನೆ ನೀಡಿ ಚಿಕಿತ್ಸೆ ಕೊಡಿಸಿದೆ.
ಭಾರತ ಜೋಡೊ ಪಾದಯಾತ್ರೆಯ ಮಧ್ಯೆ 2 ದಿನ ವಿರಾಮದಲ್ಲಿದ್ದ ರಾಹುಲ್ ಗಾಂಧಿ ಎಚ್.ಡಿ.ಕೋಟೆ ಜಂಗಲ್ ರೆಸಾರ್ಟ್ನಲ್ಲಿ ತಂಗಿದ್ದರು. ಈ ವೇಳೆ ನಾಗರಹೊಳೆಯಲ್ಲಿ ಸಫಾರಿ ಮಾಡಿದ್ದರು. ಸಫಾರಿ ವೇಳೆ ತಾಯಿ ಆನೆಯೊಂದಿಗೆ ಮರಿಯಾನೆಯೊಂದು ತೀವ್ರ ಗಾಯಗೊಂಡು ನಿತ್ರಾಣ ಸ್ಥಿತಿಯಲ್ಲಿದ್ದನ್ನು ಗಮನಿಸಿದ್ದ ಅವರು, ಸೂಕ್ತ ಚಿಕಿತ್ಸೆ ಕೊಡಿಸಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಮಾಡಿ ಪತ್ರ ಬರೆದಿದ್ದರು.
ತಾಯಿಯ ಜತೆಗಿದ್ದ ಚಿಕ್ಕ ಆನೆ ಮರಿಯ ಬಾಲ ಮತ್ತು ಸೊಂಡಿಲಿಗೆ ಗಾಯಗಳಾಗಿವೆ. ಅದು ಜೀವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದೆ. ನಿಸರ್ಗ ಸಹಜವಾಗಿಯೇ ಪ್ರಕ್ರಿಯೆಗಳು ನಡೆಯಬೇಕು ಎಂಬ ಅಭಿಪ್ರಾಯ ಇದೆ. ಈ ಆನೆ ಮರಿಗೆ ತುರ್ತಾಗಿ ವೈದ್ಯಕೀಯ ನೆರವು ಬೇಕಿರುವುದರಲ್ಲಿ ಯಾವುದೇ ಸಂಶಯವಿಲ್ಲ, ಆನೆ ಮರಿಗೆ ಚಿಕಿತ್ಸೆ ನೀಡಿ, ಅದನ್ನು ರಕ್ಷಿಸುವ ವಿಚಾರದಲ್ಲಿ ರಾಜಕೀಯ ಗಡಿಗಳನ್ನು ಮೀರಿ ನಾನು ನಿಮ್ಮಲ್ಲಿ ವಿನಂತಿ ಮಾಡಿಕೊಳ್ಳುತ್ತಿದ್ದೇನೆ. ಸರಿಯಾದ ಚಿಕಿತ್ಸೆ ಲಭಿಸಿದರೆ ಆ ಮರಿಯು ಜೀವಂತವಾಗಿ ಉಳಿಯುತ್ತದೆ ಎನ್ನುವ ವಿಶ್ವಾಸವಿದೆ. ಈ ಆನೆ ಮರಿಯ ಜೀವ ಉಳಿಸಲು ನೀವು ಸಕಾಲಕ್ಕೆ ನೆರವು ನೀಡುತ್ತೀರಿ ಎಂಬ ಭರವಸೆ ಇದೆ" ಎಂದು ರಾಹುಲ್ ಪತ್ರದಲ್ಲಿ ಉಲ್ಲೇಖಿಸಿದ್ದರು.

ಇನ್ನು ಈ ಕುರಿತು ಪ್ರತಿಕ್ರಿಯಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ, " ರಾಹುಲ್ ಗಾಂಧಿ ನನಗೆ ಒಂದು ಪತ್ರ ಬರೆದಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಆನೆ ಮತ್ತು ಮರಿ ನೋಡಿದ್ದಾರೆ. ಎರಡೂ ಗಾಯಗೊಂಡಿರುವ ಬಗ್ಗೆ ಹಾಗೂ ಅವುಗಳಿಗೆ ಚಿಕಿತ್ಸೆ ಕೊಡಿಸುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಮಾಡಲಿದ್ದೇವೆ" ಎಂದು ಭರವಸೆ ನೀಡಿದ್ದರು.
ಇದು ಸುಮಾರು ಒಂದು ತಿಂಗಳ ಗಂಡು ಮರಿಯಾಗಿದ್ದು, ಆನೆಯ ಸೊಂಡಿಲು, ಬಾಲ ಹಾಗೂ ದೇಹದ ಅಲ್ಲಲ್ಲಿ ಅಲ್ಪಮಟ್ಟಿಗೆ ಗಾಯಗಳಾಗಿದ್ದವು. ಅಂತರಸಂತೆ ವನ್ಯಜೀವಿ ವಲಯದ ಬಿಸಿಲವಾಡಿ ಕೆರೆ ಬಳಿ ಡಾ.ಪ್ರಸನ್ನ, ಡಾ.ವಾಸಿಮ್ ಮತ್ತು ಇಲಾಖೆ ಸಿಬ್ಬಂದಿ ಆನೆ ಮರಿಗೆ ಚಿಕಿತ್ಸೆ ಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಕಾಡು ನಾಯಿ ದಾಳಿ ಮಾಡಿರಬಹುದು ಎಂದು ಶಂಕಿಸಲಾಗಿದ್ದು, ಈ ದಾಳಿ ವೇಳೆ ತಾಯಿ ಆನೆ ಕಾಡು ನಾಯಿಗಳನ್ನು ಓಡಿಸಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ ಕಾರ್ಯಾಚರಣೆ ಪ್ರಾರಂಭಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪಶುವೈದ್ಯ ಇಲಾಖೆ ವೈದ್ಯರಿಗೆ ತಾಯಿಯೊಂದಿಗೆ ಮರಿ ಆನೆ ಬಿಸಿಲವಾಡಿ ಕೆರೆ ಬಳಿ ಕಂಡಿದೆ. ಕೂಡಲೇ ಕುಮ್ಕಿ ಆನೆಗಳ ಸಹಾಯದಿಂದ ತಾಯಿ ಆನೆಯನ್ನು ಮರಿಯಿಂದ ಬೇರ್ಪಡಿಸಿ ಆನೆಗೆ ಚಿಕಿತ್ಸೆ ಕೊಡಲಾಗಿದೆ. ಸ್ಥಳದಲ್ಲಿ ಡಿಎಫ್ಒ ಚಿಕ್ಕನರಗುಂದ, ಎಸಿಎಫ್ ರಂಗಸ್ವಾಮಿ, ಅಂತರಸಂತೆ ವಲಯದ ಅರಣ್ಯಾಧಿಕಾರಿ ಸಿದ್ದರಾಜು, ಡಿ.ಬಿ.ಕುಪ್ಪೆ ವಲಯದ ಅರಣ್ಯ ಅಧಿಕಾರಿ ಮಧು, ವೈಲ್ಡ್ ಲೈಫ್ ವಾರ್ಡನ್ ಕೃತಿಕಾ, ಸಿಬ್ಬಂದಿ ಹಾಜರಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications