ಚಿತ್ರಗಳು : ದೇಜಗೌ ಅವರಿಗೆ ಅಂತಿಮ ನಮನ ಸಲ್ಲಿಸಿದ ಗಣ್ಯರು
ಮೈಸೂರು, ಜೂನ್ 01 : ಸೋಮವಾರ ನಿಧನರಾದ ಹಿರಿಯ ಸಾಹಿತಿ, ನಾಡೋಜ ದೇ.ಜವರೇಗೌಡ ಅವರ ಅಂತ್ಯಕ್ರಿಯೆ ಮಂಗಳವಾರ ನಡೆಯಿತು. ಆ ಮೂಲಕ ಕನ್ನಡದ ಹಿರಿಯ ಹಾಗೂ ಕುವೆಂಪು ಶಿಷ್ಯ ಪರಂಪರೆಯ ಕೊನೆಯ ಕೊಂಡಿ ಕಳಚಿ ಭೂತಾಯಿಯ ಒಡಲಲ್ಲಿ ಚಿರನಿದ್ರೆಗೆ ಜಾರಿತು.
ದೇಜಗೌ ಅವರ ಪಾರ್ಥೀವ ಶರೀರವನ್ನು ಅವರ ಮನೆಗೆ ಕೊಂಡೊಯ್ಯಲಾಗಿತ್ತು. ಮಂಗಳವಾರ ಬೆಳಗ್ಗೆ ಪಾರ್ಥೀವ ಶರೀರವನ್ನು ತೆರದ ವಾಹನದಲ್ಲಿ ಮೆರವಣಿಗೆ ಮೂಲಕ ಜಯಲಕ್ಷ್ಮೀಪುರಂನ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಗೆ ತರಲಾಯಿತು. ಅಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. [ಪದ್ಮಶ್ರೀ, ಪಂಪ, ಕರ್ನಾಟಕ ರತ್ನ ದೇಜಗೌ ಕಣ್ಮರೆ]

ಸಾರ್ವಜನಿಕ ದರ್ಶನದ ನಂತರ ಜಿಲ್ಲಾಡಳಿತದ ಗೌರವ ಹಾಗೂ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ದೇಜಗೌ ಅವರ ಪತ್ನಿ ಸಾವಿತ್ರಮ್ಮ ಅವರ ಸಮಾಧಿ ಪಕ್ಕದಲ್ಲೇ ದೇಜಗೌ ಅವರನ್ನು ಮಣ್ಣು ಮಾಡಲಾಯಿತು. ದೇಜಗೌ ಅವರ ಪುತ್ರ ಮೈಸೂರು ವಿವಿಯ ವಿಶ್ರಾಂತ ಕುಲಪತಿ ಶಶಿಧರ ಪ್ರಸಾದ್ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.
ಮುಖ್ಯಮಂತ್ರಿಗಳಿಂದ ಅಂತಿಮ ನಮನ : ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶ್ರೀ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಆವರಣಕ್ಕೆ ತೆರಳಿ ದೇಜಗೌ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.
ಅಂತಿಮ ನಮ ಸಲ್ಲಿಸಿದ ದೇವೇಗೌಡರು
ಸಿದ್ದರಾಮಯ್ಯ, ಸಚಿವರಿಂದ ಅಂತಿಮ ನಮನ
ಭೈರಪ್ಪ ಅವರಿಂದ ಅಂತಿಮ ನಮನ
ಪುಟ್ಟಣ್ಣಯ್ಯ ಅವರಿಂದ ಅಂತಿಮ ನಮನ
ವೀರಪ್ಪ ಮೊಯ್ಲಿ ಅವರಿಂದ ನಮನ
ನಂತರ ಮಾತನಾಡಿದ ಅವರು, 'ದೇಜಗೌ ಅಪ್ಪಟ ಕನ್ನಡ ಅಭಿಮಾನಿಯಾಗಿದ್ದರು. ರಾಷ್ಟ್ರಕವಿ ಕುವೆಂಪುರವರ ಆಶಯದಂತೆ ಮೈಸೂರು ವಿವಿಯಲ್ಲಿ ಕನ್ನಡ ಅಧ್ಯಯನ ಸಂಸ್ಥೆಯನ್ನು ಕುವೆಂಪುರವರ ಹೆಸರಿನಲ್ಲಿ ಸ್ಥಾಪಿಸಿದ್ದರು. ಕಡು ಬಡತನದ ಕುಟುಂಬದಲ್ಲಿ ಜನಿಸಿದ ಅವರು ಹಂತ ಹಂತವಾಗಿ ಮೇಲೆ ಬಂದು ಮೈಸೂರು ವಿವಿ ಕುಲಪತಿ ಸ್ಥಾನ ಅಲಂಕರಿಸಿದ್ದರು' ಎಂದು ಹೇಳಿದರು.
ಸುತ್ತೂರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ, ಮಾಜಿ ಪ್ರಧಾನಿ ದೇವೇಗೌಡ, ಆದಿ ಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಪ್ರಸಾದ್, ಸಕ್ಕರೆ ಸಚಿವ ಮಹದೇವ್ ಪ್ರಸಾದ್ ಮುಂತಾದ ಗಣ್ಯರು ದೇಜಗೌ ಅವರಿಗೆ ಅಂತಿಮ ನಮನ ಸಲ್ಲಿಸಿದರು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications