"ಜಂಬೂ ಸವಾರಿಯನ್ನು ಮಾವುತರೇ ಮಾಡುತ್ತಾರೆ. ಅದಕ್ಯಾಕೆ ಜನ?"
ಮೈಸೂರು, ಅಕ್ಟೋಬರ್ 10: ಈ ಬಾರಿಯ ಮೈಸೂರು ದಸರಾ ಆಚರಣೆ ಕುರಿತು ಈಗಾಗಲೇ ಕೆಲವು ಆಕ್ಷೇಪಗಳು ವ್ಯಕ್ತವಾಗುತ್ತಿವೆ. ಸರಳ ದಸರಾ ಎಂದು ಹೇಳಿ, ಕೋಟಿಗಟ್ಟಲೆ ಹಣ ಖರ್ಚು ಮಾಡುವ ಅವಶ್ಯಕತೆ ಏನಿದೆ? ಕೊರೊನಾ ಸೋಂಕಿನ ಬಿಕ್ಕಟ್ಟಿನ ನಡುವೆ, ನಗರದಲ್ಲಿ ಸುಮ್ಮನೆ ವಿದ್ಯುತ್ ದೀಪಾಲಂಕಾರ ಮಾಡುತ್ತಿದ್ದು, ಇದನ್ನು ನೋಡಲು ಜನರು ಬರದೇ ಇರುತ್ತಾರೆಯೇ? ಈ ಮೂಲಕ ಸೋಂಕು ಹರಡಲು ಕಾರಣವಾಗಬಹುದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಇದೀಗ ಈ ಕುರಿತು ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ. ಜಂಬೂ ಸವಾರಿಯನ್ನು ಮಾವುತರೇ ಮಾಡುತ್ತಾರೆ. ಅದಕ್ಯಾಕೆ ಜನ ಬೇಕು ಎಂದು, ಕಳೆದ ವರ್ಷ ದಸರಾ ಉದ್ಘಾಟಿಸಿದ್ದ ಎಸ್.ಎಲ್.ಭೈರಪ್ಪ ಅವರು ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ದಸರಾಗೆ ಜನ ಸೇರುವುದನ್ನು ಆಕ್ಷೇಪಿಸಿದರು. ಎಲ್ಲರೂ ಅವರ ಮನೆಯಲ್ಲೇ ದಸರಾ ಮಾಡಲಿ. ಬೆಟ್ಟದಲ್ಲಿ ಪೂಜೆ ಮಾಡಲಿ. ಅದಕ್ಕೆ 200 ಮಂದಿ ಯಾಕೆ ಭಾಗಿಯಾಗಬೇಕು?. ಜಂಬೂಸವಾರಿ ನಡೆಸೋದು ಮಾವುತರು. ಅದಕ್ಕೂ ಜನರು ಬೇಕಾಗಿಲ್ಲ. ಕೆಲವರು ದಸರಾದಿಂದ ಬಿಸಿನೆಸ್ ಅಂತಾರೆ. ಜನರನ್ನು ಒಟ್ಟಾಗಿ ಸೇರಿಸಿ ಕೊರೊನಾ ಹೆಚ್ಚಾದರೆ ಹೊಣೆ ಯಾರು? ಬಿಸಿನೆಸ್ ಎಲ್ಲ ಬಿಟ್ಟು ಜನರ ಆರೋಗ್ಯದ ಬಗ್ಗೆ ಯೋಚಿಸಿ" ಎಂದು ಸಲಹೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ದಸರಾ ಆಚರಣೆಗೆ ಅವಕಾಶ ಮಾಡಿಕೊಡುವ ಮೂಲಕ ಬಂಬೂ ಸವಾರಿ ಮಾಡಿಸಲು ಹೊರಟ್ಟಿದ್ದೀರಾ ಎಂದು ಎಂಎಲ್ ಸಿ ಎಚ್.ವಿಶ್ವನಾಥ್ ಪ್ರಶ್ನಿಸಿದ್ದರು. ಸರ್ಕಾರ ಸರಳ ದಸರಾ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಮಾಡಲು ಹೊರಟಿದ್ದು, ಮಹಿಷನನ್ನು ಸಂಹರಿಸಿದಂತೆ ಚುನಾಯಿತ ಪ್ರತಿನಿಧಿಗಳನ್ನೂ ಚಾಮುಂಡಿ ದೇವಿ ದಮನಿಸಲಿ ಎಂದು ಇತಿಹಾಸ ತಜ್ಞ ಪ್ರೊ.ಪಿ.ವಿ. ನಂಜರಾಜೇ ಅರಸ್ ಅವರೂ ಆಕ್ರೋಶ ವ್ಯಕ್ತಪಡಿಸಿದ್ದರು.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications