'ಪಾರಂಪರಿಕ ಕಟ್ಟಡ ಕೆಡವಿದರೆ ಮೈಸೂರು ಸಾಂಸ್ಕೃತಿಕ ನಗರಿಯಾಗಿರಲ್ಲ'
ಮೈಸೂರು, ಫೆಬ್ರವರಿ 12: ಪಾರಂಪರಿಕ ಕಟ್ಟಡಗಳನ್ನು ಉಳಿಸಬೇಕಾಗಿರುವುದು ನಾಗರೀಕರ ಕರ್ತವ್ಯ. ಇದು ನಮ್ಮ ಉಳಿವು ಅಳಿವಿನ ಅಸ್ಮಿತೆಯ ಪ್ರಶ್ನೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.
ಮೇಯರ್ ಪುಷ್ಪಲತಾ ಜಗನ್ನಾಥ್ ನೇತೃತ್ವದ ಪಾಲಿಕೆಯ ನಿಯೋಗವು ಯದುವೀರ್ ಅವರನ್ನು ಭೇಟಿ ಮಾಡಿ ಈ ಸಂಬಂಧ ಚರ್ಚಿಸಿತು. ಈ ವೇಳೆ ಮಾತನಾಡಿರುವ ಯದುವೀರ್, ಕಟ್ಟಡ ಕೆಡವಿ ಹೊಸತಾಗಿ ನಿರ್ಮಿಸಬೇಕು ಎಂದೇನಿಲ್ಲ. ಈ ಕುರಿತು ಹೆಚ್ಚಿನ ಚಿಂತನೆ ನಡೆಸಬೇಕು.ಪಾರಂಪರಿಕ ಕಟ್ಟಡಗಳಾದ ಲ್ಯಾನ್ಸ್ ಡೌನ್, ದೇವರಾಜ ಮಾರುಕಟ್ಟೆ ಕೆಡವಿ ಹೊಸತಾಗಿ ಕಟ್ಟುವುದಕ್ಕಿಂತ, ಪುನರುಜ್ಜೀವನಗೊಳಿಸುವುದು ಒಳಿತು ಎಂದರು.
ಪಾರಂಪರಿಕ ಕಟ್ಟಡಗಳೆಂದರೆ ಅವು ಕೇವಲ ಇಟ್ಟಿಗೆ, ಸಿಮೆಂಟ್ ಮಾತ್ರವಲ್ಲ. ಮೈಸೂರಿಗರಿಗೆ ಅದು ಅಸ್ಮಿತೆಯ ಸಂಗತಿ. ಆದ್ದರಿಂದ ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯ. ಶಿಥಿಲಗೊಂಡಿದೆ ಎಂಬ ನೆಪ್ಪವೊಡ್ಡಿ ನಗರದ ಎಲ್ಲಾ ಪಾರಂಪರಿಕ ಕಟ್ಟಡಗಳನ್ನ ಈ ರೀತಿ ಕೆಡವುತ್ತಾ ಹೋದರೆ ಮೈಸೂರನ್ನು ಸಾಂಸ್ಕೃತಿಕ ನಗರಿ ಎನ್ನಲು ಏನೂ ಉಳಿಯುವುದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.
ತಜ್ಞರ ವರದಿಗಳ ಪ್ರಕಾರ ಈ ಎರಡು ಪಾರಂಪರಿಕ ಕಟ್ಟಡಗಳನ್ನ ಪುನರುಜ್ಜೀವನಗೊಳಿಸಲು ಅವಕಾಶವಿದೆ. ಇದಕ್ಕಾಗಿ ಹಲವಾರು ರೀತಿಯ ತಂತ್ರಜ್ಞಾನಗಳು ಚಾಲ್ತಿಯಲ್ಲಿವೆ ಎಂದು ಯದುವೀರ್ ತಿಳಿಸಿದ್ದಾರೆ.

ಹಲವಾರು ನಗರಗಳಲ್ಲಿ ಉಳಿಸಿಕೊಳ್ಳಲಾಗಿದೆ
ಜೈಪುರ ಸೇರಿದಂತೆ ದೇಶದ ಹಲವಾರು ನಗರಗಳಲ್ಲಿ ಕುಸಿಯುವ ಹಂತದಲ್ಲಿದ ಕಟ್ಟಡಗಳನ್ನ ಉಳಿಸಿಕೊಳ್ಳಲಾಗಿದೆ ಎಂದ ಯದುವೀರ್ ಒಡೆಯರ್ ಅದೇ ರೀತಿ ಮೈಸೂರಿನ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಹಾಗೂ ದೇವರಾಜ ಮಾರುಕಟ್ಟೆಗಳನ್ನು ಉಳಿಸಿಕೊಳ್ಳಬೇಕು ಎಂದರು.

ಯಾಕಿಷ್ಟು ಆಸಕ್ತಿ ತೋರುತ್ತಿದೆ?
ಅರಮನೆ ವತಿಯಿಂದ ಪಾರಂಪರಿಕ ಕಟ್ಟಡ ಸಂರಕ್ಷಣೆ ಸಂಬಂಧ ತಜ್ಞರ ವರದಿ ತರಿಸಿಕೊಳ್ಳಲಾಗಿದೆ. ಎರಡರಲ್ಲೂ ಕಟ್ಟಡಗಳನ್ನು ಯತಾಸ್ಥಿತಿಯಲ್ಲಿ ಉಳಿಸಿಕೊಂಡು ಬಳಕೆಗೆ ಅವಕಾಶ ನೀಡಬಹುದು ಎಂದೇ ಉಲ್ಲೇಖಿಲಾಗಿದೆ. ಆದರೆ ಮಹಾನಗರ ಪಾಲಿಕೆ ಕೆಡವುದರಲ್ಲಿ ಯಾಕಿಷ್ಟು ಆಸಕ್ತಿ ತೋರುತ್ತಿದೆ ಎಂಬುದಕ್ಕೆ ನನ್ನ ಬಳಿ ಉತ್ತರವಿಲ್ಲ ಎಂದರು ಯದುವೀರ್.

ಸರ್ಕಾರದ ಸಹಕಾರ ಅಗತ್ಯ
ಸರ್ಕಾರ ಬಯಸಿದರೆ ಈ ವಿಚಾರವಾಗಿ ನಾನು ಚರ್ಚಿಸಲು ಸಿದ್ಧನಿದ್ದೇನೆ ಎಂದ ಯದುವೀರ್, ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ನಿಟ್ಟಿನಲ್ಲಿ ನಾವು ಸರ್ಕಾರದ ಜೊತೆಯಲ್ಲೇ ಮುಂದುವರೆಯಬೇಕು. ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳಬೇಕೆಂಬ ಭಾವನೆ ಜನರಲ್ಲಿದೆ. ಇದಕ್ಕೆ ಸರ್ಕಾರದ ಸಹಕಾರ ಅಗತ್ಯವಾಗಿಬೇಕು.

ಸರ್ಕಾರದೊಟ್ಟಿಗೆ ಮಾತನಾಡುತ್ತೇನೆ
ಅರಮನೆ ವತಿಯಿಂದ ತರಿಸಿಕೊಳ್ಳಲಾಗಿರುವ ತಜ್ಞರ ವರದಿಯಲ್ಲೂ, ಕಟ್ಟಡಗಳನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡು, ಬಳಕೆಗೆ ಅದನ್ನು ರಿಪೇರಿ ಕಾರ್ಯ ಮಾಡಿ ಮುಂದುವರೆಸಬೇಕೆಂದು ಒತ್ತಾಯಿಸುವ ಕುರಿತಾಗಿಯೂ ಸರ್ಕಾರದೊಟ್ಟಿಗೆ ಮಾತನಾಡುತ್ತೇನೆ ಎಂದು ಯದುವೀರ್ ಮೇಯರ್ ಗೆ ತಿಳಿಸಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications