ಯದುವೀರ್ ಒಡೆಯರ್ ಯದುವಂಶದ 27ನೇ ಅರಸ
ಮೈಸೂರು, ಫೆ. 23 : ಯದುವೀರ ಗೋಪಾಲರಾಜ ಅರಸ್ ದತ್ತು ಸ್ವೀಕಾರದ ವಿಧಿ ವಿಧಾನಗಳು ಮೈಸೂರು ಅರಮನೆಯಲ್ಲಿ ಮುಕ್ತಾಯಗೊಂಡಿವೆ. ಇಂದು ಮಧ್ಯಾಹ್ನ 1.20ರಿಂದ 1.50ರ ಮಿಥುನ ಲಗ್ನದಲ್ಲಿ ದತ್ತು ಸ್ವೀಕಾರ ಸಮಾರಂಭ ನಡೆದಿದೆ.
ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ಗಾಯಿತ್ರಿ ದೇವಿಯವರ ಮೊಮ್ಮಗ ಯದುವೀರ ಅರಸ್ ಮೈಸೂರು ಸಂಸ್ಥಾನದ ಉತ್ತರಾಧಿಕಾರಿಯಾಗಲಿದ್ದು, ಇಂದು ದತ್ತು ಸ್ವೀಕಾರ ಕಾರ್ಯಕ್ರಮ ಮುಕ್ತಾಯಗೊಂಡಿದೆ. ಯದುವೀರ ಗೋಪಾಲರಾಜ ಅರಸ್ ಗಾಯಿತ್ರಿದೇವಿಯವರ ಪುತ್ರಿ ತ್ರಿಪುರಸುಂದರಿ ದೇವಿ-ಸ್ವರೂಪ್ ಆನಂದ್ ಗೋಪಾಲರಾಜ ಅರಸ್ ದಂಪತಿಗಳ ಪುತ್ರ. [ಯದುವೀರ ಅರಸ್ ಪರಿಚಯ]
ಸಮಯ 3.31 : ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ಪಟ್ಟಾಭಿಷೇಕ ಮಹೋತ್ಸವ ಮೇ ತಿಂಗಳಿನಲ್ಲಿ ನಡೆಯುವ ಸಾಧ್ಯತೆ ಇದೆ. [ಮೈಸೂರು ಯದುವಂಶ ಒಡೆಯರ್ ವಂಶಾವಳಿ]
ಸಮಯ 3.05 : ದತ್ತು ಸ್ವೀಕಾರ ಸಮಾರಂಭದ ಬಳಿಕ ಕಾಗದ ಪತ್ರಗಳಿಗೆ ಸಹಿ ಹಾಕುವ ಮೂಲಕ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದೆ. [ದತ್ತು ಸ್ವೀಕಾರ ಸಮಾರಂಭದ ಚಿತ್ರಗಳು]
ಸಮಯ 2.26 : ಯದುವೀರ ಅರಸ್ ದತ್ತು ಸ್ವೀಕಾರ ಸಮಾರಂಭ ಮುಗಿದ ಬಳಿಕ ಅವರ ಹೆಸರನ್ನು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಂದು ಮರು ನಾಮಕರಣ ಮಾಡಲಾಗಿದೆ.
ಸಮಯ 2 ಗಂಟೆ : ಯದುವೀರ ಗೋಪಾಲರಾಜ ಅರಸ್ ದತ್ತು ಸ್ವೀಕಾರ ಸಮಾರಂಭ ಮುಕ್ತಾಯಗೊಂಡಿದ್ದು, ಪರಕಾಲ ಶ್ರೀಗಳ ಪಾದಪೂಜೆ ನಡೆಯುತ್ತಿದೆ.
ಸಮಯ 1.30 : ಅರಮನೆಗೆ ಪರಕಾಲ ಮಠದ ಶ್ರೀಗಳ ಆಗಮನ
ಸಮಯ 01.23 : ತ್ರಿಪುರ ಸುಂದರಿ ದೇವಾಲಯದ ಅರ್ಚಕ ಮದಹೇವಪ್ರಸಾದ್ ಸೇರಿ 40ಕ್ಕೂ ಪುರೋಹಿತರು ಪೂಜೆಗಳನ್ನು ಮಾಡುತ್ತಿದ್ದಾರೆ.
ಸಮಯ 1 ಗಂಟೆ : ಕಲ್ಯಾಣ ಮಂಟಪಕ್ಕೆ ಯದುವೀರ ಅರಸ್ ಆಗಮನ

ಸಮಯ 11 ಗಂಟೆ : ಗಣಪತಿ ಪೂಜೆ, ಹೋಮ ಅಂಬಾ ವಿಲಾಸ ಅರಮನೆಯಲ್ಲಿ ನಡೆಯುತ್ತಿದೆ. ಪಟ್ಟದ ಆನೆ, ಕುದುರೆಗಳನ್ನು ಸಿಂಗರಿಸಿ ದತ್ತು ಸ್ವೀಕಾರ ಸಮಾರಂಭಕ್ಕೆ ಕರೆತರಲಾಗಿದೆ.
ಸಮಯ 10 ಗಂಟೆ : ದತ್ತು ಸ್ವೀಕಾರದ ಬಳಿಕ ಯದುವೀರ್ ಗೋಪಾಲರಾಜ ಅರಸ್ ಅವರ ಹೆಸರನ್ನು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಂದು ಮರುನಾಮಕರಣ ಮಾಡಲಾಗುತ್ತದೆ.
ಸಮಯ 9 ಗಂಟೆ : ಕೋಡಿ ಸೋಮೇಶ್ವರ ದೇವಾಲಯದಿಂದ ದೇವರು ಕರೆ ತರಲು ಅರಮನೆಯಿಂದ ಮೆರವಣಿಗೆ ಸಾಗಿದೆ.
ಸಮಯ 8.30 : ರಾಣಿ ಪ್ರಮೋದಾದೇವಿ ಅವರ ನೇತೃತ್ವದಲ್ಲಿ ಅಂಬಾ ವಿಲಾಸ ಅರಮನೆಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ಸಿಕ್ಕಿದೆ.
ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ : ಸೋಮವಾರ ಮುಂಜಾನೆ 5 ಗಂಟೆಯಿಂದಲೇ ಪುರೋಹಿತರು ಹಾಗೂ ಜೋಯಿಸರ ಮೂರು ತಂಡಗಳು ಶುದ್ಧೀಕರಣ ಚಟುವಟಿಕೆಗಳೊಂದಿಗೆ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಮಧ್ಯಾಹ್ನ 1.20ರಿಂದ 1.50ರ ಮಿಥುನ ಲಗ್ನದಲ್ಲಿ ದತ್ತು ಸ್ವೀಕಾರ ಕಾರ್ಯಕ್ರಮ ನಡೆದಿದೆ. 300 ಮಂದಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. [ಮೈಸೂರಿಗರಿಗೆ ಯದುವೀರ ಅರಸ್ ಕೃತಜ್ಞತೆ]
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್














Click it and Unblock the Notifications