ಯದುವೀರ್ ಒಡೆಯರ್ ಯದುವಂಶದ 27ನೇ ಅರಸ
ಮೈಸೂರು, ಫೆ. 23 : ಯದುವೀರ ಗೋಪಾಲರಾಜ ಅರಸ್ ದತ್ತು ಸ್ವೀಕಾರದ ವಿಧಿ ವಿಧಾನಗಳು ಮೈಸೂರು ಅರಮನೆಯಲ್ಲಿ ಮುಕ್ತಾಯಗೊಂಡಿವೆ. ಇಂದು ಮಧ್ಯಾಹ್ನ 1.20ರಿಂದ 1.50ರ ಮಿಥುನ ಲಗ್ನದಲ್ಲಿ ದತ್ತು ಸ್ವೀಕಾರ ಸಮಾರಂಭ ನಡೆದಿದೆ.
ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ಗಾಯಿತ್ರಿ ದೇವಿಯವರ ಮೊಮ್ಮಗ ಯದುವೀರ ಅರಸ್ ಮೈಸೂರು ಸಂಸ್ಥಾನದ ಉತ್ತರಾಧಿಕಾರಿಯಾಗಲಿದ್ದು, ಇಂದು ದತ್ತು ಸ್ವೀಕಾರ ಕಾರ್ಯಕ್ರಮ ಮುಕ್ತಾಯಗೊಂಡಿದೆ. ಯದುವೀರ ಗೋಪಾಲರಾಜ ಅರಸ್ ಗಾಯಿತ್ರಿದೇವಿಯವರ ಪುತ್ರಿ ತ್ರಿಪುರಸುಂದರಿ ದೇವಿ-ಸ್ವರೂಪ್ ಆನಂದ್ ಗೋಪಾಲರಾಜ ಅರಸ್ ದಂಪತಿಗಳ ಪುತ್ರ. [ಯದುವೀರ ಅರಸ್ ಪರಿಚಯ]
ಸಮಯ 3.31 : ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ಪಟ್ಟಾಭಿಷೇಕ ಮಹೋತ್ಸವ ಮೇ ತಿಂಗಳಿನಲ್ಲಿ ನಡೆಯುವ ಸಾಧ್ಯತೆ ಇದೆ. [ಮೈಸೂರು ಯದುವಂಶ ಒಡೆಯರ್ ವಂಶಾವಳಿ]
ಸಮಯ 3.05 : ದತ್ತು ಸ್ವೀಕಾರ ಸಮಾರಂಭದ ಬಳಿಕ ಕಾಗದ ಪತ್ರಗಳಿಗೆ ಸಹಿ ಹಾಕುವ ಮೂಲಕ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದೆ. [ದತ್ತು ಸ್ವೀಕಾರ ಸಮಾರಂಭದ ಚಿತ್ರಗಳು]
ಸಮಯ 2.26 : ಯದುವೀರ ಅರಸ್ ದತ್ತು ಸ್ವೀಕಾರ ಸಮಾರಂಭ ಮುಗಿದ ಬಳಿಕ ಅವರ ಹೆಸರನ್ನು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಂದು ಮರು ನಾಮಕರಣ ಮಾಡಲಾಗಿದೆ.
ಸಮಯ 2 ಗಂಟೆ : ಯದುವೀರ ಗೋಪಾಲರಾಜ ಅರಸ್ ದತ್ತು ಸ್ವೀಕಾರ ಸಮಾರಂಭ ಮುಕ್ತಾಯಗೊಂಡಿದ್ದು, ಪರಕಾಲ ಶ್ರೀಗಳ ಪಾದಪೂಜೆ ನಡೆಯುತ್ತಿದೆ.
ಸಮಯ 1.30 : ಅರಮನೆಗೆ ಪರಕಾಲ ಮಠದ ಶ್ರೀಗಳ ಆಗಮನ
ಸಮಯ 01.23 : ತ್ರಿಪುರ ಸುಂದರಿ ದೇವಾಲಯದ ಅರ್ಚಕ ಮದಹೇವಪ್ರಸಾದ್ ಸೇರಿ 40ಕ್ಕೂ ಪುರೋಹಿತರು ಪೂಜೆಗಳನ್ನು ಮಾಡುತ್ತಿದ್ದಾರೆ.
ಸಮಯ 1 ಗಂಟೆ : ಕಲ್ಯಾಣ ಮಂಟಪಕ್ಕೆ ಯದುವೀರ ಅರಸ್ ಆಗಮನ

ಸಮಯ 11 ಗಂಟೆ : ಗಣಪತಿ ಪೂಜೆ, ಹೋಮ ಅಂಬಾ ವಿಲಾಸ ಅರಮನೆಯಲ್ಲಿ ನಡೆಯುತ್ತಿದೆ. ಪಟ್ಟದ ಆನೆ, ಕುದುರೆಗಳನ್ನು ಸಿಂಗರಿಸಿ ದತ್ತು ಸ್ವೀಕಾರ ಸಮಾರಂಭಕ್ಕೆ ಕರೆತರಲಾಗಿದೆ.
ಸಮಯ 10 ಗಂಟೆ : ದತ್ತು ಸ್ವೀಕಾರದ ಬಳಿಕ ಯದುವೀರ್ ಗೋಪಾಲರಾಜ ಅರಸ್ ಅವರ ಹೆಸರನ್ನು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಂದು ಮರುನಾಮಕರಣ ಮಾಡಲಾಗುತ್ತದೆ.
ಸಮಯ 9 ಗಂಟೆ : ಕೋಡಿ ಸೋಮೇಶ್ವರ ದೇವಾಲಯದಿಂದ ದೇವರು ಕರೆ ತರಲು ಅರಮನೆಯಿಂದ ಮೆರವಣಿಗೆ ಸಾಗಿದೆ.
ಸಮಯ 8.30 : ರಾಣಿ ಪ್ರಮೋದಾದೇವಿ ಅವರ ನೇತೃತ್ವದಲ್ಲಿ ಅಂಬಾ ವಿಲಾಸ ಅರಮನೆಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ಸಿಕ್ಕಿದೆ.
ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ : ಸೋಮವಾರ ಮುಂಜಾನೆ 5 ಗಂಟೆಯಿಂದಲೇ ಪುರೋಹಿತರು ಹಾಗೂ ಜೋಯಿಸರ ಮೂರು ತಂಡಗಳು ಶುದ್ಧೀಕರಣ ಚಟುವಟಿಕೆಗಳೊಂದಿಗೆ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಮಧ್ಯಾಹ್ನ 1.20ರಿಂದ 1.50ರ ಮಿಥುನ ಲಗ್ನದಲ್ಲಿ ದತ್ತು ಸ್ವೀಕಾರ ಕಾರ್ಯಕ್ರಮ ನಡೆದಿದೆ. 300 ಮಂದಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. [ಮೈಸೂರಿಗರಿಗೆ ಯದುವೀರ ಅರಸ್ ಕೃತಜ್ಞತೆ]
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral














Click it and Unblock the Notifications