ಯದುವೀರರಿಗೆ ಪಟ್ಟಾಭಿಷೇಕ ಹೀಗೆ ನಡೆಯುತ್ತದೆ
ಮೇ 27ರಂದು ಮುಂಜಾವಿನಿಂದಲೇ ಯದುವೀರ ಒಡೆಯರ್ ಅವರ ಪಟ್ಟಾಭಿಷೇಕ ಸಮಾರಂಭದ ಸಾಂಪ್ರದಾಯಿಕ ಆಚರಣೆಗಳು, ವಿಘ್ನೇಶ್ವರನ ಪೂಜೆ ಹಾಗೂ ಸ್ತಂಭ ಮುಹೂರ್ತದೊಂದಿಗೆ ಆರಂಭಗೊಳ್ಳಲಿದೆ. ನಂತರ ಗಂಗೆ ಪೂಜೆ ನೆರವೇರಿಸಿ ರಾಜವಂಶಸ್ಥ ಮಹಿಳೆಯರು ಪೂರ್ಣಕುಂಭದಲ್ಲಿ ಪಟ್ಟಾಭಿಷೇಕ ನಡೆಯಲಿರುವ ಕಲ್ಯಾಣ ಮಂಟಪಕ್ಕೆ ದೇವರನ್ನು ತರಲಿದ್ದಾರೆ.
ಹೀಗೆ ತಂದ ಪೂರ್ಣಕುಂಭಗಳನ್ನು ಯದುವಂಶದ ಮನೆ ದೇವರ ಸ್ಥಳದಲ್ಲಿರಿಸಿ, ಯದುವೀರ ಒಡೆಯರ್ ಅವರಿಗೆ ಅರಿಶಿನ ಹಚ್ಚಿ, ಅಭ್ಯಂಜನ ಸ್ನಾನ ಮಾಡಿಸಿದ ನಂತರ ಕಂಕಣ ಧಾರಣೆ ನಡೆಯುತ್ತದೆ. ಕಂಕಣಧಾರಿಯಾದ ಯದುವೀರ ಒಡೆಯರ್ ಅವರು ಅರಮನೆಯ ರಾಜಗುರುಗಳಾದ ಬ್ರಹ್ಮತಂತ್ರ ಪರಕಾಲ ಮಠದ ಸ್ವಾಮೀಜಿಗಳವರ ಗುರುಪಾದ ಪೂಜೆ ನೆರವೇರಿಸಲಿದ್ದು, ರಾಜ ಪರಂಪರೆಯಂತೆ ಬೆಳಗಿನಿಂದ ರಾತ್ರಿಯವರೆಗೆ ಹೋಮ ಹವನಾದಿಗಳು, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಮೇ 28ರಂದು ಪಟ್ಟಾಭಿಷೇಕ ನಡೆಯುವ ದಿನ ಸೂರ್ಯಾಸ್ತಕ್ಕೂ ಮುನ್ನವೇ ರಾಜವಂಶಸ್ಥರು ಯದುವೀರರೊಂದಿಗೆ ಅವರ ಖಾಸಗಿ ನಿವಾಸದಲ್ಲಿರುವ ವಿಘ್ನೇಶ್ವರನಿಗೆ ಪ್ರಥಮ ಪೂಜೆ ನಡೆಸಿ, ನಂತರ ಅರಮನೆ ಆವರಣದಲ್ಲಿರುವ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಯದುವಂಶದ ಸಂಪ್ರದಾಯದಂತೆ ಶ್ರೀ ಲಕ್ಷ್ಮೀನಾರಾಯಣ, ಶ್ರೀ ಉಮಾಮಹೇಶ್ವರ, ಶ್ರೀ ವಾಣಿಬ್ರಹ್ಮ ಹಾಗೂ ಶ್ರೀ ರಾಮತಾರಕ ಹೋಮಗಳನ್ನು ನಡೆಸಲಾಗುತ್ತದೆ. [ಮೈಸೂರಿನಲ್ಲಿ ಮರುಕಳಿಸಲಿದೆ ಗತಕಾಲದ ರಾಜವೈಭವ]

ಇದೇ ಸಂದರ್ಭ ದೇವತಾ ಮೂರ್ತಿಗಳಿಗೂ ಅಭಿಷೇಕ ಪೂಜೆಗಳು ನಡೆಯಲಿದ್ದು, ಬೆಳಗ್ಗೆ 9.30ರಿಂದ 10.30ರ ಒಳಗೆ ಸಲ್ಲುವ ಶುಭ ಕರ್ಕಾಟಕ ಲಗ್ನದಲ್ಲಿ ರಾಜಗುರುಗಳು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬೆಳ್ಳಿಯ ಪೀಠದಲ್ಲಿ ಆಸೀನರನ್ನಾಗಿಸಿ, ರಾಜಪರಂಪರೆಯ ಮೈಸೂರು ಪೇಟ ಧರಿಸಿ ಪಟ್ಟಾಧಿಕಾರದ ಮಾಹಿತಿ ಹಾಗೂ ಮಂತ್ರಾಕ್ಷರಗಳನ್ನೊಳಗೊಂಡ ಸ್ವರ್ಣದ ತಗಡಿನ ಬಾಸಿಂಗ ಕಟ್ಟುವ ಮೂಲಕ ಪಟ್ಟಾಧಿಕಾರ ನೆರವೇರಿಸುತ್ತಾರೆ. [ಯದುವಂಶದ ಮಹಾರಾಜರ ಭವ್ಯ ಇತಿಹಾಸ]
ಯದುವಂಶದ ರಾಜಗುರುಗಳಿಂದ ಪಟ್ಟಾಧಿಕಾರ ಸ್ವೀಕರಿಸಿದ ನಂತರ ಮೈಸೂರು ಸಂಸ್ಥಾನದ ಅಧಿಕೃತ ಸಿಂಹಾಸನಾಧಿಪತಿಯಾದ ಯದುವೀರರು ಗುರು ಹಿರಿಯರು, ಮಾತಾಪಿತರು, ಬಂಧು-ಬಾಂಧವರ ಆಶೀರ್ವಾದ ಪಡೆದು ಯದು ಪರಂಪರೆಯಂತೆ ನಾಡಿನ ಹಾಗೂ ರಾಜಮನೆತನದ ಅದಿ ದೇವತೆ ಶ್ರೀ ಚಾಮುಂಡೇಶ್ವರಿ ಸೇರಿದಂತೆ ನಗರದಲ್ಲಿರುವ ಸುಮಾರು 16 ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ.
ಧಾರ್ಮಿಕ ಕಾರ್ಯಕ್ರಮಗಳು ಮುಗಿದ ನಂತರ ರಾತ್ರಿ 7 ಗಂಟೆಯಿಂದ ಸಾರ್ವಜನಿಕರ ವೀಕ್ಷಣೆಗಾಗಿ ಸಾಂಕೇತಿಕವಾಗಿ ಆರತಕ್ಷತೆ ಕಾರ್ಯಕ್ರಮ ಜರುಗಲಿದ್ದು, ವಿಶೇಷ ದೀಪಾಲಂಕಾರದ ವ್ಯವಸ್ಥೆ ಮಾಡಲಾಗುತ್ತದೆ. ಪಟ್ಟಾಭಿಷೇಕದ ಸಂದರ್ಭ ಗಜರಾಜನಿಗೆ ತೀರ್ಥ ಪ್ರೋಕ್ಷಣೆ ಮಾಡಿ, ಪೂಜೆ ಸಲ್ಲಿಸುವ ಸಂಪ್ರದಾಯವಿರುವುದರಿಂದ ಪಟ್ಟದ ಆನೆಯ ಅವಶ್ಯಕತೆಯಿದ್ದು, ಪಟ್ಟಾಭಿಷೇಕಕ್ಕೆ ಗಂಡಾನೆ ಕೋರಿ ಅರಣ್ಯ ಇಲಾಖೆಗೆ ರಾಣಿ ಪ್ರಮೋದಾದೇವಿ ಅವರು ಮನವಿ ಸಲ್ಲಿಸಿದ್ದಾರೆ. [ಬೆಟ್ಟದ ಕೋಟೆ ಮನೆತನ ರಾಜ ಯದುವೀರ್ ಪರಿಚಯ]
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications