ಜೂನ್ 27ಕ್ಕೆ ಯದುವೀರ್ ಒಡೆಯರ್ ವಿವಾಹ
ಮೈಸೂರು, ಏಪ್ರಿಲ್ 26 : ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ವಿವಾಹಕ್ಕೆ ಮುಹೂರ್ತ ನಿಗದಿಯಾಗಿದೆ. ಜೂನ್ 27ರಂದು ಅಂಬಾವಿಲಾಸ ಅರಮನೆಯಲ್ಲಿ ವಿವಾಹ ಮಹೋತ್ಸವ ನಡೆಯಲಿದೆ.[ಯದುವೀರ್ - ತ್ರಿಷಿಕಾ ಮದುವೆ ಚಿತ್ರಗಳು]
ವಿವಾಹಕ್ಕೆ ಸಂಬಂಧಿಸಿದ ಲಗ್ನಪತ್ರಿಕೆ ಶಾಸ್ತ್ರ ಅಂಬಾವಿಲಾಸ ಅರಮನೆಯ ಚಾಮುಂಡಿತೊಟ್ಟಿಯಲ್ಲಿ ಸೋಮವಾರ ಬೆಳಗ್ಗೆ 10.15 ರಿಂದ 10.40ರ ಒಳಗಿನ ಶುಭ ಮಿಥುನ ಲಗ್ನದಲ್ಲಿ ನಡೆಯಿತು. ರಾಜಸ್ಥಾನದ ಡುಂಗರಾಪುರ್ ರಾಜವಂಶಸ್ಥರಾದ ತ್ರಿಷಿಕಾ ಕುಮಾರಿ ಸಿಂಗ್ ಅವರ ತಂದೆ ಹರ್ಷವರ್ಧನ್ ಸಿಂಗ್ ಹಾಗೂ ಪೋಷಕರು ಲಗ್ನ ಪತ್ರಿಕೆ ಶಾಸ್ತ್ರದಲ್ಲಿ ಉಪಸ್ಥಿತರಿದ್ದರು. [ಯದುವೀರ ಪಟ್ಟಾಭಿಷೇಕದ ಚಿತ್ರಗಳು]

ರಾಜಸ್ಥಾನದ ಡುಂಗರಾಪುರ್ ಮನೆತನದ ಹರ್ಷವರ್ಧನ್ ಸಿಂಗ್, ಮಹೇಶ್ರೀ ಕುಮಾರಿ ಅವರ ಕಿರಿಯ ಪುತ್ರಿ ತ್ರಿಷಿಕಾ ಕುಮಾರಿ ಸಿಂಗ್ ಅವರ ಜೊತೆ ಯದುವೀರ್ ಒಡೆಯರ್ ಅವರ ವಿವಾಹ ನಿಶ್ಚಯವಾಗಿತ್ತು. ಜೂನ್ 24 ರಂದು ಮದುವೆ ಕಾರ್ಯಗಳು ಆರಂಭವಾಗಲಿದ್ದು, ಜೂನ್ 27ರಂದು ಅಂಬಾ ವಿಲಾಸ ಅರಮನೆಯಲ್ಲಿ ಅದ್ದೂರಿ ವಿವಾಹ ನಡೆಯಲಿದೆ.[ಯದುವೀರ ಒಡೆಯರ್ ಭಾವಿ ಪತ್ನಿ ರಾಜಸ್ಥಾನಿ ಕುವರಿ]
2015ರ ಫೆಬ್ರವರಿ 23ರಂದು ದತ್ತು ಸ್ವೀಕಾರ ಸಮಾರಂಭ ಅರಮನೆಯಲ್ಲಿ ನಡೆದಿತ್ತು. ಮೇ 28ರಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪಟ್ಟಾಭಿಷೇಕ ಕಾರ್ಯಕ್ರಮ ನಡೆದಿತ್ತು. ನಂತರ ದಸರಾದಲ್ಲಿ ಅವರು ಖಾಸಗಿ ದರ್ಬಾರ್ ನಡೆಸಿದ್ದರು. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪಟ್ಟಾಭಿಷೇಕ ಕಾರ್ಯಕ್ರಮ ಮತ್ತು ಖಾಸಗಿ ದರ್ಬಾರ್ ನೋಡಲು ತ್ರಿಷಿಕಾ ಕುಮಾರಿ ಸಿಂಗ್ ಮೈಸೂರಿಗೆ ಆಗಮಿಸಿದ್ದರು. [ಯುವರಾಣಿ ತ್ರಿಷಿಕಾ ಕಾಣದೆ ನಿರಾಶರಾದ ಜನ]
ಅರಮನೆಯಲ್ಲಿ ನಡೆದ ಯದುವೀರ್ ಒಡೆಯರ್ ಅವರ ದತ್ತು ಸ್ವೀಕಾರ ಮತ್ತು ಪಟ್ಟಾಭಿಷೇಕ ಕಾರ್ಯಕ್ರಮವನ್ನು ಕಣ್ತುಂಬಿಕೊಂಡ ಜನರಿಗೆ, ಶೀಘ್ರದಲ್ಲಿಯೇ ಅವರ ವಿವಾಹ ಮಹೋತ್ಸವನ್ನು ನೋಡುವ ಅವಕಾಶ ದೊರೆಯಲಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications