ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಡುವಂತೆ ಯದುವೀರ್ ಗೆ ಮನವಿ
ಮೈಸೂರು, ಫೆಬ್ರವರಿ 14:ನಗರದ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಗೆ ರಾಜವಂಶಸ್ಥ ಚಾಮರಾಜ ಒಡೆಯರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಗೆಯೇ ಕಟ್ಟಡಗಳ ಮಾಹಿತಿ ತಿಳಿದುಕೊಂಡರು.
ಈ ವೇಳೆ ಅಲ್ಲಿದ್ದ ಸಾರ್ವಜನಿಕರು ಸದರಿ ಕಟ್ಟಡಗಳನ್ನು ನಿಮ್ಮ ಹಿರಿಯರು ನಿರ್ಮಿಸಿದ್ದಾರೆ. ಆದರೆ ಸರ್ಕಾರ ಇದನ್ನು ಕೆಡವಿ ಪುನಃ ನಿರ್ಮಿಸಲು ಹೊರಟಿದೆ. ಹೀಗಾಗಿ ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಡಿ ಎಂದು ಯದುವೀರ ಅವರಿಗೆ ಮನವಿ ಮಾಡಿಕೊಂಡರು.
ಸರ್ಕಾರ ಮೈಸೂರಿನ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಹಾಗೂ ದೇವರಾಜ ಮಾರುಕಟ್ಟೆ ಕೆಡವಿ ಪುನಃ ನಿರ್ಮಿಸಲು ಮುಂದಾಗಿದ್ದು, ಈ ಬಗ್ಗೆ ಯದುವೀರ್ ಮಾಧ್ಯಮದೊಂದಿಗೆ ಮಾತನಾಡಿ, ಕಟ್ಟಡ ಶಿಥಿಲಗೊಂಡಿದೆ ಎಂಬ ನೆಪವೊಡ್ಡಿ ನಗರದ ಎಲ್ಲ ಪಾರಂಪರಿಕ ಕಟ್ಟಡಗಳನ್ನು ಈ ರೀತಿ ಕೆಡವುತ್ತಾ ಹೋದರೆ ಮೈಸೂರನ್ನು ಸಾಂಸ್ಕೃತಿಕ ನಗರಿ ಎನ್ನಲು ಏನು ಉಳಿಯುವುದಿಲ್ಲ.

ತಜ್ಞರ ವರದಿ ಪ್ರಕಾರ ಎರಡು ಪಾರಂಪರಿಕ ಕಟ್ಟಡಗಳನ್ನು ಪುನರುಜ್ಜೀವನಗೊಳಿಸಲು ಅವಕಾಶವಿದೆ. ಇದಕ್ಕಾಗಿ ಹಲವು ರೀತಿಯ ತಂತ್ರಜ್ಞಾನಗಳು ಕೂಡ ಚಾಲ್ತಿಯಲ್ಲಿವೆ. ದೇಶದ ಹಲವೆಡೆ ನಾನಾ ನಗರಗಳಲ್ಲಿ ಕುಸಿಯುವ ಹಂತದಲ್ಲಿದ್ದ ಕಟ್ಟಡಗಳನ್ನು ಉಳಿಸಿಕೊಳ್ಳಲಾಗಿದೆ. ಅದೇ ರೀತಿ ಮೈಸೂರಿನ ಲ್ಯಾನ್ಸ್ ಡೌನ್ ಹಾಗೂ ದೇವರಾಜ ಮಾರುಕಟ್ಟೆಯನ್ನು ಸಹ ಉಳಿಸಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು.
ಪಾರಂಪರಿಕ ಕಟ್ಟಡಗಳಿಂದ ಘೋಷಣೆಯಾಗಿರುವ ಈ ಕಟ್ಟಡಗಳು ಸರಿಯಾಗಿ ನಿರ್ವಹಣೆಯಿಲ್ಲದೇ ಸೊರಗಿವೆ. ಸಂರಕ್ಷಣೆ ಕಾರ್ಯ ನಡೆಯುವಾಗ ಈ ಹಿಂದೆಯೂ ಕಮಾನನ್ನು ಉದ್ದೇಶಪೂರ್ವಕವಾಗಿ ಬೀಳಿಸಲಾಗಿತ್ತು. ಹೊಸ ಕಟ್ಟಡ ನಿರ್ಮಾಣ ಮಾಡಲು ನಗರ ಪಾಲಿಕೆಯಲ್ಲಿ ವಿರೋಧ ಭಿನ್ನಾಭಿಪ್ರಾಯಗಳು ಒಟ್ಟಾಗಿದೆ. ಮನಬಂದಂತೆ ನಿರ್ಧಾರ ಕೈಗೊಂಡಿರುವುದು ಹಲವು ಅನುಮಾನ ಉಂಟು ಮಾಡಿದೆ ಎಂದು ಇನ್ನು ಇಲ್ಲಿನ ಜನರು ದೂರುತ್ತಾರೆ.
ಗೋಲಗುಂಬಜ್ , ಗಗನ್ ಮಹಲ್, ಲೋಟಸ್ ಮಹಲ್ ಇತ್ಯಾದಿ ಕಟ್ಟಡಗಳಂತೆ ಮೈಸೂರಿನ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸಬೇಕು. ಆ ಮೂಲಕ ಅಲ್ಲಿ ಕೆಲಸ ಮಾಡುವ ನಮ್ಮ ಹಾಗೂ ಕುಟುಂಬದ ಸದಸ್ಯರೆಲ್ಲರೂ ನೆಮ್ಮದಿ ಜೀವನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡುತ್ತಿದ್ದಾರೆ.
ಇದೇ ವೇಳೆ ಮೈಸೂರಿನ ಪಾರಂಪರಿಕ ಕಟ್ಟಡ ಒಡೆಯುವ ಹಿಂದೆ ಕಮಿಷನ್ ದಂಧೆ ನಡೆಯುತ್ತಿದೆ ಎಂಬ ಮಾತು ಸಹ ದಟ್ಟವಾಗುತ್ತಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications