ಅರಮನೆಯಲ್ಲಿ ಆಯುಧ ಪೂಜೆ ನೆರವೇರಿಸಿದ ಯದುವೀರ್ ಒಡೆಯರ್
Recommended Video

ಮೈಸೂರು, ಅಕ್ಟೋಬರ್.18 : ನವರಾತ್ರಿಯ ಅಂಗವಾಗಿ ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ ಮನೆಮಾಡಿದ್ದು, ಮೈಸೂರು ಅರಮನೆಯಲ್ಲೂ ಪೂಜೆ ನಡೆಯುತ್ತಿದೆ.
ರಾಜವಂಶಸ್ಥರಾದ ಶ್ರೀಕಂಠರಾಜೇ ಅರಸ್, ಮಹೇಂದ್ರ ರಾಜೇ ಅರಸ್ ಅವರಿಂದ ಪೂಜೆ ನಡೆಸಲಾಗುತ್ತಿದೆ. ದೇವಾಲಯದ ಪ್ರಾಂಗಣದಲ್ಲಿ ಆಯುಧಗಳನ್ನು ಇರಿಸಿ ಪೂಜೆ ಮಾಡಿದ ನಂತರ ಪಲ್ಲಕ್ಕಿಯಲ್ಲಿ ಇರಿಸಿ ಮೆರವಣಿಗೆ ಮಾಡಲಾಗುತ್ತದೆ.
ಅರಮನೆಯಲ್ಲಿ ಸಾಂಪ್ರದಾಯಿಕವಾಗಿ ಆಯುಧ ಪೂಜೆ ನಡೆದಿದ್ದು, ರಾಜವಂಶಸ್ಥರು ಬಳಸುತ್ತಿದ್ದ ಖಾಸಗಿ ಆಯುಧಗಳಿಗೆ ರಾಜಪೋಷಕ ತೊಟ್ಟಿರುವ ಯದುವೀರ್ ಒಡೆಯರ್ ಪೂಜೆ ಸಲ್ಲಿಸಿದ್ದಾರೆ.

ಜಯಾ ಮಾರ್ತಾಂಡ ದ್ವಾರದ ಮಾರ್ಗವಾಗಿ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆಯೊಂದಿಗೆ ಹೋಗಿ ಪಟ್ಟದ ಕತ್ತಿ ಹಾಗೂ ಇನ್ನಿತರ ಕೆಲವು ಆಯುಧಗಳನ್ನು ತೊಳೆದು ವಿಶೇಷವಾಗಿ ಪೂಜಿಸಲಾಗುತ್ತದೆ.
ಯದುವಂಶದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬೆಳಗ್ಗೆ 10 ರಿಂದ 10.35 ರ ಶುಭ ಲಗ್ನದಲ್ಲಿ ಆಯುಧ ಪೂಜೆ ಆರಂಭಿಸಿದ್ದು, ಕಲ್ಯಾಣ ತೊಟ್ಟಿಯಲ್ಲಿ ಆನೆ, ಕುದುರೆ, ಒಂಟೆ, ಹಸುಗಳಿಗೆ ಪೂಜೆ ಸಲ್ಲಿಸಿದ್ದಾರೆ. ರಾಜ ಮನೆತನದವರು ಬಳಸುವ ಆಯುಧಗಳಿಗೂ ಪೂಜೆ ಸಲ್ಲಿಸಲಿದ್ದಾರೆ.
ನಂತರ ಕಲ್ಯಾಣ ತೊಟ್ಟಿಯಿಂದ ಮೆರವಣಿಗೆಯಲ್ಲಿ ಹೊರಟು ಕನ್ನಡಾಂಬೆ ದೇವಾಲಯದ ಆವರಣದಲ್ಲಿರುವ ಶನಿ ವೃಕ್ಷಕ್ಕೆ ಪೂಜೆ ಸಲ್ಲಿಸುವ ಮೂಲಕ ಆಯುಧ ಪೂಜೆ ಪೂರ್ಣಗೊಳ್ಳಲಿದೆ.

ಸಂಜೆ ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ನಲ್ಲಿ ರತ್ನ ಖಚಿತ ಸಿಂಹಾಸನಕ್ಕೆ ಅಳವಡಿಸಿರುವ ಸಿಂಹಗಳನ್ನು ವಿಸರ್ಜನೆ ಮಾಡಿ, ವಾಣಿ ವಿಲಾಸ ದೇವರ ಮನೆಯಲ್ಲಿ ಯದುವೀರ್ ಕಂಕಣ ವಿಸರ್ಜನೆ ಮಾಡಲಿದ್ದು ಇಂದಿನ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.
ಅಂದಹಾಗೆ ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ರಾತ್ರಿ ಕಾಳರಾತ್ರಿ ಪೂಜೆ ನೆರವೇರಿಸಿದರು. ದುರ್ಗಾಷ್ಟಮಿ ಅಂಗವಾಗಿ ರಾತ್ರಿ 8 ರ ಸುಮಾರಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು. ನವರಾತ್ರಿ ಪೂಜಾ ಕೈಂಕರ್ಯಗಳಲ್ಲಿ ಕಾಳರಾತ್ರಿ ಪೂಜಾ ಪ್ರಧಾನವಾದ ಆಚರಣೆಯಾಗಿದೆ.

ಸಂಜೆ ದರ್ಬಾರ್ ನಂತರ ಕನ್ನಡಿ ತೊಟ್ಟಿಯಲ್ಲಿ ಕಾಳರಾತ್ರಿ ಪೂಜೆ, ಮಹಿಷಾಸುರನ ಸಂಹಾರ ನಡೆಯಿತು.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications