ಮೈಸೂರು ಮುಡಾ ಅಧ್ಯಕ್ಷರಾಗಿ ಯಶಸ್ವಿ ಸೋಮಶೇಖರ್ ನೇಮಕ
ಮೈಸೂರು, ಡಿಸೆಂಬರ್ 21: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನೂತನ ಅಧ್ಯಕ್ಷರಾಗಿ ಯಶಸ್ವಿ ಸೋಮಶೇಖರ್ ಅವರು ನೇಮಕವಾಗಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಶಿಫಾರಸ್ಸು ಮಾಡಿದ್ದು, ಈ ಸಂಬಂಧ ಕರ್ನಾಟಕ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯಾದ ಸತೀಶ್ ಕಬಾಡಿ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಬುಧವಾರ ಡಿಸೆಂಬರ್ 21ರಂದು ಬೆಳಗ್ಗೆ 11 ಗಂಟೆಗೆ ಮುಡಾ ಕಚೇರಿಯಲ್ಲಿ ಯಶಸ್ವಿ ಸೋಮಶೇಖರ್ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕರ್ನಾಟಕ ವಿಧಾನಸಭೆಯ ಅವಧಿ ಮುಗಿಯಲು ಇನ್ನು ಕೆಲವೇ ತಿಂಗಳು ಬಾಕಿ ಇರುವಾಗಲೇ ಈ ನೇಮಕಾತಿ ನಡೆದಿದೆ.

ಕಳೆದ ಜುಲೈನಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಎಚ್ವಿ ರಾಜೀವ್ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿತ್ತು. ಅಂದಿನಿಂದ ಹೊಸಬರನ್ನು ನೇಮಕ ಮಾಡಿರಲಿಲ್ಲ. ಯಶಸ್ವಿ ಸೋಮಶೇಖರ್ ಹಾಗೂ ಎಚ್ವಿ ರಾಜೀವ್ ಸೇರಿ ಅನೇಕ ಮಂದಿ ಹಿರಿಯ ಕಾರ್ಯಕರ್ತರು ಅಧ್ಯಕ್ಷ ಸ್ಥಾನಕ್ಕೆ ಭಾರೀ ಲಾಬಿ ನಡೆಸಿದ್ದರು. ಆದರೆ ಅಂತಿಮವಾಗಿ ಯಶಸ್ವಿ ಅವರಿಗೆ ಈ ಹುದ್ದೆ ಒಲಿದು ಬಂದಿದೆ.
ಯಶಸ್ವಿ ಸೋಮಶೇಖರ್ ಅವರಿಗೆ ಅಧ್ಯಕ್ಷಗಾಧಿ ನೀಡುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ಟಿ ಸೋಮಶೇಖರ್ ಅವರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು ಎನ್ನುವ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬಂದಿತ್ತು. ಹಿರಿಯ ನಾಯಕರ ಮಟ್ಟದಲ್ಲಿ ಸ್ಥಳೀಯ ಕಾರ್ಯಕರ್ತರು ದೊಡ್ಡದಾಗಿಯೇ ಲಾಭಿ ಮಾಡಿದ್ದರು. ಸಚಿವ ಎಸ್ಟಿ ಸೋಮಶೇಖರ್ ಅವರು ಕೂಡ ಹಿಂದಿನ ಅಧ್ಯಕ್ಷ ಎಚ್ವಿ ರಾಜೀವ್ ಅವರಿಗೆ ಮತ್ತೊಮ್ಮೆ ಅಧ್ಯಕ್ಷರನ್ನಾಗಿ ಮಾಡಲು ತೆರೆ ಹಿಂದೆ ಪ್ರಯತ್ನ ಮಾಡಿದ್ದರು ಎನ್ನಲಾಗಿದೆ.
ಇನ್ನೇನು ಕೆಲವೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪಕ್ಷ ಸಂಘಟನೆ ದೃಷ್ಟಿಯಿಂದ ಕಾರ್ಯಕರ್ತರಿಗೆ ಪ್ರಾತಿನಿಧ್ಯ ನೀಡಲಾಗಿದೆ ಎನ್ನಲಾಗುತ್ತಿದೆ. ಈಗ ಯಶಸ್ವಿ ಸೋಮಶೇಖರ್ ಆಯ್ಕೆಯು ಮೈಸೂರ ಭಾಗದ ಒಕ್ಕಲಿಗ ಸಮುದಾಯಕ್ಕೆ ಬೆಣ್ಣೆ ಸವರುವ ಪ್ರಯತ್ನವಾಗಿದೆ ಎಂಬ ಚರ್ಚೆ ಕೇಳಿಬಂದಿದೆ. ಈ ಮೂಲಕ ಒಕ್ಕಲಿಗ ಸಮುದಾಯದವರ ಮತಗಳನ್ನು ಪಡೆಯಲು ಮಾಡುವ ಪ್ರಯತ್ನವಾಗಿದೆ ಎಂದು ಕರೆಯಲಾಗಿದೆ.
ಇನ್ನೇನು ಕೆಲವೇ ತಿಂಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತದೆ. ಹೀಗಾಗಿ ಬಿಜೆಪಿ ಪಕ್ಷದಲ್ಲಿ ಭಿನ್ನಮತ ಸ್ಟೋಟವಾಗುವ ಲಕ್ಷಣಗಳು ಇವೆ. ಹೀಗಾಗಿ ಯಶಸ್ವಿ ಸೋಮಶೇಖರ್ ಅವರ ನೇಮಕದಿಂದ ಇದು ನಿಯಂತ್ರಣವಾಗಲಿದೆ ಎಂಬ ಲೆಕ್ಕಾಚಾರ ಇದಾಗಿದೆ. ಹೀಗಾಗಿಯೇ ಯಶಸ್ವಿ ಸೋಮಶೇಖರ್ ಅವರಿಗೆ ಅಧ್ಯಕ್ಷ ಪಟ್ಟವನ್ನು ನೀಡಲಾಗಿದೆ. ಆದರೆ ಇನ್ನು ಕೇವಲ ಮೂರು ಅಥವಾ ನಾಲ್ಕು ತಿಂಗಳಷ್ಟೇ ಯಶಸ್ವಿ ಸೋಮಶೇಖರ್ ಅವರು ಅಧ್ಯಕ್ಷರಾಗಿ ಮುಂದುವರಿಯುತ್ತಾರೆ.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ











Click it and Unblock the Notifications