ವರಿಷ್ಠರು ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ: ಡಾ.ಯತೀಂದ್ರ ಸಿದ್ದರಾಮಯ್ಯ
ಮೈಸೂರು, ಜುಲೈ 5: ಈ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ತಂದೆ ಸಿದ್ದರಾಮಯ್ಯ ಅವರಿಗಾಗಿ ವರುಣ ಕ್ಷೇತ್ರವನ್ನು ತ್ಯಾಗ ಮಾಡಿದ್ದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಮಾತನಾಡಿದ್ದು, ಇದೀಗ ಪಕ್ಷದ ವರಿಷ್ಠರು ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ಬೆಂಬಲಿಗರ ಒತ್ತಾಯದ ಬಗ್ಗೆ ಇಂದು(ಜುಲೈ 5)ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನಾನಾಗಲಿ ತಂದೆಯವರಾಗಲಿ ಚರ್ಚೆ ನಡೆಸಿಲ್ಲ. ಪಕ್ಷ ಸೂಚಿಸಿದರೆ ಆದೇಶ ಪಾಲಿಸಲು ಸಿದ್ಧನಿದ್ದೇನೆ. ಲೋಕಸಭಾ ಚುನಾವಣೆಗೆ ಇನ್ನೂ 8 ತಿಂಗಳ ಕಾಲಾವಕಾಶ ಇದೆ. ಚುನಾವಣೆ ಸಮೀಪಿಸುತ್ತಿದ್ದಂತೆ, ಕ್ಷೇತ್ರದಿಂದ ಪಕ್ಷಕ್ಕೆ ಯಾರು ಸೂಕ್ತ ಅಭ್ಯರ್ಥಿ ಎಂದು ಗೊತ್ತಾಗಲಿದೆ ಎಂದು ಹೇಳಿದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು. ಆದ್ದರಿಂದ ಪಕ್ಷದಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುತ್ತೇವೆ. ಒಂದು ವೇಳೆ ನಾನು ಸ್ಪರ್ಧೆ ಮಾಡಬೇಕು ಎಂದು ಪಕ್ಷ ಸೂಚನೆ ನೀಡಿದರೆ ಪಾಲನೆ ಮಾಡಬೇಕಾಗುತ್ತದೆ ಎಂದರು.
ಇನ್ನು ಪಕ್ಷದಲ್ಲಿ ಸ್ಥಾನಮಾನ ನೀಡುವ ಬಗ್ಗೆಯೂ ಕೂಡ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ್ದಾರೆ. ತಂದೆಯವರು ಮುಖ್ಯಮಂತ್ರಿ ಆಗಿರುವ ಕಾರಣ ಕ್ಷೇತ್ರದ ಜನರಿಗೆ ಹೆಚ್ಚು ಸಮಯ ಕೊಡಲಾಗುತ್ತಿಲ್ಲ. ವರುಣ ಕ್ಷೇತ್ರದ ಜನರ ಸಮಸ್ಯೆಯನ್ನು ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಅಧಿಕಾರಿಗಳಿಗೆ ಹೇಳಿ ಜನರ ಸಣ್ಣ ಪುಟ್ಟ ಸಮಸ್ಯೆ ಬಗೆಹರಿಸಲು ಸರ್ಕಾರಿ ಸ್ಥಾನಮಾನ ಇರಬೇಕು. ನನಗೆ ಯಾವುದಾದರು ಚಿಕ್ಕದಾದ ಸ್ಥಾನಮಾನ ನೀಡಿದರೆ ಸಹಕಾರಿ ಆಗುತ್ತದೆ. ಕಳೆದ ಬಾರಿಯಂತೆ ಸಣ್ಣ ಹುದ್ದೆ ನೀಡಿದರು ನಾನು ಉತ್ತಮವಾಗಿ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications