ವಿಡಿಯೋ; ಹೊಸ ವರ್ಷದಂದು ಭಕ್ತರಿಗೆ ಹಂಚಲು 2.5 ಲಕ್ಷ ಲಡ್ಡು ತಯಾರಿ
ಮೈಸೂರು, ಡಿಸೆಂಬರ್ 26; ಹೊಸ ವರ್ಷದ ಸಂಭ್ರಮವನ್ನು ಸಿಹಿ ಹಂಚುವ ಮೂಲಕ ಸ್ವಾಗತಿಸುವುದು ವಾಡಿಕೆ. ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ತಿರುಪತಿ ಮಾದರಿಯ ಲಡ್ಡು ವಿತರಿಸುವ ಮೂಲಕ ಹೊಸ ವರ್ಷವನ್ನ ಸ್ವಾಗತಿಸುವ ಸಂಪ್ರದಾಯ ಬೆಳೆದು ಬಂದಿದೆ.
ಈ ವರ್ಷವೂ ಸಹ ಭಕ್ತರಿಗೆ ಲಡ್ಡು ವಿತರಿಸುವ ಮೂಲಕ ಹೊಸ ವರ್ಷ ಸ್ವಾಗತಿಸಲು ದೇವಸ್ಥಾನದ ಆಡಳಿತ ಮಂಡಳಿ ಸಜ್ಜಾಗುತ್ತಿದೆ. ಹೊಸ ವರ್ಷದ ಮೊದಲ ದಿನ ಭಕ್ತರಿಗೆ ಲಡ್ಡು ವಿತರಿಸಲು ತಯಾರಿ ನಡೆಯುತ್ತಿದೆ. ಈ ಬಾರಿ 2.5 ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಿಸಲು ಉದ್ದೇಶಿಸಿದ್ದು ಲಡ್ಡು ತಯಾರಿ ಭರದಿಂದ ಸಾಗುತ್ತಿದೆ.
ದೇವಸ್ಥಾನದ ಆವರಣದಲ್ಲಿ 60ಕ್ಕೂ ಹೆಚ್ಚು ಬಾಣಸಿಗರು ಲಡ್ಡು ತಯಾರಿಯಲ್ಲಿ ನಿರತರಾಗಿದ್ದಾರೆ. 2 ಕೆಜಿ ತೂಕದ 10,000 ಲಡ್ಡು, 200 ಗ್ರಾಂ ತೂಕದ 2.5 ಲಕ್ಷ ಲಡ್ಡು ತಯಾರಿ ಕಾರ್ಯ ಭರದಿಂದ ಸಾಗುತ್ತಿದೆ. ಲಡ್ಡು ತಯಾರಿಕೆಗಾಗಿ 50 ಕ್ವಿಂಟಾಲ್ ಕಡ್ಲೆ ಹಿಟ್ಟು,100 ಕ್ವಿಂಟಾಲ್ ಸಕ್ಕರೆ, 4000 ಲೀಟರ್ ಖಾದ್ಯ ತೈಲ, 200 ಕೆಜಿ ಗೋಡಂಬಿ, 200 ಕೆಜಿ ಒಣದ್ರಾಕ್ಷಿ, 100 ಕೆಜಿ ಬಾದಾಮಿ, 200 ಕೆಜಿ ಡ್ರೈ ಫ್ರೂಟ್ಸ್, 500 ಕೆಜಿ ಬೂರಾ ಸಕ್ಕರೆ, 100 ಕೆಜಿ ಪಿಸ್ತಾ, 20 ಕೆಜಿ ಏಲಕ್ಕಿ, 20 ಕೆಜಿ ಜಾಕಾಯಿ ಜಾಪತ್ರೆ, 100 ಕೆಜಿ ಲವಂಗ ಹಾಗೂ 5 ಕೆಜಿ ಪಚ್ಚ ಕರ್ಪೂರ ಬಳಕೆಯಾಗಲಿದೆ.

ಡಿಸೆಂಬರ್ 20ರಿಂದ ಆರಂಭವಾದ ಲಡ್ಡು ತಯಾರಿಕಾ ಕಾರ್ಯ ಡಿಸೆಂಬರ್ 31ರವರಗೆ ನಡೆಯಲಿದೆ. ಹೊಸ ವರ್ಷದ ದಿನ ಬೆಳಗ್ಗೆ 4 ಗಂಟೆಗೆ ಯೋಗಾ ನರಸಿಂಹಸ್ವಾಮಿಗೆ ಅಭಿಷೇಕ ಹಾಗೂ ವಿಶೇಷ ಪೂಜೆ ನಂತರ ಭಕ್ತರಿಗೆ ಲಡ್ಡು ಪ್ರಸಾದ ವಿತರಣೆ ಮಾಡಲಾಗುತ್ತದೆ.
ಲೋಕ ಕಲ್ಯಾಣಾರ್ಥವಾಗಿ, ಯಾವುದೇ ಜಾತಿ ಮತ ಭೇಧವಿಲ್ಲದೆ ಸರ್ವಧರ್ಮ ಸಮನ್ವಯತೆಗಾಗಿ ಪ್ರಾರ್ಥಿಸಿ ಭಕ್ತರಿಗೆ ಲಡ್ಡು ಪ್ರಸಾದ ವಿತರಣೆ ಮಾಡಲಾಗುತ್ತದೆ. ಅಂದು ಪ್ರೊ. ಭಾಷ್ಯಂ ಸ್ವಾಮೀಜಿಯವರು ಹಾಗೂ ಶ್ರೀನಿವಾಸ ಅವರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಲಿದೆ. ಪ್ರೊ. ಭಾಷ್ಯಂ ಸ್ವಾಮೀಜಿಯವರು ಭಕ್ತರಿಗೆ ಲಡ್ಡು ವಿತರಿಸಿ ಆಶೀರ್ವದಿಸಲಿದ್ದಾರೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications