ಪಕ್ಕದಲ್ಲೇ ಕುಳಿತಿದ್ದರೂ ಮುಖವನ್ನೇ ನೋಡದ ಬಿಎಸ್ವೈ
ಮೈಸೂರು, ಮೇ 7: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕರಾದ ಈಶ್ವರಪ್ಪ ಅವರ ನಡುವಿನ ಮನಸ್ತಾಪ, ಶನಿವಾರ ಆರಂಭವಾದ ಬಿಜೆಪಿ ಕಾರ್ಯಕಾರಿಣಿಯಲ್ಲೂ ಪ್ರತಿಫಲಿಸಿತು.
ನಗರದ ರಾಜೇಂದ್ರ ಕಲಾಮಂದಿರದಲ್ಲಿ ಬೆಳಗ್ಗೆ ಸುಮಾರು 10: 30ಕ್ಕೆ ಆರಂಭವಾದ ಕಾರ್ಯಕಾರಿಣಿಯಲ್ಲಿ ಇಬ್ಬರೂ ನಾಯಕರು ಅಕ್ಕಪಕ್ಕದಲ್ಲೇ ಕುಳಿತಿದ್ದರೂ ಪರಸ್ಪರ ಮಾತನಾಡಲಿಲ್ಲ.

ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಆಗಮಿಸಿದ ಈಶ್ವರಪ್ಪ, ಯಡಿಯೂರಪ್ಪ ಅವರಿಗೆ ನಮಸ್ಕರಿಸಿದರೂ, ಯಡಿಯೂರಪ್ಪ ಕ್ಯಾರೇ ಅನ್ನಲಿಲ್ಲ. ಆನಂತರ, ಈಶ್ವರಪ್ಪ ಕೂಡ ಸುಮ್ಮನೇ ಕುಳಿತುಕೊಂಡರು. ಎಲ್ಲರ ಗಮನ ಈ ಇಬ್ಬರ ನಾಯಕರ ಮೇಲೇ ನೆಟ್ಟಿತ್ತು.
ರಾಜ್ಯಸಭೆ ಸದಸ್ಯತ್ವ ಬೇಡ: ಶ್ರೀನಿವಾಸ್ ಪ್ರಸಾದ್
ಇನ್ನು, ಇತ್ತೀಚೆಗಷ್ಟೇ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ವಿ.ಶ್ರೀನಿವಾಸ ಪ್ರಸಾದ್ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸಿದರು. ಬಿಜೆಪಿ ಸೇರಿದ ಮೇಲೆ, ಉಪಾಧ್ಯಕ್ಷನಾದ ತರುವಾಯ ಇದು ನಾನು ಪಾಲ್ಗೊಳ್ಳುತ್ತಿರುವ ಮೊದಲ ಕಾರ್ಯಕಾರಣಿ ಸಭೆ ಎಂದು ಅವರು ತಿಳಿಸಿದರು.
''ವರಿಷ್ಠರು ಉತ್ತಮ ಸ್ಥಾನ ನೀಡುವ ಕುರಿತು ಮಾತನಾಡಿದ್ದಾರೆ. ಆದರೆ ನನಗೆ ರಾಜ್ಯಸಭಾ ಸದಸ್ಯ ಸ್ಥಾನದ ಬಗ್ಗೆ ಆಸಕ್ತಿ ಇಲ್ಲ. ಅದರ ಅವಶ್ಯಕತೆಯೂ ಇಲ್ಲ. ನಾನು ದೆಹಲಿಯಲ್ಲಿ 25 ವರ್ಷಗಳ ಕಾಲ ರಾಜಕಾರಣ ಮಾಡಿದ್ದೇನೆ. ಸಕ್ರಿಯವಾಗಿ ರಾಜಕಾರಣದಲ್ಲಿದ್ದು ಪಕ್ಷ ಸಂಘಟನೆ ಮಾಡುತ್ತೇನೆ'' ಎಂದರು.
ಪಕ್ಷದಲ್ಲಿ ನಾಯಕರ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ವರಿಷ್ಠರ ಗಮನದಲ್ಲಿ ಇದೆ. ಅವರು ಎಲ್ಲವನ್ನೂ ಸರಿ ಮಾಡುತ್ತಾರೆ ಎಂದು ತಿಳಿಸಿದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications