ಮೈಸೂರು : ಯಶಸ್ವಿನಿ ಯೋಜನೆಗೆ ಆ.31ರ ತನಕ ಹೆಸರು ಸೇರಿಸಿ
ಮೈಸೂರು, ಆ.4 : ಜಿಲ್ಲೆಯಲ್ಲಿ ಯಶಸ್ವಿನಿ ಸಹಕಾರಿ ರೈತರ/ ನಗರ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನಾಗಿ ನೋಂದಾಯಿಸಲು ಮತ್ತು ನವೀಕರಿಸುವ ಅವಧಿಯನ್ನು ಆಗಸ್ಟ್ 31ರ ತನಕ ವಿಸ್ತರಣೆ ಮಾಡಲಾಗಿದೆ.
ಸಹಕಾರ ಸಂಘಗಳ ಉಪನಿಬಂಧಕ ಡಾ.ಉಮೇಶ ಜಿ. ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.'
'ಈಗಾಗಲೇ ಸಹಕಾರ ಸಂಘಗಳಲ್ಲಿ ಸದಸ್ಯರಾಗಿ 3 ತಿಂಗಳು ಕಳೆದಿರುವವರು ಸದಸ್ಯರಾಗಿ ನೋಂದಾಯಿಸಿಕೊಂಡು ಪ್ರಯೋಜನ ಪಡೆದುಕೊಳ್ಳಬಹುದಾಗಿದೆ' ಎಂದು ಹೇಳಿದ್ದಾರೆ.

ಕಾರ್ಯನಿರತ ಎಲ್ಲಾ ವಿಧದ ಸಹಕಾರ ಸಂಘಗಳಲ್ಲಿ ಹಾಗೂ ಬ್ಯಾಂಕುಗಳಲ್ಲಿ ಸದಸ್ಯರಾಗಿರುವವರು ಮತ್ತು ಅವರ ಕುಟುಂಬದವರು, ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರು ಹಾಗೂ ಲೈಂಗಿಕ ಅಲ್ಪಸಂಖ್ಯಾತರು ಯೋಜನೆಯಡಿ ಸದಸ್ಯರಾಗಿ ಪ್ರಯೋಜನ ಪಡೆಯಬಹುದು.
ಮುಖ್ಯ ಅರ್ಜಿದಾರನು ತನ್ನ ಕುಟುಂಬದ ಎಲ್ಲ ಅರ್ಹ ಸದಸ್ಯರನ್ನು ಯಶಸ್ವಿನಿ ಸದಸ್ಯರನ್ನಾಗಿ ನೋಂದಣಿ ಮಾಡಬಹುದು.ನವಜಾತ ಶಿಶುವಿನಿಂದು ಹಿಡಿದು ಜೀವಿತಾವಧಿಯವರೆಗೆ ಸದಸ್ಯತ್ವ ಪಡೆದಿರುವವರು ಪ್ರಯೋಜನ ಪಡೆಯಬಹುದು.
ಒಂದೇ ಕುಟುಂಬದ 5 ಅಥವಾ 5 ಕ್ಕಿಂತ ಹೆಚ್ಚಿನ ಸದಸ್ಯರು ನೋಂದಾವಣಿ ಮಾಡಿದಲ್ಲಿ ಶೇ.15 ರಷ್ಟು ರಿಯಾಯಿತಿ ಪಡೆಯಬಹುದಾಗಿದೆ. ಯೋಜನೆಯಡಿ ಉಚಿತ ಶಸ್ತ್ರಚಿಕಿತ್ಸೆ ಸೌಲಭ್ಯ ಪಡೆಯುವ ಅವಧಿಯು ಜೂನ್ 01 ರಿಂದ ಮೇ 31ರ ತನಕ ಇರುತ್ತದೆ.
ರೈತ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆ : ಗ್ರಾಮೀಣ ಭಾಗದ ಸಹಕಾರಿ ರೈತರ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ 2003-04ನೇ ಸಾಲಿನಲ್ಲಿ ಯಶಸ್ವಿನಿ ಸಹಕಾರಿ ರೈತ ಆರೋಗ್ಯ ರಕ್ಷಣಾ ಯೋಜನೆ ಕಾರ್ಯಕ್ರಮವನ್ನು ಸಹಕಾರ ಇಲಾಖೆ ವತಿಯಿಂದ ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ.
ನಗರ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆ : ನಗರ ಪ್ರದೇಶದ ಜನರೂ ಕೂಡ ಹೆಚ್ಚಿನ ಒತ್ತಡದಲ್ಲಿ ಕೆಲಸಕಾರ್ಯಗಳನ್ನು ನಿರ್ವಹಿಸುತ್ತಿದ್ದು ಅನಾರೋಗ್ಯದಿಂದ ಹೆಚ್ಚಿನ ಜನರು ತೊಂದರೆ ಅನುಭವಿಸುತ್ತಿದ್ದನ್ನು ಮನಗಂಡ ಸರ್ಕಾರವು ಸಹಕಾರ ಇಲಾಖಾ ವತಿಯಿಂದ ನಗರ ಯಶಸ್ವಿನಿ ಯೋಜನೆಯನ್ನು 2014-15ನೇ ಸಾಲಿನಲ್ಲಿ ಅನುಷ್ಟಾನಗೊಳಿಸಿದೆ.
ಪ್ರತಿ ಸದಸ್ಯರು ರೂ.710 ವತಿಸಿ ಯೋಜನೆಯಡಿ ಸದಸ್ಯರಾಗಬಹುದು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರು ರೂ.110 ಪಾವತಿ ಮಾಡಬೇಕು. ರಾಜ್ಯಾದ್ಯಂತ ಯಶಸ್ವಿನಿ ಟ್ರಸ್ಟ್ ನಿಂದ ಗುರುತಿಸಲ್ಪಟ್ಟ 65ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ 823 ಶಸ್ತ್ರ ಚಿಕಿತ್ಸೆಗಳನ್ನು ನಗದು ರಹಿತವಾಗಿ ಪಡೆಯಬಹುದಾಗಿರುತ್ತದೆ. ಹೃದಯ ಚಿಕಿತ್ಸೆ, ಕಿಡ್ನಿ ಚಿಕಿತ್ಸೆ ಹಾಗೂ ಬ್ರೈನ್ ಹ್ಯಾಮರೇಜ್ ಚಿಕಿತ್ಸೆ ಪ್ರಮುಖವಾಗಿವೆ.
-
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
ಕಣ್ಣು ಸಮಸ್ಯೆಗಳು ಹೆಚ್ಚುತ್ತಿವೆಯೇ? ಈ ಆಹಾರಗಳು ನಿಮ್ಮ ದೃಷ್ಟಿಯನ್ನು ರಕ್ಷಿಸುತ್ತವೆ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Powerful Vastu Plants: ಮನೆಗೆ ಪಾಸಿಟಿವ್ ಎನರ್ಜಿ ಬೇಕಾ? ಈ ಸಸ್ಯಗಳನ್ನು ಇಡಿ, ಜೀವನವೇ ಬದಲಾಗುತ್ತದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ












Click it and Unblock the Notifications