ಮೈಸೂರು: ಯೋಗ ದಿನಾಚರಣೆ ಕಾರ್ಯಕ್ರಮ ಬೇರೆಡೆಗೆ ಶಿಫ್ಟ್
ಮೈಸೂರು, ಜೂನ್ 14 : ಜೂನ್ 21ರಂದು 3ನೇ ಅರಮನೆಯ ಮುಂಭಾಗ ನಡೆಸಲು ತೀರ್ಮಾನಿಸಲಾಗಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸ್ಥಳಾಂತರಿಸಲಾಗಿದೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜೂನ್ 21ರಂದು 3ನೇ ಅರಮನೆಯ ಮುಂಭಾಗ ನಡೆಸಲು ತೀರ್ಮಾನಿಸಲಾಗಿದ್ದ ಕಾರ್ಯಕ್ರಮವನ್ನು ರೇಸ್ ಕೋರ್ಸ್ ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಈ ಮೊದಲು ಮೈಸೂರು ಅರಮನೆ, ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಕೃಷ್ಣರಾಜೇಂದ್ರ ವೃತ್ತ, ದೇವರಾಜ್ ಅರಸು ರಸ್ತೆ, ಮಹಾರಾಣಿ ಕಾಲೇಜು ವೃತ್ತ, ರಾಮಸ್ವಾಮಿ ವೃತ್ತ, ಮಹಾರಾಜ ಕಾಲೇಜು ಮೈದಾನ ಒವೆಲ್ ಮೈದಾನಗಳಲ್ಲಿ ಆಯೋಜಿಸಲು ಯೋಜನೆ ರೂಪಿಸಲಾಗಿತ್ತು.
ಸಿಂಗಲ್ ವೆನ್ಯೂ ಕೆಟಗರಿಯಲ್ಲಿ ಲಾರ್ಜೆಸ್ಟ್ ಯೋಗ ಕ್ಲಾಸ್ ದಾಖಲೆ ನಿರ್ಮಿಸಲು ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್ ಗೆ ನೋಂದಣಿ ಮಾಡಿಕೊಳ್ಳಲಾಗಿತ್ತು.
ಈ ಹಿಂದೆ ನಿಗದಿಪಡಿಸಿದ್ದ ಸ್ಥಳವನ್ನು ತಾಂತ್ರಿಕವಾಗಿ ಪರಿಗಣಿಸಲು ಸಾಧ್ಯವಿಲ್ಲದ ಹಿನ್ನೆಲೆಯಲ್ಲಿ ಒಂದೇ ಕಡೆ ಯೋಗ ಪ್ರದರ್ಶನ ರೇಸ್ ಕೋರ್ಸ್ ನಲ್ಲಿ ನಡೆಯಲಿದೆ.
ಗಿನ್ನಿಸ್ ಸಂಸ್ಥೆಯವರು ತಿಳಿಸಿದ ಹಿನ್ನೆಲೆ 139.30ಎಕರೆ ವಿಸ್ತೀರ್ಣವಿರುವ ರೇಸ್ ಕೋರ್ಸ್ ನಲ್ಲಿ ಮಧ್ಯಭಾಗದ ಪ್ರದೇಶವನ್ನು ಪ್ರದರ್ಶನಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ.
ಇನ್ನು ಕಾರ್ಯಕ್ರಮಕ್ಕೆ ಯೋಗಪಟು ಖುಷಿ, ಮೈಸೂರು ಸ್ವಚ್ಛತಾ ಅಭಿಯಾನದ ರಾಯಭಾರಿ ಜಾವಗಲ್ ಶ್ರೀನಾಥ್ ಪಾಲ್ಗೊಳ್ಳಲಿದ್ದಾರೆ.
ಇನ್ನು ಪಾರ್ಕಿಂಗ್ ವ್ಯವಸ್ಥೆಯನ್ನು ವಸ್ತು ಪ್ರದರ್ಶನ ಪ್ರಾಧಿಕಾರ, ಮೃಗಾಲಯದ ಪಾರ್ಕಿಂಗ್ ಆವರಣ, ಕಾರಂಜಿಕೆರೆ ಪಾರ್ಕಿಂಗ್ ಆವರಣ ಸೇರಿದಂತೆ ಹಲವು ಜಾಗಗಳನ್ನು ಗುರುತಿಸಲಾಗಿದೆ ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications