ರಥಸಪ್ತಮಿ ಪ್ರಯುಕ್ತ ಮೈಸೂರಿನಲ್ಲಿ ಸೂರ್ಯ ನಮಸ್ಕಾರ
ರಥಸಪ್ತಮಿ ಪ್ರಯುಕ್ತ ಮೈಸೂರಿನ ಯೋಗ ಒಕ್ಕೂಟದ ವತಿಯಿಂದ ನಗರದ ಕೋಟೆ ಆಂಜನೇಯ ದೇವಾಸ್ಥಾನದ ಮುಂಭಾಗ ಭಾನುವಾರ ಬೆಳಿಗ್ಗೆ ಸೂರ್ಯ ನಮಸ್ಕಾರ ಮತ್ತು ಸರ್ವೋದಯ ಟ್ರಸ್ಟ್ ವತಿಯಿಂದ ನಮ್ಮ ಮೈಸೂರು ಹಾಗೂ ಆರೋಗ್ಯಕ್ಕಾಗಿ ಓಟ.
ಮೈಸೂರು, ಫೆಬ್ರವರಿ 5 : ರಥಸಪ್ತಮಿ ಪ್ರಯುಕ್ತ ಮೈಸೂರಿನ ಯೋಗ ಒಕ್ಕೂಟದ ವತಿಯಿಂದ ನಗರದ ಕೋಟೆ ಆಂಜನೇಯ ದೇವಾಸ್ಥಾನದ ಮುಂಭಾಗ ಭಾನುವಾರ ಬೆಳಿಗ್ಗೆ ಸೂರ್ಯ ನಮಸ್ಕಾರ ಆಯೋಜಿಸಲಾಗಿತ್ತು.
ಇದರಲ್ಲಿ ಐನೂರಕ್ಕೂ ಅಧಿಕ ಜನರು ಪಾಲ್ಗೊಂಡು ಸೂರ್ಯದೇವರಿಗೆ ದೀರ್ಘದಂಡ ಪ್ರಣಾಮ ಮಾಡಿದರು. ಈ ಸೂರ್ಯ ನಮಸ್ಕಾರದಲ್ಲಿ ಪಾಲ್ಗೊಂಡ ಮಹಾನಗರಪಾಲಿಕೆ ಆಯುಕ್ತ ಜೆ.ಜಗದೀಶ್ ಮಾತನಾಡಿ, ಯೋಗ ಕೆಲವರಿಗೆ ಮಾತ್ರ ಸೀಮಿತ ಎಂದು ತಿಳಿದುಕೊಂಡಿರುತ್ತಾರೆ.
ಆದರೆ, ಯೋಗವನ್ನು ಮಾಡುವುದರಿಂದ ದೇಹದ ಆರೋಗ್ಯ ಸ್ಥಿತಿ ಸುಧಾರಣೆಯಲ್ಲಿರುತ್ತದೆ.ಇತ್ತೀಚಿನ ದಿನಗಳಲ್ಲಿ ಎಲ್ಲರೂ ಯೋಗದ ಕುರಿತು ಆಸಕ್ತಿ ಬೆಳೆಸಿಕೊಂಡಿದ್ದಾರೆ. ಇದು ನಿಜಕ್ಕೂ ಶ್ಲಾಘನೀಯ. ಸೂರ್ಯ ನಮಸ್ಕಾರ ದೇಹಕ್ಕೆ ಒಳ್ಳೆಯದು ಎಂದರು.

ಸುಮಾರು ಒಂದೂವರೆ ಗಂಟೆಗಳ ಕಾಲ ಸೂರ್ಯ ನಮಸ್ಕಾರ ನಡೆಯಿತು. ಈ ಸೂರ್ಯ ನಮಸ್ಕಾರದಲ್ಲಿ ಪಾಲ್ಗೊಂಡವರು ಎಲ್ಲವನ್ನೂ ಮರೆತು ಒತ್ತಡದ ಬದುಕಿನಿಂದ ಹೊರಬಂದು ಮನಸ್ಸನ್ನು ಪ್ರಶಾಂತಗೊಳಿಸಿಕೊಂಡರು.

ಆರೋಗ್ಯಕ್ಕಾಗಿ ಓಟ: ಇನ್ನು ಇದೇ ವೇಳೆ ಸರ್ವೋದಯ ಟ್ರಸ್ಟ್ ಮತ್ತು ಕೊಲಂಬಿಯಾ ಏಷ್ಯಾ ಆಸ್ಪತ್ರೆ ವತಿಯಿಂದ ನಮ್ಮ ಮೈಸೂರು ಹಾಗೂ ಆರೋಗ್ಯಕ್ಕಾಗಿ ಓಟವನ್ನು ಆಯೋಜಿಸಲಾಗಿತ್ತು.
ಮೈಸೂರಿನ ಓವೆಲ್ ಮೈದಾನದಿಂದ ಓಟಕ್ಕೆ ಚಾಲನೆ ನೀಡಲಾಗಿದ್ದು, ಸಾವಿರಕ್ಕೂ ಹೆಚ್ಚುಮಂದಿ ಓಟದಲ್ಲಿ ಪಾಲ್ಗೊಂಡಿದ್ದರು. ಈ ಓಟದಲ್ಲಿ ಎಲ್ಲ ವಯೋಮಾನದವರೂ ಪಾಲ್ಗೊಂಡಿದ್ದರು.
ಓಟದಲ್ಲಿ ಬೇಗ ಕ್ರಮಿಸಿದವರಿಗೆ ಬಹುಮಾನವನ್ನು ವಿತರಿಸಲಾಯಿತು.
-
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು












Click it and Unblock the Notifications